Sign In

By signing in or creating an account, you agree with Associated Broadcasting Company's Terms & Conditions and Privacy Policy.

19.20.21 Movie: ಗಮನ ಸೆಳೆಯುತ್ತಿದೆ ‘19.20.21’ ಹೊಸ ಪೋಸ್ಟರ್​; ಬಿಡುಗಡೆ ಹೊಸ್ತಿಲಿನಲ್ಲಿ ಹೆಚ್ಚಿತು ಕೌತುಕ

Mansore | Shrunga BV: ‘ಕೈಗೆ ಬೇಡಿ ಹಾಕಿ ಪರೀಕ್ಷೆ ಬರೆಸಿದರೆ ಹಾಳಾಗೋದು ಕೇವಲ ವಿದ್ಯಾರ್ಥಿಯ ಕೈಬರಹ ಅಷ್ಟೇ ಅಲ್ಲ, ದೇಶದ ಹಣೆಬರಹ ಕೂಡ’ ಎಂಬ ಕ್ಯಾಪ್ಷನ್​ನೊಂದಿಗೆ ನಿರ್ದೇಶಕ ಮಂಸೋರೆ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ.

19.20.21 Movie: ಗಮನ ಸೆಳೆಯುತ್ತಿದೆ ‘19.20.21’ ಹೊಸ ಪೋಸ್ಟರ್​; ಬಿಡುಗಡೆ ಹೊಸ್ತಿಲಿನಲ್ಲಿ ಹೆಚ್ಚಿತು ಕೌತುಕ
ಶೃಂಗ ಬಿ.ವಿ.
Follow us
ಮದನ್​ ಕುಮಾರ್​
|

Updated on:Feb 26, 2023 | 6:46 PM

ನೈಜ ಘಟನೆ ಆಧರಿಸಿ ತಯಾರಾಗಿರುವ ‘19.20.21’ ಸಿನಿಮಾದ (19.20.21 Movie) ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದುಕೊಂಡಿವೆ. ಈಗಾಗಲೇ 10 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿರುವ ಟ್ರೇಲರ್​ ಮೂಲಕ ಈ ಚಿತ್ರದ ಬಗ್ಗೆ ಸಖತ್​ ಕೌತುಕ ನಿರ್ಮಾಣ ಆಗಿದೆ. ಮಂಸೋರೆ (Mansore) ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಮಾರ್ಚ್​ 3ರಂದು ‘19.20.21’ ಸಿನಿಮಾ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಒಂದು ಹೊಸ ಪೋಸ್ಟರ್​ ಮೂಲಕ ಕುತೂಹಲ ಹೆಚ್ಚಿಸುವ ಕೆಲಸ ಆಗಿದೆ. ರಂಗಭೂಮಿ ಕಲಾವಿದ ಶೃಂಗ ಬಿ.ವಿ. (Shrunga BV) ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಶೃಂಗ ಬಿ.ವಿ. ಕಾಣಿಸಿಕೊಂಡಿರುವ ಈ ಹೊಸ ಪೋಸ್ಟರ್​ನಲ್ಲಿ ಕಥೆಯ ಬಗ್ಗೆ ಒಂದಷ್ಟು ಸುಳಿವು ಬಿಟ್ಟುಕೊಡಲಾಗಿದೆ. ಸರಪಳಿಯಿಂದ ಬಂಧಿತನಾಗಿರುವ ನಾಯಕ ಪೊಲೀಸ್ ಕಾವಲಿನ ನಡುವೆ ಪರೀಕ್ಷೆ ಬರೆಯುತ್ತಿರುವ ದೃಶ್ಯ ಈ ಪೋಸ್ಟರ್​ನಲ್ಲಿದೆ. ‘ಕೈಗೆ ಬೇಡಿ ಹಾಕಿ ಪರೀಕ್ಷೆ ಬರೆಸಿದರೆ ಹಾಳಾಗೋದು ಕೇವಲ ವಿದ್ಯಾರ್ಥಿಯ ಕೈಬರಹ ಅಷ್ಟೇ ಅಲ್ಲ, ದೇಶದ ಹಣೆಬರಹ ಕೂಡ. ನೆನಪಿರಲಿ’ ಎಂಬ ಕ್ಯಾಪ್ಷನ್​ನೊಂದಿಗೆ ನಿರ್ದೇಶಕ ಮಂಸೋರೆ ಅವರು ಈ ಪೋಸ್ಟರ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ
Image
ಬದುಕು ಬದಲಿಸಿದ ಹೆದ್ದಾರಿಯಿಂದಲೇ ಸಾವು; ಸಂಚಾರಿ ವಿಜಯ್ ನೆನೆದು ದುಃಖ ಹೊರಹಾಕಿದ ನಿರ್ದೇಶಕ ಮಂಸೋರೆ
Image
ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
Image
ಮಂಸೋರೆ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರಾ ಸಾಯಿ ಪಲ್ಲವಿ? ಇಲ್ಲಿದೆ ಅಸಲಿಯತ್ತು

‘19.20.21’ ಚಿತ್ರದ ಹಾಡುಗಳಿಗೆ ಬಿಂದು ಮಾಲಿನಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ‘ಹಾಡು ಪಾಡು ಇವರ ಸಿಂಗಾರ, ನೋಡಾ ಬಾರ ಭುವಿಗೆ ಮಾಯ್ಕಾರ..’ ಗೀತೆ ಬಿಡುಗಡೆ ಆಗಿದೆ. ಕಿರಣ್ ಕಾವೇರಪ್ಪ ಹಾಗೂ ಉದಯ್ ರಾಜ್ ಅವರ ಸಾಹಿತ್ಯದಲ್ಲಿ ಮೂಡಿಬಂದಿರುವ ಈ ಗೀತೆಗೆ ಎಂ.ಡಿ. ಪಲ್ಲವಿ, ಬಿಂದು ಮಾಲಿನಿ, ಉಮಾ ವೈಜಿ, ಮೋಹನ್  ಕುಮಾರ್, ಶೃಂಗ ಬಿ.ವಿ. ಧ್ವನಿ ನೀಡಿದ್ದಾರೆ. ದೇವರಾಜ್. ಆರ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸತ್ಯ ಹೆಗಡೆ ಅವರ ಸಹ ನಿರ್ಮಾಣವಿದೆ.

ಇದನ್ನೂ ಓದಿ: Mansore: ‘19.20.21’ ಟ್ರೇಲರ್​ಗೆ ಭರಪೂರ ಮೆಚ್ಚುಗೆ; ಮಂಸೋರೆ ನಿರ್ದೇಶನದ ಸಿನಿಮಾ ಮಾರ್ಚ್​ 3ಕ್ಕೆ ರಿಲೀಸ್

ಶೃಂಗ ಬಿ.ವಿ., ಬಾಲಾಜಿ ಮನೋಹರ್, ಸಂಪತ್, ಎಂ.ಡಿ. ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಸೇರಿದಂತೆ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಶಿವು ಬಿ.ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ. ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಅವರ ಸಾಹಿತ್ಯ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:46 pm, Sun, 26 February 23

ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ