AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್​ಕುಮಾರ್​

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ.

‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್​ಕುಮಾರ್​
TV9 Web
| Edited By: |

Updated on: Aug 11, 2021 | 3:48 PM

Share

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

ಇದನ್ನೂ ಓದಿ: ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’​ ಫ್ಯಾನ್ಸ್​ ಹೇಳಿದ್ದೇನು?

‘ನೀವು ಗೆದ್ದು ಬನ್ನಿ’; ಫಿನಾಲೆ ತಲುಪಿದ ಮಂಜುಗೆ ಶಿವರಾಜ್​ಕುಮಾರ್ ವಿಶೇಷ ಹಾರೈಕೆ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು