AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ

‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ಪಾಯಲ್​ ರಜಪೂತ್​​ ಅವರಿಗೆ ಅವಕಾಶ ಸಿಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಪಂಜಾಬಿ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿ ಪಾಯಲ್​ ರಜಪೂತ್​ ಫೇಮಸ್​ ಆಗಿದ್ದಾರೆ. ಕನ್ನಡದ ಹೆಡ್​ಬುಷ್​ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.

‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ
ಪಾಯಲ್​ ರಜಪೂತ್​, ರಿಷಬ್​ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Dec 13, 2023 | 10:57 AM

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣ ಆಗುತ್ತಿರುವ ‘ಕಾಂತಾರ: ಚಾಪ್ಟರ್​ 1’ (Kantara Chapter 1) ಸಿನಿಮಾಗೆ ಕೆಲವೇ ದಿನಗಳ ಹಿಂದೆ ಮುಹೂರ್ತ ನೆರವೇರಿತು. ಈಗ ಆ ಸಿನಿಮಾಗೆ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇತ್ತೀಚೆಗಷ್ಟೇ ಆಡಿಷನ್​ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಮಾಹಿತಿ ಹಂಚಿಕೊಳ್ಳಲಾಗಿತ್ತು. ಅದಕ್ಕೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ವಿಶೇಷ ಏನೆಂದರೆ, ಖ್ಯಾತ ನಟಿ ಪಾಯಲ್​ ರಜಪೂತ್​ (Payal Rajput) ಕೂಡ ಈ ಸಿನಿಮಾದಲ್ಲಿ ನಟಿಸುಲು ಅವಕಾಶ ಕೊಡಿ ಎಂದು ನೇರವಾಗಿ ರಿಷಬ್​ ಶೆಟ್ಟಿ (Rishab Shetty) ಬಳಿ ಮನವಿ ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್​ ವೈರಲ್​ ಆಗಿದೆ.

ಪಂಜಾಬಿ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿ ಪಾಯಲ್​ ರಜಪೂತ್​ ಫೇಮಸ್​ ಆಗಿದ್ದಾರೆ. ಕನ್ನಡದ ಹೆಡ್​ಬುಷ್​ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ‘ಕಾಂತಾರ ಚಾಪ್ಟರ್​ 1 ಸಿನಿಮಾಗೆ ಆಡಿಷನ್​ ನಡೆಯುತ್ತಿರುವ ಬಗ್ಗೆ ತಿಳಿಯಿತು. ಈ ಸಿನಿಮಾಗೆ ನಾನು ಕೊಡುಗೆ ನೀಡಬೇಕು ಎಂದು ಬಯಸಿದ್ದೇನೆ. ಇತ್ತೀಚೆಗೆ ಬಿಡುಗಡೆಯಾದ ‘ಮಂಗಳವಾರಂ’ ಸಿನಿಮಾದಲ್ಲಿ ನನ್ನ ನಟನೆ ಮೆಚ್ಚುಗೆಗೆ ಪಾತ್ರವಾಗಿದೆ. ಸಮಯ ಮಾಡಿಕೊಂಡು ಈ ಸಿನಿಮಾ ನೋಡಿ. ಆಡಿಷನ್​ ಬಗ್ಗೆ ನನಗೆ ಸಲಹೆ ನೀಡಿ’ ಎಂದು ಪಾಯಲ್​ ರಜಪೂತ್​ ಪೋಸ್ಟ್​ ಮಾಡುವ ಮೂಲಕ ರಿಷಬ್​ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್​ ಬಳಿ ಅವಕಾಶ ಕೇಳಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ಪಾಯಲ್​ ರಜಪೂತ್​​ ಅವರಿಗೆ ಅವಕಾಶ ಸಿಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ‘ನನ್ನ ಹೆಸರನ್ನು ಶಿಫಾರಸು ಮಾಡಿದ್ದಕ್ಕೆ ಮತ್ತು ಇದನ್ನು ರೀಪೋಸ್ಟ್​ ಮಾಡುತ್ತಿದ್ದಕ್ಕೆ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಪಾಯಲ್​ ರಜಪೂತ್​ ಬರೆದುಕೊಂಡಿದ್ದಾರೆ. ಇದಕ್ಕೆ ರಿಷಬ್​ ಶೆಟ್ಟಿ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಆನೆಗುಡ್ಡೆ ವಿನಾಯಕನ ಮಹಿಮೆ; ಈ ದೇವರಿಂದ ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ ಬದುಕಲ್ಲಿ ಏನೆಲ್ಲ ಆಯ್ತು ಗೊತ್ತಾ?

2022ರಲ್ಲಿ ಬಿಡುಗಡೆ ಆದ ‘ಕಾಂತಾರ’ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಈಗ ಇದಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ನಾಯಕಿಯಾಗಿ ಯಾರು ಆಯ್ಕೆ ಆಗುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು