AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್​ಕುಮಾರ್​

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ.

‘ಮಂಜು ಪಾವಗಡ ಗೆಲುವು ಖುಷಿ ಕೊಟ್ಟಿದೆ’; ಮನಃಪೂರ್ವಕವಾಗಿ ಹೊಗಳಿದ ಶಿವರಾಜ್​ಕುಮಾರ್​
TV9 Web
| Edited By: |

Updated on: Aug 11, 2021 | 3:48 PM

Share

ನಟ ಶಿವರಾಜ್​ಕುಮಾರ್​ ಅವರ ಬಗ್ಗೆ ಮಂಜು ಪಾವಗಡ ವಿಶೇಷ ಗೌರವ ಹೊಂದಿದ್ದಾರೆ. ಶಿವರಾಜ್​ಕುಮಾರ್ ಅವರ ದೊಡ್ಡ ಫ್ಯಾನ್​ ನಾನು ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದರು. ಅಲ್ಲದೆ, ಶಿವರಾಜ್​ಕುಮಾರ್​ ಅವರಿಂದ ವಿಶೇಷ ವಿಶ್​ ಕೂಡ ಪಡೆದುಕೊಂಡಿದ್ದರು. ಈಗ ಮಂಜು ‘ಬಿಗ್​ ಬಾಸ್​ ಕನ್ನಡ ಸೀಸನ್​ 8ರ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಇದೇ ಖುಷಿಯಲ್ಲಿ ಅವರು ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ್ದಾರೆ.

ನಾಗಾವರದಲ್ಲಿರುವ ಶಿವರಾಜ್​ಕುಮಾರ್​ ಅವರ ಮನೆಗೆ ಇಂದು (ಆಗಸ್ಟ್​ 11) ಮಂಜು ತೆರಳಿದ್ದಾರೆ. ವಿಶೇಷ ಎಂದರೆ, ಮಂಜು ಟ್ರೋಫಿಯೊಂದಿಗೆ ತೆರಳಿ, ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಸದ್ಯ, ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

‘ಒಂದೇ ಒಂದು ಆಸೆ ಇದೆ. ಶಿವಣ್ಣ ಅಂದ್ರೆ ಇಷ್ಟ. ಅವರ ಕಡೆಯಿಂದ ಆಶೀರ್ವಾದ ಬೇಕು. ಇದು ನನ್ನ ಆಸೆ. ಪ್ಲೀಸ್​, ದಯವಿಟ್ಟು ಇದನ್ನು ನೆರವೇರಿಸಿ’ ಎಂದು ಮಂಜು ಬಿಗ್​ ಬಾಸ್​ ಮನೆಯಲ್ಲಿ ಕೇಳಿಕೊಂಡಿದ್ದರು. ಈ ಆಸೆಯನ್ನು ಬಿಗ್​ ಬಾಸ್​ ನೆರವೇರಿಸಿದ್ದರು.

‘ಹಾಯ್​ ಮಂಜು ಬಿಗ್​ ಬಾಸ್​ ಫಿನಾಲೆಗೆ ಬಂದಿದ್ದೀರಿ. ಇದನ್ನು ಕೇಳಿ ತುಂಬಾನೇ ಖುಷಿ ಆಯ್ತು. ಗೆದ್ದು ಬನ್ನಿ. ಎಲ್ಲರಿಗೂ ಒಳ್ಳೆಯದಾಗಲಿ. ಮಂಜು ನಿಮಗೆ ಮತ್ತೊಮ್ಮೆ ಆಲ್​ ದಿ ಬೆಸ್ಟ್​​. ಲವ್​​ ಯೂ’ ಎಂದು ವಿಶ್​​ ಮಾಡಿದ್ದರು ಶಿವಣ್ಣ. ಈ ವಿಡಿಯೋ ನೋಡಿ ಮಂಜು ಸಾಕಷ್ಟು ಖುಷಿ ಆಗಿದ್ದರು.

ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.

ಇದನ್ನೂ ಓದಿ: ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’​ ಫ್ಯಾನ್ಸ್​ ಹೇಳಿದ್ದೇನು?

‘ನೀವು ಗೆದ್ದು ಬನ್ನಿ’; ಫಿನಾಲೆ ತಲುಪಿದ ಮಂಜುಗೆ ಶಿವರಾಜ್​ಕುಮಾರ್ ವಿಶೇಷ ಹಾರೈಕೆ

ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ