AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿರತ್ನಂ ಜನ್ಮದಿನ: ನಿರ್ದೇಶಕನ ಪ್ರೇಮ ನಿವೇದನೆಯನ್ನು ರಿಜೆಕ್ಟ್ ಮಾಡಿದ್ದ ಸುಹಾಸಿನಿ

Mani Ratnam Birthday: ಮಣಿರತ್ನಂ ಅವರು ಒಮ್ಮೆ ಸುಹಾಸಿನಿ ಎದುರು ಪ್ರೀತಿಯ ಕೋರಿಕೆ ಇಟ್ಟಿದ್ದರು. ಆದರೆ, ಇದನ್ನು ಸುಹಾಸಿನಿ ತಿರಸ್ಕರಿಸಿದ್ದರು.

ಮಣಿರತ್ನಂ ಜನ್ಮದಿನ: ನಿರ್ದೇಶಕನ ಪ್ರೇಮ ನಿವೇದನೆಯನ್ನು ರಿಜೆಕ್ಟ್ ಮಾಡಿದ್ದ ಸುಹಾಸಿನಿ
ಸುಹಾಸಿನಿ-ಮಣಿರತ್ನಂ
ರಾಜೇಶ್ ದುಗ್ಗುಮನೆ
|

Updated on: Jun 02, 2023 | 9:10 AM

Share

ತಮಿಳಿನಲ್ಲಿ ಮಣಿರತ್ನಂ ಅವರಿಗೆ ದೊಡ್ಡ ಹೆಸರು. ಕನ್ನಡದ ‘ಪಲ್ಲವಿ ಅನು ಪಲ್ಲವಿ’ ಸಿನಿಮಾ (Pallavi Anu Pallavi) ಮೂಲಕ ಅವರು ನಿರ್ದೇಶನ ಆರಂಭಿಸಿದರು. 40 ವರ್ಷಗಳ ಬಳಿಕವೂ ಅವರು ಬೇಡಿಕೆ ಉಳಿಸಿಕೊಂಡಿದ್ದಾರೆ. ‘ಪೊನ್ನಿಯಿನ್ ಸೆಲ್ವನ್​, ‘ಪೊನ್ನಿಯಿನ್ ಸೆಲ್ವನ್ 2’ ಅಂತಹ ಹಿಟ್ ಚಿತ್ರಗಳು ನೀಡುತ್ತಿದ್ದಾರೆ. ಅವರಿಗೆ ಇಂದು (ಜೂನ್ 2) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಮಣಿರತ್ನಂ ಹಾಗೂ ಸುಹಾಸಿನಿ 1988ರಲ್ಲಿ ಮದುವೆ ಆದರು. ಇವರ ಮದುವೆ ನಡೆದಿದ್ದು ಹೇಗೆ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಮಣಿರತ್ನಂ ಹಾಗೂ ಸುಹಾನಿಸಿ ಅವರದ್ದು ಲವ್​ ಮ್ಯಾರೇಜ್ ಅನ್ನೋದು ಅನೇಕರ ಭಾವನೆ. ಆದರೆ, ಅದು ನಿಜವಲ್ಲ. ಸುಹಾಸಿನಿ ಅವರನ್ನು ಮೊದಲ ಭೇಟಿ ಮಾಡಿದಾಗ ಮಣಿ ರತ್ನಂ ಅವರ ವಯಸ್ಸು 33 ವರ್ಷ. ಚಿತ್ರರಂಗದಲ್ಲಿ ಅವರು ಆಗ ಹೆಸರು ಮಾಡುತ್ತಿದ್ದರು. ವಿಶೇಷ ಎಂದರೆ ಸುಹಾಸಿನಿ ಆಗಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.

ಮಣಿರತ್ನಂ ಅವರು ಒಮ್ಮೆ ಸುಹಾಸಿನಿ ಎದುರು ಪ್ರೀತಿಯ ಕೋರಿಕೆ ಇಟ್ಟಿದ್ದರು. ಆದರೆ, ಇದನ್ನು ಸುಹಾಸಿನಿ ತಿರಸ್ಕರಿಸಿದ್ದರಂತೆ. ‘ನನಗೆ ರಿಲೇಶನ್​ಶಿಪ್​ ಬಗ್ಗೆ ನಂಬಿಕೆ ಇಲ್ಲ. ನನಗೇನಿದ್ದರೂ ಮದುವೆ ಬಗ್ಗೆ ಮಾತ್ರ ಆಸಕ್ತಿ’ ಎಂದಿದ್ದರು. ಇಬ್ಬರ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಇಬ್ಬರೂ 1988ರಲ್ಲಿ ಮದುವೆ ಆದರು.

ಮಣಿರತ್ನಂ ಅವರನ್ನು ಸುಹಾಸಿನಿ ಆರಾಧಿಸುತ್ತಿದ್ದರು. ಇಬ್ಬರೂ ಮದುವೆ ಆಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರ ಮದುವೆ ತುಂಬಾನೇ ಖಾಸಗಿ ಆಗಿ ನಡೆದಿತ್ತು. ಕೆಲವೇ ಕೆಲವು ಮಂದಿ ಮಾತ್ರ ಈ ಮದುವೆಯಲ್ಲಿ ಭಾಗಿ ಆಗಿದ್ದರು. 1992ರಲ್ಲಿ ಮಣಿರತ್ನಂ ಹಾಗೂ ಸುಹಾಸಿನಿಹೆ ಗಂಡು ಮಗು ಜನಿಸಿತು. ಮಗುವಿಗೆ ನಂದನ್ ಎಂದು ಹೆಸರು ಇಡಲಾಗಿದೆ.

ಇದನ್ನೂ ಓದಿ: ಶರತ್​​ ಬಾಬು ಅಂತ್ಯಕ್ರಿಯೆಗೆ ಬರಲಿಲ್ಲ ಕಮಲ್​ ಹಾಸನ್​; ಕಾರಣ ತಿಳಿಸಿದ ಸುಹಾಸಿನಿ ಮಣಿರತ್ನಂ

ಮಣಿರತ್ನಂ ಅವರಿಗೆ ಈ ವರ್ಷ ಬರ್ತ್​ಡೇ ತುಂಬಾನೇ ಸ್ಪೆಷಲ್ ಎನಿಸಿಕೊಂಡಿದೆ. ಏಪ್ರಿಲ್​ನಲ್ಲಿ ರಿಲೀಸ್ ಆದ ಅವರ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ಖ್ಯಾತಿ ಸಾಕಷ್ಟು ಹೆಚ್ಚಿದೆ. ಈ ಚಿತ್ರದಲ್ಲಿ ಐಶ್ವರ್ಯಾ ರೈ, ಕಾರ್ತಿ, ವಿಕ್ರಮ್ ಸೇರಿ ಅನೇಕ ಸ್ಟಾರ್ ಹೀರೋಗಳು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್