AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mansore: ‘19.20.21’ ಟ್ರೇಲರ್​ಗೆ ಭರಪೂರ ಮೆಚ್ಚುಗೆ; ಮಂಸೋರೆ ನಿರ್ದೇಶನದ ಸಿನಿಮಾ ಮಾರ್ಚ್​ 3ಕ್ಕೆ ರಿಲೀಸ್

19.20.21 Kannada Movie Trailer: ‘19.20.21’ ಸಿನಿಮಾದ ಟ್ರೇಲರ್​ ಹೊಸ ಟಾಕ್​ ಸೃಷ್ಟಿ ಮಾಡಿದೆ. ಕನ್ನಡ ಚಿತ್ರರಂಗಕ್ಕೆ ಇಂಥ ಕಂಟೆಂಟ್​ ಓರಿಯೆಂಟೆಡ್​ ಸಿನಿಮಾಗಳ ಅಗತ್ಯವಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ.

Mansore: ‘19.20.21’ ಟ್ರೇಲರ್​ಗೆ ಭರಪೂರ ಮೆಚ್ಚುಗೆ; ಮಂಸೋರೆ ನಿರ್ದೇಶನದ ಸಿನಿಮಾ ಮಾರ್ಚ್​ 3ಕ್ಕೆ ರಿಲೀಸ್
‘19.20.21’ ಸಿನಿಮಾದ ದೃಶ್ಯ
Follow us
ಮದನ್​ ಕುಮಾರ್​
|

Updated on: Feb 15, 2023 | 7:43 PM

ಪ್ರತಿ ಬಾರಿಯೂ ಗಮನ ಸೆಳೆಯುವಂತಹ ವಿಷಯವನ್ನು ಇಟ್ಟುಕೊಂಡು ಸಿನಿಮಾ ಮಾಡುವವರು ನಿರ್ದೇಶಕ ಮಂಸೋರೆ (Mansore). ‘ಹರಿವು’, ‘ನಾತಿಚರಾಮಿ’, ‘ಆಕ್ಟ್​ 1978’ ಸಿನಿಮಾಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಅವರು ಈಗ ‘19.20.21’ (19.20.21 Movie) ಚಿತ್ರವನ್ನು ಪ್ರೇಕ್ಷಕರ ಎದುರು ತರುತ್ತಿದ್ದಾರೆ. ಪೋಸ್ಟರ್​ ಮತ್ತು ಟೀಸರ್​ ಮೂಲಕ ಕೌತುಕ ಮೂಡಿಸಿದ್ದ ಈ ಸಿನಿಮಾದ ಟ್ರೇಲರ್​ ಈಗ ಬಿಡುಗಡೆ ಆಗಿದೆ. ಸಂಗೀತ ನಿರ್ದೇಶಕ ಹಂಸಲೇಖ ಮತ್ತು ಲೈಂಗಿಕ ಅಲ್ಪ ಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್​ ಪದ್ಮಶಾಲಿ ಅವರ ಸಮ್ಮುಖದಲ್ಲಿ ‘19.20.21’ ಟ್ರೇಲರ್​ (19.20.21 Movie Trailer) ಅನಾವರಣ ಮಾಡಲಾಗಿದೆ. ಇದರಲ್ಲಿನ ಕಥಾವಸ್ತು ನೋಡಿ ಸಿನಿಪ್ರಿಯರು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಬಿಡುಗಡೆಯಾದ ಕೂಡಲೇ ‘19.20.21’ ಟ್ರೇಲರ್​ ಹೊಸ ಟಾಕ್​ ಸೃಷ್ಟಿ ಮಾಡಿದೆ. ಕನ್ನಡ ಚಿತ್ರರಂಗಕ್ಕೆ ಇಂಥ ಕಂಟೆಂಟ್​ ಓರಿಯೆಂಟೆಡ್​ ಸಿನಿಮಾಗಳ ಅಗತ್ಯವಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಕಾಡಿನ ಜನರ ಮೇಲೆ ನಡೆದ ದೌರ್ಜನ್ಯದ ಕಥೆ ಈ ಸಿನಿಮಾದಲ್ಲಿ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಇನ್ನೂ ಅನೇಕ ವಿಷಯಗಳ ಮೇಲೆ ‘19.20.21’ ಸಿನಿಮಾ ಬೆಳಕು ಚೆಲ್ಲಲಿದೆ.

ಇದನ್ನೂ ಓದಿ: ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ

ಇದನ್ನೂ ಓದಿ
Image
‘777 ಚಾರ್ಲಿ’ ಸಿನಿಮಾಗೆ ಮಾತ್ರ ತೆರಿಗೆ ವಿನಾಯಿತಿ ಯಾಕೆ? ಬೊಮ್ಮಾಯಿ ಸರ್ಕಾರದ ಕಿವಿ ಹಿಂಡಿದ ಮಂಸೋರೆ
Image
ಬದುಕು ಬದಲಿಸಿದ ಹೆದ್ದಾರಿಯಿಂದಲೇ ಸಾವು; ಸಂಚಾರಿ ವಿಜಯ್ ನೆನೆದು ದುಃಖ ಹೊರಹಾಕಿದ ನಿರ್ದೇಶಕ ಮಂಸೋರೆ
Image
ಡಿಫರೆಂಟ್​ ಪಾತ್ರದಲ್ಲಿ ಪುನೀತ್​; ‘ಮಿಷನ್​ ಕೊಲಂಬಸ್​’ ಚಿತ್ರಕ್ಕಾಗಿ ಮಂಸೋರೆ ಕಂಡಿದ್ದ ಕನಸು ಭಗ್ನ
Image
ಮಂಸೋರೆ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರಾ ಸಾಯಿ ಪಲ್ಲವಿ? ಇಲ್ಲಿದೆ ಅಸಲಿಯತ್ತು

ಅಕ್ಕಯ್​ ಪದ್ಮಶಾಲಿ ಮತ್ತು ಹಂಸಲೇಖ ಅವರು ‘19.20.21’ ಟ್ರೇಲರ್​ ನೋಡಿ ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಹೆಚ್ಚು ಜನರನ್ನು ತಲುಪಲಿ ಎಂದು ಅವರು ಹಾರೈಸಿದ್ದಾರೆ. ಮಂಸೋರೆ ಅವರು ಭಿನ್ನವಾದ ಈ ಪ್ರಯತ್ನಕ್ಕೆ ನಿರ್ಮಾಪಕ ದೇವರಾಜ್​ ಆರ್​. ಅವರು ಬೆಂಬಲವಾಗಿ ನಿಂತಿದ್ದಾರೆ. ‘ಡಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಇದನ್ನೂ ಓದಿ: ಅಗಲಿದ ಗೆಳೆಯ ಸಂಚಾರಿ ವಿಜಯ್​ಗಾಗಿ ‘ಪುಕ್ಸಟ್ಟೆ ಲೈಫು’ ಚಿತ್ರದ ಟಿಕೆಟ್​ ಖರೀದಿಸಿ, ಪತ್ರ ಬರೆದ ಮಂಸೋರೆ

ಮಾರ್ಚ್​ 3ರಂದು ‘19.20.21’ ಸಿನಿಮಾ ಬಿಡುಗಡೆ ಆಗಲಿದೆ. ಪ್ರತಿಭಾವಂತ ಕಲಾವಿದರು ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಶೃಂಗ ಬಿ.ವಿ., ಬಾಲಾಜಿ ಮನೋಹರ್​, ಅವಿನಾಶ್​, ಕೃಷ್ಣ ಹೆಬ್ಬಾಳೆ, ವಿಶ್ವ ಕರ್ಣ, ಎಂ.ಡಿ. ಪಲ್ಲವಿ, ಸಂಪತ್​ ಕುಮಾರ್​, ರಾಜೇಶ್​ ನಟರಂಗ ಸೇರಿದಂತೆ ಹಲವರು ನಟಿಸಿದ್ದಾರೆ. ಶಿವ ಬಿ.ಕೆ. ಕುಮಾರ್​ ಛಾಯಾಗ್ರಹಣ, ಬಿಂದು ಮಾಲಿನಿ ಸಂಗೀತ ನಿರ್ದೇಶನ, ಸುರೇಶ್​ ಆರ್ಮುಗಂ ಸಂಕಲನ, ರೋಣದ ಬಕ್ಕೇಶ್​ ಹಿನ್ನೆಲೆ ಸಂಗೀತ, ಕಿರಣ್​ ಕಾವೇರಪ್ಪ ಸಾಹಿತ್ಯ ಈ ಚಿತ್ರಕ್ಕಿದೆ.

ಕನ್ನಡಿಗರು ಮಾತ್ರವಲ್ಲದೇ ಪರಭಾಷೆಯ ಪ್ರೇಕ್ಷಕರು ಕೂಡ ‘19.20.21’ ಟ್ರೇಲರ್​ ನೋಡಿ ಕಮೆಂಟ್​ ಮಾಡುತ್ತಿದ್ದಾರೆ. ಇದು ಗಡಿ ಮೀರಿ ಎಲ್ಲರನ್ನೂ ಸೆಳೆಯುವ ಸಿನಿಮಾ ಎಂಬ ಅಭಿಪ್ರಾಯ ಬಹುತೇಕರಿಂದ ಕೇಳಿ ಬರುತ್ತಿದೆ. ಪ್ರಶಸ್ತಿಗಳು ಕೂಡ ಖಂಡಿತ ಬರಲಿವೆ ಎಂದು ಹಲವರು ಭವಿಷ್ಯ ನುಡಿಯುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ