AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಕರ್ ಅನುಶ್ರೀ ವಿರುದ್ಧ ಸಾಕ್ಷಾಧಾರ ಕೊರತೆಯಿಂದ ಪ್ರಕರಣ ದಾಖಲಿಸಿಲ್ಲ: ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

ನಿರೂಪಕಿ ಅನುಶ್ರೀ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರಕರಣದ ಕುರಿತಂತೆ ಮಾಹಿತಿಯನ್ನು ಹಂಚಿಕೊಂಡಿದ್ದು, ಟಿವಿ9 ವರದಿ ಸತ್ಯ ಎಂದು ಹೇಳಿದ್ದಾರೆ.

ಆ್ಯಂಕರ್ ಅನುಶ್ರೀ ವಿರುದ್ಧ ಸಾಕ್ಷಾಧಾರ ಕೊರತೆಯಿಂದ ಪ್ರಕರಣ ದಾಖಲಿಸಿಲ್ಲ: ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್
ಮಂಗಳೂರು ಪೊಲೀಸ್ ಆಯುಕ್ತ N. ಶಶಿಕುಮಾರ್ (ಸಂಗ್ರಹ ಚಿತ್ರ)
TV9 Web
| Updated By: shivaprasad.hs|

Updated on:Sep 08, 2021 | 3:27 PM

Share

ನಟಿ, ನಿರೂಪಕಿ​ ಅನುಶ್ರೀ ಡ್ರಗ್ಸ್​ ಕೇಸ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿಕೆ ನೀಡಿದ್ದು, ಟಿವಿ9ನಲ್ಲಿ ಪ್ರಸಾರವಾಗಿರುವ ಚಾರ್ಜ್​ಶೀಟ್​ನ ಮಾಹಿತಿ ಸತ್ಯ ಎಂದಿದ್ದಾರೆ. ಈಗಾಗಲೇ ತನಿಖೆ ಪೂರ್ಣಗೊಂಡು ಅಂತಿಮ ವರದಿ ಸಲ್ಲಿಕೆಯಾಗಿದೆ. ತಾನು ಆಯುಕ್ತನಾಗಿ ಬರುವಷ್ಟರಲ್ಲೇ ತನಿಖೆ ಪೂರ್ಣವಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ಪಡೆದುಕೊಂಡಿದ್ದೇನೆ ಎಂದು ಅವರು ಇದೇ ವೇಳೆ ಮಾಹಿತಿ ನೀಡಿದ್ದಾರೆ.

ನ್ಯಾಯಾಲಯಕ್ಕೆ ಫೈನಲ್ ಚಾರ್ಜ್‌ಶೀಟ್ ಈಗಾಗಲೇ ಸಲ್ಲಿಸಲಾಗಿದೆ. ನಿರೂಪಕಿ ಅನುಶ್ರೀ ವಿರುದ್ಧ ಸಾಕ್ಷ್ಯಾಧಾರದ ಕೊರತೆಯಿಂದಾಗಿ ಅಂದು ಪ್ರಕರಣ ದಾಖಲಿಸಲಾಗಿಲ್ಲ. ಪ್ರಕರಣದ ಸಂಬಂಧ ಮತ್ತೆ ಅನುಶ್ರೀ ವಿಚಾರಣೆಯ ಸಾಧ್ಯತೆ ಕಡಿಮೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪ್ರಕರಣ 2007ರಲ್ಲಿ ನಡೆದಿದ್ದರಿಂದ ಮತ್ತು ಅನುಶ್ರೀ ವಿರುದ್ಧ ಸಾಕ್ಷಾಧಾರಗಳು ಇಲ್ಲದ್ದರಿಂದ ಅವರ ವಿರುದ್ಧ ಚಾರ್ಜ್​ಶೀಟ್ ಸಲ್ಲಿಸಲಾಗಿಲ್ಲ ಎಂದು ಶಶಿಕುಮಾರ್ ತಿಳಿಸಿದ್ದಾರೆ.

‘ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದ ಅಂಶಗಳು ನನ್ನ ಹೇಳಿಕೆಯಲ್ಲ’ ಎಂದ ಕಿಶೋರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಶಿಕುಮಾರ್: ‘ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದ ಅಂಶಗಳು ನನ್ನ ಹೇಳಿಕೆಯಲ್ಲ’ ಎಂದಿರುವ ಪ್ರಕರಣದ ಎ2 ಕಿಶೋರ್ ಅಮನ್ ಶೆಟ್ಟಿ ಕುರಿತಂತೆ ಎನ್.ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ‘‘ಚಾರ್ಜ್‌ಶೀಟ್‌ನಲ್ಲಿನ ಅಂಶಗಳನ್ನು ಓದಿ ಹೇಳಿಸಿ ನಂತರ ವ್ಯಕ್ತಿಯ ಸಹಿ ಪಡೆಯಲಾಗುತ್ತದೆ. ಪ್ರತಿಯೊಂದು ಪ್ರಕರಣದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ ಇದಾಗಿದ್ದು, ಹೇಳಿಕೆ ಅವರದ್ದಲ್ಲ ಎಂದಾಗಿದ್ದರೆ, ಕಿಶೋರ್ ಶೆಟ್ಟಿ ಅಂದು ನ್ಯಾಯಾಲಯದಲ್ಲೇ ಹೇಳಬಹುದಿತ್ತು. ಆದರೆ ಈಗ ಆ ವ್ಯಕ್ತಿ ತಾನು ಹೇಳಿಕೆ ನೀಡಿಲ್ಲ ಎಂಬುದು ತಪ್ಪು’’ ಎಂದು ಶಶಿಕುಮಾರ್ ಹೇಳಿದ್ದಾರೆ.

ಕಿಶೋರ್ ಏನು ಹೇಳಿದ್ದರು?

‘‘ನನಗೆ ಡ್ರಗ್ಸ್​​ ಪ್ರಕರಣದ ಬಗ್ಗೆ ಏನೇನೂ ಗೊತ್ತಿಲ್ಲ. ಚಾರ್ಜ್‌ಶೀಟ್‌ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಟಿ ಅನುಶ್ರೀ ಜೊತೆ ಯಾವುದೇ ಪಾರ್ಟಿ ಮಾಡಿಲ್ಲ. ಚಾರ್ಜ್‌ಶೀಟ್‌ನಲ್ಲಿರುವುದು ನನ್ನ ಹೇಳಿಕೆ ಅಲ್ಲ’’ ಎಂದು ಆರೋಪಿ ಕಿಶೋರ್ ಶೆಟ್ಟಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ:

Drug Case: ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ; ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿ ಹೇಳಿಕೆ

ಅನುಶ್ರೀ ಡ್ರಗ್ಸ್ ಕೇಸ್; ಚಾರ್ಜ್​ಶೀಟಿನಲ್ಲಿರುವುದು ತನ್ನ ಹೇಳಿಕೆ ಅಲ್ಲ ಎಂದ ಆರೋಪಿ ಕಿಶೋರ್ ಅಮನ್ ಶೆಟ್ಟಿ

(Mangalore Police Commissioner says tv9 report on drugs case charge sheet is true and there is less chance to re-investigate Anushree)

Published On - 3:26 pm, Wed, 8 September 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ