‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ

‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ಪಾಯಲ್​ ರಜಪೂತ್​​ ಅವರಿಗೆ ಅವಕಾಶ ಸಿಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಪಂಜಾಬಿ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿ ಪಾಯಲ್​ ರಜಪೂತ್​ ಫೇಮಸ್​ ಆಗಿದ್ದಾರೆ. ಕನ್ನಡದ ಹೆಡ್​ಬುಷ್​ ಸಿನಿಮಾದಲ್ಲೂ ಅವರು ನಟಿಸಿದ್ದಾರೆ.

‘ಕಾಂತಾರ ಪ್ರೀಕ್ವೆಲ್​ನಲ್ಲಿ ನಟಿಸಲು ಅವಕಾಶ ಕೊಡಿ’; ರಿಷಬ್​ ಶೆಟ್ಟಿ ಬಳಿ ಚಾನ್ಸ್​ ಕೇಳಿದ ಖ್ಯಾತ ನಟಿ
ಪಾಯಲ್​ ರಜಪೂತ್​, ರಿಷಬ್​ ಶೆಟ್ಟಿ

Updated on: Dec 13, 2023 | 10:57 AM

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ನಿರ್ಮಾಣ ಆಗುತ್ತಿರುವ ‘ಕಾಂತಾರ: ಚಾಪ್ಟರ್​ 1’ (Kantara Chapter 1) ಸಿನಿಮಾಗೆ ಕೆಲವೇ ದಿನಗಳ ಹಿಂದೆ ಮುಹೂರ್ತ ನೆರವೇರಿತು. ಈಗ ಆ ಸಿನಿಮಾಗೆ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಇತ್ತೀಚೆಗಷ್ಟೇ ಆಡಿಷನ್​ ಬಗ್ಗೆ ನಿರ್ಮಾಣ ಸಂಸ್ಥೆಯಿಂದ ಮಾಹಿತಿ ಹಂಚಿಕೊಳ್ಳಲಾಗಿತ್ತು. ಅದಕ್ಕೆ ಅನೇಕರು ಪ್ರತಿಕ್ರಿಯಿಸಿದ್ದಾರೆ. ವಿಶೇಷ ಏನೆಂದರೆ, ಖ್ಯಾತ ನಟಿ ಪಾಯಲ್​ ರಜಪೂತ್​ (Payal Rajput) ಕೂಡ ಈ ಸಿನಿಮಾದಲ್ಲಿ ನಟಿಸುಲು ಅವಕಾಶ ಕೊಡಿ ಎಂದು ನೇರವಾಗಿ ರಿಷಬ್​ ಶೆಟ್ಟಿ (Rishab Shetty) ಬಳಿ ಮನವಿ ಮಾಡಿಕೊಂಡಿದ್ದಾರೆ. ಅವರು ಮಾಡಿರುವ ಪೋಸ್ಟ್​ ವೈರಲ್​ ಆಗಿದೆ.

ಪಂಜಾಬಿ, ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿನಯಿಸಿ ಪಾಯಲ್​ ರಜಪೂತ್​ ಫೇಮಸ್​ ಆಗಿದ್ದಾರೆ. ಕನ್ನಡದ ಹೆಡ್​ಬುಷ್​ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. ‘ಕಾಂತಾರ ಚಾಪ್ಟರ್​ 1 ಸಿನಿಮಾಗೆ ಆಡಿಷನ್​ ನಡೆಯುತ್ತಿರುವ ಬಗ್ಗೆ ತಿಳಿಯಿತು. ಈ ಸಿನಿಮಾಗೆ ನಾನು ಕೊಡುಗೆ ನೀಡಬೇಕು ಎಂದು ಬಯಸಿದ್ದೇನೆ. ಇತ್ತೀಚೆಗೆ ಬಿಡುಗಡೆಯಾದ ‘ಮಂಗಳವಾರಂ’ ಸಿನಿಮಾದಲ್ಲಿ ನನ್ನ ನಟನೆ ಮೆಚ್ಚುಗೆಗೆ ಪಾತ್ರವಾಗಿದೆ. ಸಮಯ ಮಾಡಿಕೊಂಡು ಈ ಸಿನಿಮಾ ನೋಡಿ. ಆಡಿಷನ್​ ಬಗ್ಗೆ ನನಗೆ ಸಲಹೆ ನೀಡಿ’ ಎಂದು ಪಾಯಲ್​ ರಜಪೂತ್​ ಪೋಸ್ಟ್​ ಮಾಡುವ ಮೂಲಕ ರಿಷಬ್​ ಶೆಟ್ಟಿ ಮತ್ತು ಹೊಂಬಾಳೆ ಫಿಲ್ಮ್ಸ್​ ಬಳಿ ಅವಕಾಶ ಕೇಳಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ಪಾಯಲ್​ ರಜಪೂತ್​​ ಅವರಿಗೆ ಅವಕಾಶ ಸಿಗಲಿ ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ‘ನನ್ನ ಹೆಸರನ್ನು ಶಿಫಾರಸು ಮಾಡಿದ್ದಕ್ಕೆ ಮತ್ತು ಇದನ್ನು ರೀಪೋಸ್ಟ್​ ಮಾಡುತ್ತಿದ್ದಕ್ಕೆ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ಪಾಯಲ್​ ರಜಪೂತ್​ ಬರೆದುಕೊಂಡಿದ್ದಾರೆ. ಇದಕ್ಕೆ ರಿಷಬ್​ ಶೆಟ್ಟಿ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕು.

ಆನೆಗುಡ್ಡೆ ವಿನಾಯಕನ ಮಹಿಮೆ; ಈ ದೇವರಿಂದ ರಿಷಬ್​ ಶೆಟ್ಟಿ, ಪ್ರಗತಿ ಶೆಟ್ಟಿ ಬದುಕಲ್ಲಿ ಏನೆಲ್ಲ ಆಯ್ತು ಗೊತ್ತಾ?

2022ರಲ್ಲಿ ಬಿಡುಗಡೆ ಆದ ‘ಕಾಂತಾರ’ ಬ್ಲಾಕ್​ ಬಸ್ಟರ್​ ಹಿಟ್​ ಆಯಿತು. ಈಗ ಇದಕ್ಕೆ ಪ್ರೀಕ್ವೆಲ್​ ಸಿದ್ಧವಾಗುತ್ತಿದೆ. ರಿಷಬ್​ ಶೆಟ್ಟಿ ಅವರು ನಿರ್ದೇಶನ ಮಾಡುವುದರ ಜೊತೆ ಮುಖ್ಯ ಭೂಮಿಕೆ ನಿಭಾಯಿಸುತ್ತಿದ್ದಾರೆ. ನಾಯಕಿಯಾಗಿ ಯಾರು ಆಯ್ಕೆ ಆಗುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us