AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್​ಕುಮಾರ್​

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ.

‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್​ಕುಮಾರ್​
TV9 Web
| Edited By: |

Updated on: Aug 11, 2021 | 3:48 PM

Share

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

ಇದನ್ನೂ ಓದಿ: ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’​ ಫ್ಯಾನ್ಸ್​ ಹೇಳಿದ್ದೇನು?

‘ನೀವು ಗೆದ್ದು ಬನ್ನಿ’; ಫಿನಾಲೆ ತಲುಪಿದ ಮಂಜುಗೆ ಶಿವರಾಜ್​ಕುಮಾರ್ ವಿಶೇಷ ಹಾರೈಕೆ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು