AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸಮಯದಲ್ಲಿ ಪ್ರಥಮ್​ ಕೆಲಸ ನೋಡಿ ಮಂಡ್ಯದಿಂದ ಫುಡ್​​ ಕಿಟ್​ ಕಳುಹಿಸಿಕೊಟ್ಟ ಶಾಸಕ ಪುಟ್ಟರಾಜು

ನಟ ಭಯಂಕರ ಸಿನಿಮಾಗಾಗಿ ಶ್ರಮಿಸಿದ ಎಲ್ಲಾ ಕಾರ್ಮಿಕರನ್ನು ಮನೆಗೆ ಕರೆಸಿ ಅತ್ಯುತ್ತಮ ಗುಣಮಟ್ಟದ ಆಹಾರದ ಕಿಟ್, ಐಸೋಲೇಷನ್​ ಕಿಟ್ ನೀಡುವ ಕೆಲಸವನ್ನು ಪ್ರಥಮ್​ ಮಾಡಿದ್ದರು​. ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಕೊವಿಡ್​ ಸಮಯದಲ್ಲಿ ಪ್ರಥಮ್​ ಕೆಲಸ ನೋಡಿ ಮಂಡ್ಯದಿಂದ ಫುಡ್​​ ಕಿಟ್​ ಕಳುಹಿಸಿಕೊಟ್ಟ ಶಾಸಕ ಪುಟ್ಟರಾಜು
Follow us
ರಾಜೇಶ್ ದುಗ್ಗುಮನೆ
|

Updated on: Jun 05, 2021 | 4:34 PM

ಕೊವಿಡ್​ ಸಂಕಷ್ಟ ಕಾಲದಲ್ಲಿ ನಟ ಹಾಗೂ ‘ಕನ್ನಡ ಬಿಗ್​ ಬಾಸ್​ 4’ ವಿನ್ನರ್​ ಪ್ರಥಮ್​ ಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿದ್ದಾರೆ. ತಾವು ನಿರ್ದೇಶಿಸಿ ನಟಿಸಿರುವ ‘ನಟ ಭಯಂಕರ’ ಸಿನಿಮಾ ತಂಡದವರಿಗೆ ಫುಡ್​ ಕಿಟ್​ ನೀಡುವ ಮೂಲಕ ಇತ್ತೀಚೆಗೆ ಅವರು ಸುದ್ದಿಯಾಗಿದ್ದರು. ಈಗ ಅವರಿಗೆ ಸಹಾಯ ಮಾಡೋಕೆ ಮತ್ತಷ್ಟು ಬೆಂಬಲ ಸಿಕ್ಕಿದೆ. ಮಂಡ್ಯ ಶಾಸಕ ಸಿ.ಎಸ್​. ಪುಟ್ಟರಾಜು ಅವರು ಪ್ರಥಮ್​ಗೆ ಫುಡ್​ ಕಿಟ್​ ಕಳುಹಿಸಿ ಕೊಟ್ಟಿದ್ದಾರೆ. ಇದನ್ನು ಪ್ರಥಮ್​ ಅಗತ್ಯವಿರುವರಿಗೆ ಹಂಚುವ ಕೆಲಸ ಮಾಡುತ್ತಿದ್ದಾರೆ.

ನಟ ಭಯಂಕರ ಸಿನಿಮಾಗಾಗಿ ಶ್ರಮಿಸಿದ ಎಲ್ಲಾ ಕಾರ್ಮಿಕರನ್ನು ಮನೆಗೆ ಕರೆಸಿ ಅತ್ಯುತ್ತಮ ಗುಣಮಟ್ಟದ ಆಹಾರದ ಕಿಟ್, ಐಸೋಲೇಷನ್​ ಕಿಟ್ ನೀಡುವ ಕೆಲಸವನ್ನು ಪ್ರಥಮ್​ ಮಾಡಿದ್ದರು​. ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಅಲ್ಲದೆ, ನಾನು ಮಾಡುವ ಕೆಲಸಕ್ಕೆ ಉಪೇಂದ್ರ ಸ್ಫೂರ್ತಿ ಎಂದು ಅವರು ಹೇಳಿಕೊಂಡಿದ್ದರು. ಪ್ರಥಮ್​ ಕೆಲಸ ನೋಡಿ ಮಂಡ್ಯದಿಂದ 110 ಫುಡ್​ ಕಿಟ್​ಗಳನ್ನು ಶಾಸಕ ಪುಟ್ಟರಾಜು ಕಳುಹಿಸಿಕೊಟ್ಟಿದ್ದಾರೆ. ಇದನ್ನು ಕಷ್ಟದಲ್ಲಿರುವವರಿಗೆ ಹಂಚುವ ಕೆಲಸ ಮಾಡಿದ್ದಾರೆ ಪ್ರಥಮ್​.

ಈ ಬಗ್ಗೆ ಮಾತನಾಡಿರುವ ಪ್ರಥಮ್​, ‘ಯಾವುದೇ ನಿರೀಕ್ಷೆ ಇಲ್ಲದೆ ಪುಟ್ಟರಾಜು ಅವರು ನನಗೆ ಫುಡ್​ಕಿಟ್​ ಕಳುಹಿಸಿಕೊಟ್ಟಿದ್ದಾರೆ. ಇದನ್ನು ನಾನು ಕಷ್ಟದಲ್ಲಿರುವವರಿಗೆ ತಲುಪಿಸುತ್ತಿದ್ದೇನೆ. ಸುಮಾರು ರಾಜಕಾರಣಿಗಳು ನಿರೀಕ್ಷೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಾರೆ. ಆದರೆ, ಇವರು ಆ ರೀತಿ ಮಾಡಿಲ್ಲ. ಸಿನಿಮಾಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಆದಾಗ್ಯೂ ಅವರು ಫುಡ್​ ಕಿಟ್​ ಕಳುಹಿಸಿಕೊಟ್ಟಿದ್ದು, ಸಂಕಷ್ಟದಲ್ಲಿರುವವರಿಗೆ ತಲುಪಿಸಲಾಗುತ್ತಿದೆ ಎನ್ನುತ್ತಾರೆ ಪ್ರಥಮ್​.

ಪ್ರಥಮ್​ ನಟ ಭಯಂಕರ ಸಿನಿಮಾ ನಿರ್ದೇಶಿಸಿ ನಟಿಸಿದ್ದಾರೆ. ಈ ಚಿತ್ರ ಆಗಸ್ಟ್​ನಲ್ಲಿ ತೆರೆಗೆ ತರುವ ನಿರೀಕ್ಷೆ ಪ್ರಥಮ್​ ಅವರದ್ದು. ಸಿನಿಮಾ ಮೇಲೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, ಯಶಸ್ಸು ಗಳಿಸಲಿದೆ ಎನ್ನುವ ಆತ್ಮವಿಶ್ವಾಸದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಬೇರೆಯವರ ದುಡ್ಡಲ್ಲಿ ನಾನೇಕೆ ಬಿಲ್ಡಪ್​ ತೆಗೆದುಕೊಳ್ಳಲಿ?’; ಸ್ವಂತ ಖರ್ಚಲ್ಲಿ ‘ನಟ ಭಯಂಕರ’ ಸಿನಿಮಾ ಕಾರ್ಮಿಕರಿಗೆ ಪ್ರಥಮ್​ ಸಹಾಯ

ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!