AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

19.20.21 Movie: ಗಮನ ಸೆಳೆಯುತ್ತಿದೆ ‘19.20.21’ ಹೊಸ ಪೋಸ್ಟರ್​; ಬಿಡುಗಡೆ ಹೊಸ್ತಿಲಿನಲ್ಲಿ ಹೆಚ್ಚಿತು ಕೌತುಕ

Mansore | Shrunga BV: ‘ಕೈಗೆ ಬೇಡಿ ಹಾಕಿ ಪರೀಕ್ಷೆ ಬರೆಸಿದರೆ ಹಾಳಾಗೋದು ಕೇವಲ ವಿದ್ಯಾರ್ಥಿಯ ಕೈಬರಹ ಅಷ್ಟೇ ಅಲ್ಲ, ದೇಶದ ಹಣೆಬರಹ ಕೂಡ’ ಎಂಬ ಕ್ಯಾಪ್ಷನ್​ನೊಂದಿಗೆ ನಿರ್ದೇಶಕ ಮಂಸೋರೆ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ.

19.20.21 Movie: ಗಮನ ಸೆಳೆಯುತ್ತಿದೆ ‘19.20.21’ ಹೊಸ ಪೋಸ್ಟರ್​; ಬಿಡುಗಡೆ ಹೊಸ್ತಿಲಿನಲ್ಲಿ ಹೆಚ್ಚಿತು ಕೌತುಕ
ಶೃಂಗ ಬಿ.ವಿ.
ಮದನ್​ ಕುಮಾರ್​
|

Updated on:Feb 26, 2023 | 6:46 PM

Share

ನೈಜ ಘಟನೆ ಆಧರಿಸಿ ತಯಾರಾಗಿರುವ ‘19.20.21’ ಸಿನಿಮಾದ (19.20.21 Movie) ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದುಕೊಂಡಿವೆ. ಈಗಾಗಲೇ 10 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿರುವ ಟ್ರೇಲರ್​ ಮೂಲಕ ಈ ಚಿತ್ರದ ಬಗ್ಗೆ ಸಖತ್​ ಕೌತುಕ ನಿರ್ಮಾಣ ಆಗಿದೆ. ಮಂಸೋರೆ (Mansore) ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಮಾರ್ಚ್​ 3ರಂದು ‘19.20.21’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಒಂದು ಹೊಸ ಪೋಸ್ಟರ್​ ಮೂಲಕ ಕುತೂಹಲ ಹೆಚ್ಚಿಸುವ ಕೆಲಸ ಆಗಿದೆ. ರಂಗಭೂಮಿ ಕಲಾವಿದ ಶೃಂಗ ಬಿ.ವಿ. (Shrunga BV) ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಶೃಂಗ ಬಿ.ವಿ. ಕಾಣಿಸಿಕೊಂಡಿರುವ ಈ ಹೊಸ ಪೋಸ್ಟರ್​ನಲ್ಲಿ ಕಥೆಯ ಬಗ್ಗೆ ಒಂದಷ್ಟು ಸುಳಿವು ಬಿಟ್ಟುಕೊಡಲಾಗಿದೆ. ಸರಪಳಿಯಿಂದ ಬಂಧಿತನಾಗಿರುವ ನಾಯಕ ಪೊಲೀಸ್ ಕಾವಲಿನ ನಡುವೆ ಪರೀಕ್ಷೆ ಬರೆಯುತ್ತಿರುವ ದೃಶ್ಯ ಈ ಪೋಸ್ಟರ್​ನಲ್ಲಿದೆ. ‘ಕೈಗೆ ಬೇಡಿ ಹಾಕಿ ಪರೀಕ್ಷೆ ಬರೆಸಿದರೆ ಹಾಳಾಗೋದು ಕೇವಲ ವಿದ್ಯಾರ್ಥಿಯ ಕೈಬರಹ ಅಷ್ಟೇ ಅಲ್ಲ, ದೇಶದ ಹಣೆಬರಹ ಕೂಡ. ನೆನಪಿರಲಿ’ ಎಂಬ ಕ್ಯಾಪ್ಷನ್​ನೊಂದಿಗೆ ನಿರ್ದೇಶಕ ಮಂಸೋರೆ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ
Image
ಬದುಕು ಬದಲಿಸಿದ ಹೆದ್ದಾರಿಯಿಂದಲೇ ಸಾವು; ಸಂಚಾರಿ ವಿಜಯ್ ನೆನೆದು ದುಃಖ ಹೊರಹಾಕಿದ ನಿರ್ದೇಶಕ ಮಂಸೋರೆ
Image
ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
Image
ಮಂಸೋರೆ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರಾ ಸಾಯಿ ಪಲ್ಲವಿ? ಇಲ್ಲಿದೆ ಅಸಲಿಯತ್ತು

‘19.20.21’ ಚಿತ್ರದ ಹಾಡುಗಳಿಗೆ ಬಿಂದು ಮಾಲಿನಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ‘ಹಾಡು ಪಾಡು ಇವರ ಸಿಂಗಾರ, ನೋಡಾ ಬಾರ ಭುವಿಗೆ ಮಾಯ್ಕಾರ..’ ಗೀತೆ ಬಿಡುಗಡೆ ಆಗಿದೆ. ಕಿರಣ್ ಕಾವೇರಪ್ಪ ಹಾಗೂ ಉದಯ್ ರಾಜ್ ಅವರ ಸಾಹಿತ್ಯದಲ್ಲಿ ಮೂಡಿಬಂದಿರುವ ಈ ಗೀತೆಗೆ ಎಂ.ಡಿ. ಪಲ್ಲವಿ, ಬಿಂದು ಮಾಲಿನಿ, ಉಮಾ ವೈಜಿ, ಮೋಹನ್  ಕುಮಾರ್, ಶೃಂಗ ಬಿ.ವಿ. ಧ್ವನಿ ನೀಡಿದ್ದಾರೆ. ದೇವರಾಜ್. ಆರ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸತ್ಯ ಹೆಗಡೆ ಅವರ ಸಹ ನಿರ್ಮಾಣವಿದೆ.

ಇದನ್ನೂ ಓದಿ: Mansore: ‘19.20.21’ ಟ್ರೇಲರ್​ಗೆ ಭರಪೂರ ಮೆಚ್ಚುಗೆ; ಮಂಸೋರೆ ನಿರ್ದೇಶನದ ಸಿನಿಮಾ ಮಾರ್ಚ್​ 3ಕ್ಕೆ ರಿಲೀಸ್

ಶೃಂಗ ಬಿ.ವಿ., ಬಾಲಾಜಿ ಮನೋಹರ್, ಸಂಪತ್, ಎಂ.ಡಿ. ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ. ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:46 pm, Sun, 26 February 23

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ