AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್​ ಚಿತ್ರವನ್ನು ಹಾಡಿ ಹೊಗಳಿದ ಮಂಗಳಮುಖಿ ‘ಪದ್ಮಶ್ರೀ’ ಮಂಜಮ್ಮ ಜೋಗತಿ

ರಾಬರ್ಟ್​ ಸಿನಿಮಾದಲ್ಲಿ ಮಂಗಳಮುಖಿಯರೂ ನಮ್ಮಂತೆ ಸಮಾಜದಲ್ಲಿ ಒಬ್ಬರು ಎಂಬುದನ್ನು ತೋರಿಸುವ ಕೆಲಸ ಮಾಡಲಾಗಿದೆ. ಇದು ಮಾತಾ ಬಿ. ಮಂಜಮ್ಮ ಜೋಗತಿ ಅವರ ಮನ ಗೆದ್ದಿದೆ.

ರಾಬರ್ಟ್​ ಚಿತ್ರವನ್ನು ಹಾಡಿ ಹೊಗಳಿದ ಮಂಗಳಮುಖಿ 'ಪದ್ಮಶ್ರೀ' ಮಂಜಮ್ಮ ಜೋಗತಿ
ಮಾತಮ್ಮ ಜೋಗತಿ ಮತ್ತು ದರ್ಶನ್​
ರಾಜೇಶ್ ದುಗ್ಗುಮನೆ
| Edited By: |

Updated on:Mar 26, 2021 | 5:35 PM

Share

ದರ್ಶನ್​ ನಟನೆಯ ರಾಬರ್ಟ್​ ಸಿನಿಮಾವನ್ನು ಇಡೀ ಕನ್ನಡ ಚಿತ್ರರಂಗ ಹಾಡಿ ಹೊಗಳುತ್ತಿದೆ. ಚಿತ್ರಕ್ಕೆ ಎಲ್ಲಾ ಕಡೆಗಳಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈಗಲೂ ಜನರು ಸಿನಿಮಾ ಮಂದಿರಕ್ಕೆ ತೆರಳಿ ಚಿತ್ರ ವೀಕ್ಷಣೆ ಮಾಡುತ್ತಿರುವುದು ನಿಂತಿಲ್ಲ. ಸಿನಿಮಾದ ಕಲೆಕ್ಷನ್ ಕೂಡ ದೊಡ್ಡ ಮಟ್ಟದಲ್ಲೇ ಆಗಿರುವುದು ಚಿತ್ರತಂಡದ ಖುಷಿ ಹೆಚ್ಚಿಸಿದೆ. ಈ ಮಧ್ಯೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಅಕಾಡೆಮಿ ಅಧ್ಯಕ್ಷೆ ಹಾಗೂ ಮಂಗಳಮುಖಿ ಮಾತಾ ಬಿ. ಮಂಜಮ್ಮ ಜೋಗತಿ ರಾಬರ್ಟ್​ ಚಿತ್ರವನ್ನು ಹಾಡಿ ಹೊಗಳಿದ್ದಾರೆ. ರಾಬರ್ಟ್​ ಸಿನಿಮಾದಲ್ಲಿ ಶಿವರಾಜ್​ ಕೆ.ಆರ್​ ಪೇಟೆ ಮಂಗಳಮುಖಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಮಂಗಳಮುಖಿಯರೂ ನಮ್ಮಂತೆ ಸಮಾಜದಲ್ಲಿ ಒಬ್ಬರು ಎಂಬುದನ್ನು ತೋರಿಸುವ ಕೆಲಸ ಮಾಡಲಾಗಿದೆ. ಇದು ಮಾತಾ ಬಿ. ಮಂಜಮ್ಮ ಜೋಗತಿ ಅವರ ಮನ ಗೆದ್ದಿದೆ. ಹೀಗಾಗಿ, ರಾಬರ್ಟ್​ ಸಿನಿಮಾ ಪ್ರಯತ್ನದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ.

ರಾಬರ್ಟ್​ ಸಿನಿಮಾ ತೆರೆಕಂಡ ತುಂಬಾ ಜನರು ನನಗೆ ಕರೆ ಮಾಡಿ ಸಿನಿಮಾ ನೋಡಿ ಎಂದಿದ್ದರು. ಅಂಥ ವಿಶೇಷತೆ ಏನಿದೆ ಎಂದು ನಾನು ಕೇಳಿದ್ದೆ. ದರ್ಶನ್​ ಅವರು ಚೆನ್ನಾಗಿ ಮಾಡಿದ್ದಾರೆ. ಮಂಗಳಮುಖಿಯರು ಬಗ್ಗೆ ಮೆಚ್ಚುಗೆ ಬರುವಂತೆ ತೋರಿಸಲಾಗಿದೆ ಎಂದಿದ್ದರು. ಹೀಗಾಗಿ, ನಾನು ಕೂಡ ಚಿತ್ರಮಂದಿರಕ್ಕೆ ತೆರಳಿ ಸಿನಿಮಾ ನೋಡಿದೆ ಎಂದಿದ್ದಾರೆ ಮಾತಾ ಬಿ. ಮಂಜಮ್ಮ ಜೋಗತಿ.

ಅಕಾಡೆಮಿ ಸಿಬ್ಬಂದಿ ಜತೆ ನಾನು ಸಿನಿಮಾ ನೋಡಿದ್ದೇನೆ. ಆರಂಭದಲ್ಲಿ ಅಯೋಧ್ಯೆಯನ್ನೇ ನೋಡಿದ ರೀತಿ ಆಯ್ತು. ಸಿನಿಮಾದಲ್ಲಿ ನನ್ನ ಸಮುದಾಯದವರ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ. ನಮ್ಮ ಸಮಾಜವನ್ನು ನೋಡಿದ್ರೆ ಎಲ್ಲರೂ ಗೌರವ ಕೊಡುವಂತೆ ಮಾಡುವ ಕೆಲಸ ಸಿನಿಮಾದಲ್ಲಿ ನಡೆದಿದೆ. ದರ್ಶನ್​ ಅವರಿಂದ ಇದೇ ಮಾದರಿಯ ಮತ್ತೊಂದಷ್ಟು ಸಿನಿಮಾ ಬರಲಿ ಎಂದು ಮಾತಾ ಬಿ. ಮಂಜಮ್ಮ ಜೋಗತಿ ಹಾರೈಸಿದ್ದಾರೆ.

ಇನ್ನು, ಸಿನಿಮಾ ಗೆದ್ದಿರುವ ಖುಷಿಗೆ ಚಿತ್ರತಂಡ ಕೂಡ ವಿಜಯ ಯಾತ್ರೆ ಹಮ್ಮಿಕೊಂಡಿದೆ. ಈ ಬಗ್ಗೆ ನಿರ್ದೇಶಕ ತರುಣ್​ ಸುಧೀರ್​ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ‘ಮದಗಜ’ ನಿರ್ದೇಶಕ ಮಹೇಶ್​ಗೆ ‘ರಾಬರ್ಟ್’​ ನಿರ್ಮಾಪಕ ಉಮಾಪತಿಯಿಂದ ದುಬಾರಿ ಕಾರ್ ಗಿಫ್ಟ್​!

Published On - 6:46 pm, Thu, 25 March 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ