AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಿಸ್​ಗೈಡ್’ ಮಾಡಿದ ನಿರ್ದೇಶಕನಿಗೆ ನಾಗೇಂದ್ರ ಪ್ರಸಾದ್ ಶುಭ ಹಾರೈಕೆ

ಮಂಜು ಕವಿ ನಿರ್ದೇಶನ ಮಾಡಿರುವ ‘ಮಿಸ್​ಗೈಡ್​’ ಚಿತ್ರಕ್ಕೆ ಈಗಾಗಲೇ ಶೂಟಿಂಗ್​ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿವೆ. ಶೀಘ್ರದಲ್ಲೇ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ 4 ಹಾಡುಗಳಿವೆ. ಅಮ್ಮ-ಮಗನ ಸೆಂಟಿಮೆಂಟ್ ಹಾಡಿಗೆ ಗುರುಕಿರಣ್ ಧ್ವನಿ ನೀಡಿದ್ದಾರೆ. ರಂಗಭೂಮಿ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

‘ಮಿಸ್​ಗೈಡ್’ ಮಾಡಿದ ನಿರ್ದೇಶಕನಿಗೆ ನಾಗೇಂದ್ರ ಪ್ರಸಾದ್ ಶುಭ ಹಾರೈಕೆ
‘ಮಿಸ್​ಗೈಡ್​’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Mar 20, 2024 | 11:03 PM

Share

ಮಂಜು ಕವಿ ಅವರು ಮಿಸ್​ಗೈಡ್ (Misguide) ಮಾಡಿದ್ದಾರೆ. ಹಾಗಂತ ಅವರು ಯಾರನ್ನೂ ದಾರಿ ತಪ್ಪಿಸಿಲ್ಲ. ಮಂಜು ಕವಿ (Manju Kavi) ನಿರ್ದೇಶನ ಮಾಡಿರುವ ಹೊಸ ಸಿನಿಮಾದ ಹೆಸರೇ ‘ಮಿಸ್​ಗೈಡ್’! ‘ಸೀಟಡೀಲ್ ಫಿಲಂಸ್’ ಮತ್ತು ‘ರಾಜ್ ಫಿಲ್ಮ್ಸ್​’ ಸಂಸ್ಥೆಯ ಮೂಲಕ ನಾಗರಾಜ್ ಮತ್ತು ಸುಬ್ಬು ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಇತ್ತೀಚೆಗೆ ‘ಮಿಸ್​ಗೈಡ್’ ಸಿನಿಮಾದ ಟೀಸರ್​ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಗೀತರಚನಕಾರ ವಿ. ನಾಗೇಂದ್ರ ಪ್ರಸಾದ್ (V. Nagendra Prasad) ಆಗಮಿಸಿದ್ದರು. ಟೀಸರ್​ ಬಿಡುಗಡೆ ಮಾಡಿ ಅವರು ಶುಭ ಕೋರಿದರು.

‘ಮಿಸ್​ಗೈಡ್’ ಸಿನಿಮಾಗೆ ಮಂಜು ಕವಿ ನಿರ್ದೇಶನ ಮಾಡುವುದರ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಅಲದೇ, ಸಂಗೀತವನ್ನೂ ನೀಡಿದ್ದಾರೆ. ಟೀಸರ್ ಅನಾವರಣ ಮಾಡಿದ ನಾಗೇಂದ್ರ ಪ್ರಸಾದ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಗಗನ್ ರಾಜ್ ಕೂಡ ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದರು. ಇದು ಮಂಜು ಕವಿ ನಿರ್ದೇಶನ ಮಾಡಿರುವ ಎರಡನೇ ಸಿನಿಮಾ.

ಇದನ್ನೂ ಓದಿ: ‘ದೇಸಾಯಿ’ ಟೀಸರ್​ಗೆ ಲಕ್ಷ್ಮಣ ಸವದಿ ಹಾರೈಕೆ; ‘ಲವ್​ 360’ ಹುಡುಗನ ಹೊಸ ಸಿನಿಮಾ

‘ನನ್ನ ಕಥೆಯನ್ನು ಇಷ್ಟಪಟ್ಟು ನಾಗರಾಜ್ ಮತ್ತು ಸುಬ್ಬು ಅವರು ನಿರ್ಮಾಣ ಮಾಡಿದ್ದಾರೆ. ಹಾವು ಮತ್ತು ಮುಂಗುಸಿ ಕಥೆ ಸ್ಫೂರ್ತಿಯಾಗಿ ಇಟ್ಟುಕೊಂಡು ಈ ಸಿನಿಮಾದ ಕಥೆ ಸಿದ್ಧಪಡಿಸಲಾಗಿದೆ. ಮುಂಗುಸಿಯು ಹಾವಿನೊಂದಿಗೆ ಸೆಣೆಸಾಡಿ ಮಗುವನ್ನು ಕಾಪಾಡುತ್ತದೆ. ಆದರೆ ಅದರ ಬಾಯಲ್ಲಿ ರಕ್ತವನ್ನು ನೋಡಿದ ಮಗುವಿನ ತಾಯಿ, ಮುಂಗುಸಿಯೇ ತನ್ನ ಮಗುವಿಗೆ ಏನೋ ಮಾಡಿದೆ ಎಂದು ಭಾವಿಸುತ್ತಾಳೆ. ನಮ್ಮ ಚಿತ್ರಕ್ಕೆ ಈ ಕಥೆಯೇ ಸ್ಫೂರ್ತಿ’ ಎಂದು ಮಂಜು ಕವಿ ಹೇಳಿದ್ದಾರೆ.

‘ಮಿಸ್​ಗೈಡ್​’ ಸಿನಿಮಾದ ಟೀಸರ್ ರಿಲೀಸ್​ ಕಾರ್ಯಕ್ರಮ

ಮಂಜು ಕವಿ ಹೇಳಿದ ಕಥೆ ತಮಗೆ ಇಷ್ಟವಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿರುವುದಾಗಿ ನಿರ್ಮಾಪಕರಾದ ಸುಬ್ಬು ಮತ್ತು ನಾಗರಾಜ್ ಹೇಳಿದ್ದಾರೆ. ಸುಬ್ಬು ಅವರು ನಿರ್ಮಾಣ ಮಾಡುವುದರ ಜೊತೆಗೆ ಸಿನಿಮಾದ ಒಂದು ಮುಖ್ಯ ಪಾತ್ರದಲ್ಲೂ ನಟಿಸಿದ್ದಾರೆ. ಅವರ ಜತೆ ನಾಯಕನಾಗಿ ನಿತೀಶ್ ವಿನಯ್ ರಾಜ್ ಕೂಡ ಅಭಿನಯಿಸಿದ್ದಾರೆ. ಫರೀನ್ ಮತ್ತು ರಕ್ಷಾ ನಾಯಕಿಯಾಗಿ ನಟಿಸಿದ್ದಾರೆ. ನಟರಾದ ಪ್ರಾಣೇಶ್, ಜಗದೀಶ್ ಕೊಪ್ಪ, ಹಿನ್ನೆಲೆ ಸಂಗೀತ ನೀಡಿರುವ ವಿನು ಮನಸು, ಫೈಟ್​ ಮಾಸ್ಟರ್​ ಮಾಸ್ ಮಾದ ಕೂಡ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?