AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸಮಯದಲ್ಲಿ ಪ್ರಥಮ್​ ಕೆಲಸ ನೋಡಿ ಮಂಡ್ಯದಿಂದ ಫುಡ್​​ ಕಿಟ್​ ಕಳುಹಿಸಿಕೊಟ್ಟ ಶಾಸಕ ಪುಟ್ಟರಾಜು

ನಟ ಭಯಂಕರ ಸಿನಿಮಾಗಾಗಿ ಶ್ರಮಿಸಿದ ಎಲ್ಲಾ ಕಾರ್ಮಿಕರನ್ನು ಮನೆಗೆ ಕರೆಸಿ ಅತ್ಯುತ್ತಮ ಗುಣಮಟ್ಟದ ಆಹಾರದ ಕಿಟ್, ಐಸೋಲೇಷನ್​ ಕಿಟ್ ನೀಡುವ ಕೆಲಸವನ್ನು ಪ್ರಥಮ್​ ಮಾಡಿದ್ದರು​. ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.

ಕೊವಿಡ್​ ಸಮಯದಲ್ಲಿ ಪ್ರಥಮ್​ ಕೆಲಸ ನೋಡಿ ಮಂಡ್ಯದಿಂದ ಫುಡ್​​ ಕಿಟ್​ ಕಳುಹಿಸಿಕೊಟ್ಟ ಶಾಸಕ ಪುಟ್ಟರಾಜು
ರಾಜೇಶ್ ದುಗ್ಗುಮನೆ
|

Updated on: Jun 05, 2021 | 4:34 PM

Share

ಕೊವಿಡ್​ ಸಂಕಷ್ಟ ಕಾಲದಲ್ಲಿ ನಟ ಹಾಗೂ ‘ಕನ್ನಡ ಬಿಗ್​ ಬಾಸ್​ 4’ ವಿನ್ನರ್​ ಪ್ರಥಮ್​ ಕಷ್ಟದಲ್ಲಿರುವವರ ಸಹಾಯಕ್ಕೆ ನಿಂತಿದ್ದಾರೆ. ತಾವು ನಿರ್ದೇಶಿಸಿ ನಟಿಸಿರುವ ‘ನಟ ಭಯಂಕರ’ ಸಿನಿಮಾ ತಂಡದವರಿಗೆ ಫುಡ್​ ಕಿಟ್​ ನೀಡುವ ಮೂಲಕ ಇತ್ತೀಚೆಗೆ ಅವರು ಸುದ್ದಿಯಾಗಿದ್ದರು. ಈಗ ಅವರಿಗೆ ಸಹಾಯ ಮಾಡೋಕೆ ಮತ್ತಷ್ಟು ಬೆಂಬಲ ಸಿಕ್ಕಿದೆ. ಮಂಡ್ಯ ಶಾಸಕ ಸಿ.ಎಸ್​. ಪುಟ್ಟರಾಜು ಅವರು ಪ್ರಥಮ್​ಗೆ ಫುಡ್​ ಕಿಟ್​ ಕಳುಹಿಸಿ ಕೊಟ್ಟಿದ್ದಾರೆ. ಇದನ್ನು ಪ್ರಥಮ್​ ಅಗತ್ಯವಿರುವರಿಗೆ ಹಂಚುವ ಕೆಲಸ ಮಾಡುತ್ತಿದ್ದಾರೆ.

ನಟ ಭಯಂಕರ ಸಿನಿಮಾಗಾಗಿ ಶ್ರಮಿಸಿದ ಎಲ್ಲಾ ಕಾರ್ಮಿಕರನ್ನು ಮನೆಗೆ ಕರೆಸಿ ಅತ್ಯುತ್ತಮ ಗುಣಮಟ್ಟದ ಆಹಾರದ ಕಿಟ್, ಐಸೋಲೇಷನ್​ ಕಿಟ್ ನೀಡುವ ಕೆಲಸವನ್ನು ಪ್ರಥಮ್​ ಮಾಡಿದ್ದರು​. ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಅಲ್ಲದೆ, ನಾನು ಮಾಡುವ ಕೆಲಸಕ್ಕೆ ಉಪೇಂದ್ರ ಸ್ಫೂರ್ತಿ ಎಂದು ಅವರು ಹೇಳಿಕೊಂಡಿದ್ದರು. ಪ್ರಥಮ್​ ಕೆಲಸ ನೋಡಿ ಮಂಡ್ಯದಿಂದ 110 ಫುಡ್​ ಕಿಟ್​ಗಳನ್ನು ಶಾಸಕ ಪುಟ್ಟರಾಜು ಕಳುಹಿಸಿಕೊಟ್ಟಿದ್ದಾರೆ. ಇದನ್ನು ಕಷ್ಟದಲ್ಲಿರುವವರಿಗೆ ಹಂಚುವ ಕೆಲಸ ಮಾಡಿದ್ದಾರೆ ಪ್ರಥಮ್​.

ಈ ಬಗ್ಗೆ ಮಾತನಾಡಿರುವ ಪ್ರಥಮ್​, ‘ಯಾವುದೇ ನಿರೀಕ್ಷೆ ಇಲ್ಲದೆ ಪುಟ್ಟರಾಜು ಅವರು ನನಗೆ ಫುಡ್​ಕಿಟ್​ ಕಳುಹಿಸಿಕೊಟ್ಟಿದ್ದಾರೆ. ಇದನ್ನು ನಾನು ಕಷ್ಟದಲ್ಲಿರುವವರಿಗೆ ತಲುಪಿಸುತ್ತಿದ್ದೇನೆ. ಸುಮಾರು ರಾಜಕಾರಣಿಗಳು ನಿರೀಕ್ಷೆಗಳನ್ನು ಇಟ್ಟುಕೊಂಡು ಕೆಲಸ ಮಾಡುತ್ತಾರೆ. ಆದರೆ, ಇವರು ಆ ರೀತಿ ಮಾಡಿಲ್ಲ. ಸಿನಿಮಾಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಆದಾಗ್ಯೂ ಅವರು ಫುಡ್​ ಕಿಟ್​ ಕಳುಹಿಸಿಕೊಟ್ಟಿದ್ದು, ಸಂಕಷ್ಟದಲ್ಲಿರುವವರಿಗೆ ತಲುಪಿಸಲಾಗುತ್ತಿದೆ ಎನ್ನುತ್ತಾರೆ ಪ್ರಥಮ್​.

ಪ್ರಥಮ್​ ನಟ ಭಯಂಕರ ಸಿನಿಮಾ ನಿರ್ದೇಶಿಸಿ ನಟಿಸಿದ್ದಾರೆ. ಈ ಚಿತ್ರ ಆಗಸ್ಟ್​ನಲ್ಲಿ ತೆರೆಗೆ ತರುವ ನಿರೀಕ್ಷೆ ಪ್ರಥಮ್​ ಅವರದ್ದು. ಸಿನಿಮಾ ಮೇಲೆ ಅವರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, ಯಶಸ್ಸು ಗಳಿಸಲಿದೆ ಎನ್ನುವ ಆತ್ಮವಿಶ್ವಾಸದಲ್ಲಿ ಇದ್ದಾರೆ.

ಇದನ್ನೂ ಓದಿ: ‘ಬೇರೆಯವರ ದುಡ್ಡಲ್ಲಿ ನಾನೇಕೆ ಬಿಲ್ಡಪ್​ ತೆಗೆದುಕೊಳ್ಳಲಿ?’; ಸ್ವಂತ ಖರ್ಚಲ್ಲಿ ‘ನಟ ಭಯಂಕರ’ ಸಿನಿಮಾ ಕಾರ್ಮಿಕರಿಗೆ ಪ್ರಥಮ್​ ಸಹಾಯ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ