AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ

‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ಪಾಯಲ್​ ರಜಪೂತ್​​ ಅವರಿಗೆ ಅವಕಾಶ ಸಿಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಪಂಜಾಬಿ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿ ಪಾಯಲ್​ ರಜಪೂತ್​ ಫೇಮಸ್​ ಆಗಿದ್ದಾರೆ. ಕನ್ನಡದ ಹೆಡ್​ಬುಷ್​ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.

‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ
ಪಾಯಲ್​ ರಜಪೂತ್​, ರಿಷಬ್​ ಶೆಟ್ಟಿ
ಮದನ್​ ಕುಮಾರ್​
|

Updated on: Dec 13, 2023 | 10:57 AM

Share

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣ ಆಗುತ್ತಿರುವ ‘ಕಾಂತಾರ: ಚಾಪ್ಟರ್​ 1’ (Kantara Chapter 1) ಸಿನಿಮಾಗೆ ಕೆಲವೇ ದಿನಗಳ ಹಿಂದೆ ಮುಹೂರ್ತ ನೆರವೇರಿತು. ಈಗ ಆ ಸಿನಿಮಾಗೆ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇತ್ತೀಚೆಗಷ್ಟೇ ಆಡಿಷನ್​ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಮಾಹಿತಿ ಹಂಚಿಕೊಳ್ಳಲಾಗಿತ್ತು. ಅದಕ್ಕೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ವಿಶೇಷ ಏನೆಂದರೆ, ಖ್ಯಾತ ನಟಿ ಪಾಯಲ್​ ರಜಪೂತ್​ (Payal Rajput) ಕೂಡ ಈ ಸಿನಿಮಾದಲ್ಲಿ ನಟಿಸುಲು ಅವಕಾಶ ಕೊಡಿ ಎಂದು ನೇರವಾಗಿ ರಿಷಬ್​ ಶೆಟ್ಟಿ (Rishab Shetty) ಬಳಿ ಮನವಿ ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್​ ವೈರಲ್​ ಆಗಿದೆ.

ಪಂಜಾಬಿ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿ ಪಾಯಲ್​ ರಜಪೂತ್​ ಫೇಮಸ್​ ಆಗಿದ್ದಾರೆ. ಕನ್ನಡದ ಹೆಡ್​ಬುಷ್​ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ‘ಕಾಂತಾರ ಚಾಪ್ಟರ್​ 1 ಸಿನಿಮಾಗೆ ಆಡಿಷನ್​ ನಡೆಯುತ್ತಿರುವ ಬಗ್ಗೆ ತಿಳಿಯಿತು. ಈ ಸಿನಿಮಾಗೆ ನಾನು ಕೊಡುಗೆ ನೀಡಬೇಕು ಎಂದು ಬಯಸಿದ್ದೇನೆ. ಇತ್ತೀಚೆಗೆ ಬಿಡುಗಡೆಯಾದ ‘ಮಂಗಳವಾರಂ’ ಸಿನಿಮಾದಲ್ಲಿ ನನ್ನ ನಟನೆ ಮೆಚ್ಚುಗೆಗೆ ಪಾತ್ರವಾಗಿದೆ. ಸಮಯ ಮಾಡಿಕೊಂಡು ಈ ಸಿನಿಮಾ ನೋಡಿ. ಆಡಿಷನ್​ ಬಗ್ಗೆ ನನಗೆ ಸಲಹೆ ನೀಡಿ’ ಎಂದು ಪಾಯಲ್​ ರಜಪೂತ್​ ಪೋಸ್ಟ್​ ಮಾಡುವ ಮೂಲಕ ರಿಷಬ್​ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್​ ಬಳಿ ಅವಕಾಶ ಕೇಳಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ಪಾಯಲ್​ ರಜಪೂತ್​​ ಅವರಿಗೆ ಅವಕಾಶ ಸಿಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ‘ನನ್ನ ಹೆಸರನ್ನು ಶಿಫಾರಸು ಮಾಡಿದ್ದಕ್ಕೆ ಮತ್ತು ಇದನ್ನು ರೀಪೋಸ್ಟ್​ ಮಾಡುತ್ತಿದ್ದಕ್ಕೆ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಪಾಯಲ್​ ರಜಪೂತ್​ ಬರೆದುಕೊಂಡಿದ್ದಾರೆ. ಇದಕ್ಕೆ ರಿಷಬ್​ ಶೆಟ್ಟಿ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಆನೆಗುಡ್ಡೆ ವಿನಾಯಕನ ಮಹಿಮೆ; ಈ ದೇವರಿಂದ ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ ಬದುಕಲ್ಲಿ ಏನೆಲ್ಲ ಆಯ್ತು ಗೊತ್ತಾ?

2022ರಲ್ಲಿ ಬಿಡುಗಡೆ ಆದ ‘ಕಾಂತಾರ’ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಈಗ ಇದಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ನಾಯಕಿಯಾಗಿ ಯಾರು ಆಯ್ಕೆ ಆಗುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ