AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mansore: ‘19.20.21’ ಟ್ರೇಲರ್​ಗೆ ಭರಪೂರ ಮೆಚ್ಚುಗೆ; ಮಂಸೋರೆ ನಿರ್ದೇಶನದ ಸಿನಿಮಾ ಮಾರ್ಚ್​ 3ಕ್ಕೆ ರಿಲೀಸ್

19.20.21 Kannada Movie Trailer: ‘19.20.21’ ಸಿನಿಮಾದ ಟ್ರೇಲರ್​ ಹೊಸ ಟಾಕ್​ ಸೃಷ್ಟಿ ಮಾಡಿದೆ. ಕನ್ನಡ ಚಿತ್ರರಂಗಕ್ಕೆ ಇಂಥ ಕಂಟೆಂಟ್​ ಓರಿಯೆಂಟೆಡ್​ ಸಿನಿಮಾಗಳ ಅಗತ್ಯವಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

Mansore: ‘19.20.21’ ಟ್ರೇಲರ್​ಗೆ ಭರಪೂರ ಮೆಚ್ಚುಗೆ; ಮಂಸೋರೆ ನಿರ್ದೇಶನದ ಸಿನಿಮಾ ಮಾರ್ಚ್​ 3ಕ್ಕೆ ರಿಲೀಸ್
‘19.20.21’ ಸಿನಿಮಾದ ದೃಶ್ಯ
ಮದನ್​ ಕುಮಾರ್​
|

Updated on: Feb 15, 2023 | 7:43 PM

Share

ಪ್ರತಿ ಬಾರಿಯೂ ಗಮನ ಸೆಳೆಯುವಂತಹ ವಿಷಯವನ್ನು ಇಟ್ಟುಕೊಂಡು ಸಿನಿಮಾ ಮಾಡುವವರು ನಿರ್ದೇಶಕ ಮಂಸೋರೆ (Mansore). ‘ಹರಿವು’, ‘ನಾತಿಚರಾಮಿ’, ‘ಆಕ್ಟ್​ 1978’ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಅವರು ಈಗ ‘19.20.21’ (19.20.21 Movie) ಚಿತ್ರವನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಪೋಸ್ಟರ್​ ಮತ್ತು ಟೀಸರ್​ ಮೂಲಕ ಕೌತುಕ ಮೂಡಿಸಿದ್ದ ಈ ಸಿನಿಮಾದ ಟ್ರೇಲರ್​ ಈಗ ಬಿಡುಗಡೆ ಆಗಿದೆ. ಸಂಗೀತ ನಿರ್ದೇಶಕ ಹಂಸಲೇಖ ಮತ್ತು ಲೈಂಗಿಕ ಅಲ್ಪ ಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್​ ಪದ್ಮಶಾಲಿ ಅವರ ಸಮ್ಮುಖದಲ್ಲಿ ‘19.20.21’ ಟ್ರೇಲರ್​ (19.20.21 Movie Trailer) ಅನಾವರಣ ಮಾಡಲಾಗಿದೆ. ಇದರಲ್ಲಿನ ಕಥಾವಸ್ತು ನೋಡಿ ಸಿನಿಪ್ರಿಯರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಬಿಡುಗಡೆಯಾದ ಕೂಡಲೇ ‘19.20.21’ ಟ್ರೇಲರ್​ ಹೊಸ ಟಾಕ್​ ಸೃಷ್ಟಿ ಮಾಡಿದೆ. ಕನ್ನಡ ಚಿತ್ರರಂಗಕ್ಕೆ ಇಂಥ ಕಂಟೆಂಟ್​ ಓರಿಯೆಂಟೆಡ್​ ಸಿನಿಮಾಗಳ ಅಗತ್ಯವಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಕಾಡಿನ ಜನರ ಮೇಲೆ ನಡೆದ ದೌರ್ಜನ್ಯದ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಇನ್ನೂ ಅನೇಕ ವಿಷಯಗಳ ಮೇಲೆ ‘19.20.21’ ಸಿನಿಮಾ ಬೆಳಕು ಚೆಲ್ಲಲಿದೆ.

ಇದನ್ನೂ ಓದಿ: ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

ಇದನ್ನೂ ಓದಿ
Image
‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ
Image
ಬದುಕು ಬದಲಿಸಿದ ಹೆದ್ದಾರಿಯಿಂದಲೇ ಸಾವು; ಸಂಚಾರಿ ವಿಜಯ್ ನೆನೆದು ದುಃಖ ಹೊರಹಾಕಿದ ನಿರ್ದೇಶಕ ಮಂಸೋರೆ
Image
ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
Image
ಮಂಸೋರೆ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರಾ ಸಾಯಿ ಪಲ್ಲವಿ? ಇಲ್ಲಿದೆ ಅಸಲಿಯತ್ತು

ಅಕ್ಕಯ್​ ಪದ್ಮಶಾಲಿ ಮತ್ತು ಹಂಸಲೇಖ ಅವರು ‘19.20.21’ ಟ್ರೇಲರ್​ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಹೆಚ್ಚು ಜನರನ್ನು ತಲುಪಲಿ ಎಂದು ಅವರು ಹಾರೈಸಿದ್ದಾರೆ. ಮಂಸೋರೆ ಅವರು ಭಿನ್ನವಾದ ಈ ಪ್ರಯತ್ನಕ್ಕೆ ನಿರ್ಮಾಪಕ ದೇವರಾಜ್​ ಆರ್​. ಅವರು ಬೆಂಬಲವಾಗಿ ನಿಂತಿದ್ದಾರೆ. ‘ಡಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ಅಗಲಿದ ಗೆಳೆಯ ಸಂಚಾರಿ ವಿಜಯ್​ಗಾಗಿ ‘ಪುಕ್ಸಟ್ಟೆ ಲೈಫು’ ಚಿತ್ರದ ಟಿಕೆಟ್​ ಖರೀದಿಸಿ, ಪತ್ರ ಬರೆದ ಮಂಸೋರೆ

ಮಾರ್ಚ್​ 3ರಂದು ‘19.20.21’ ಸಿನಿಮಾ ಬಿಡುಗಡೆ ಆಗಲಿದೆ. ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಶೃಂಗ ಬಿ.ವಿ., ಬಾಲಾಜಿ ಮನೋಹರ್​, ಅವಿನಾಶ್​, ಕೃಷ್ಣ ಹೆಬ್ಬಾಳೆ, ವಿಶ್ವ ಕರ್ಣ, ಎಂ.ಡಿ. ಪಲ್ಲವಿ, ಸಂಪತ್​ ಕುಮಾರ್​, ರಾಜೇಶ್​ ನಟರಂಗ ಸೇರಿದಂತೆ ಹಲವರು ನಟಿಸಿದ್ದಾರೆ. ಶಿವ ಬಿ.ಕೆ. ಕುಮಾರ್​ ಛಾಯಾಗ್ರಹಣ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್​ ಆರ್ಮುಗಂ ಸಂಕಲನ, ರೋಣದ ಬಕ್ಕೇಶ್​ ಹಿನ್ನೆಲೆ ಸಂಗೀತ, ಕಿರಣ್​ ಕಾವೇರಪ್ಪ ಸಾಹಿತ್ಯ ಈ ಚಿತ್ರಕ್ಕಿದೆ.

ಕನ್ನಡಿಗರು ಮಾತ್ರವಲ್ಲದೇ ಪರಭಾಷೆಯ ಪ್ರೇಕ್ಷಕರು ಕೂಡ ‘19.20.21’ ಟ್ರೇಲರ್​ ನೋಡಿ ಕಮೆಂಟ್​ ಮಾಡುತ್ತಿದ್ದಾರೆ. ಇದು ಗಡಿ ಮೀರಿ ಎಲ್ಲರನ್ನೂ ಸೆಳೆಯುವ ಸಿನಿಮಾ ಎಂಬ ಅಭಿಪ್ರಾಯ ಬಹುತೇಕರಿಂದ ಕೇಳಿ ಬರುತ್ತಿದೆ. ಪ್ರಶಸ್ತಿಗಳು ಕೂಡ ಖಂಡಿತ ಬರಲಿವೆ ಎಂದು ಹಲವರು ಭವಿಷ್ಯ ನುಡಿಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ