AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manvita Kamat: ಮಾನ್ವಿತಾದ್ದು ಲವ್ ಮ್ಯಾರೇಜ್? ಅಸಲಿ ವಿಚಾರ ಹೇಳಿದ ನಟಿ

ಮೇ 1ಕ್ಕೆ ವಿವಾಹ ನಡೆಯಲಿದೆ. ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆಯಲಿದೆ. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದೆ. ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ ಎಂದು ಮಾನ್ವಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.  

Manvita Kamat: ಮಾನ್ವಿತಾದ್ದು ಲವ್ ಮ್ಯಾರೇಜ್? ಅಸಲಿ ವಿಚಾರ ಹೇಳಿದ ನಟಿ
ಮಾನ್ವಿತಾ
ರಾಜೇಶ್ ದುಗ್ಗುಮನೆ
|

Updated on: Apr 27, 2024 | 3:46 PM

Share

ನಟಿ ಮಾನ್ವಿತಾ ಕಾಮತ್ (Manvita Kamath) ಅವರು ವಿವಾಹ ಆಗುತ್ತಿದ್ದಾರೆ. ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಮಾನ್ವಿತಾ ಕೈಹಿಡಿಯುತ್ತಿದ್ದಾರೆ. ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ವಿವಾಹ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಲು ಮಾನ್ವಿತಾ ಅವರು ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಅವರು ಮದುವೆ ಬಳಿಕ ಯಾವೆಲ್ಲ ಪ್ಲ್ಯಾನ್ ಹೊಂದಿದ್ದಾರೆ ಎನ್ನುವ ಬಗ್ಗೆ ಅವರು ಮಾತನಾಡಿದ್ದಾರೆ.

ಮೇ 1ಕ್ಕೆ ವಿವಾಹ ನಡೆಯಲಿದೆ. ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆಯಲಿದೆ. ಏಪ್ರಿಲ್ 29ರಂದು ಹಳದಿ ಶಾಸ್ತ್ರ ನಡೆಯಲಿದೆ. ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ಏಪ್ರಿಲ್ 30ರಂದು ನಡೆಯಲಿದೆ ಎಂದು ಮಾನ್ವಿತಾ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಮಾನ್ವಿತಾ ಅವರದ್ದು ಲವ್ ಮ್ಯಾರೇಜ್ ಎನ್ನುವ ಗಾಸಿಪ್ ಇದೆ. ಇದಕ್ಕೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ‘ನಮ್ಮದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಮದುವೆ ಆಗುತ್ತಿದ್ದೇವೆ. ಕನ್ನಡ ಚಿತ್ರರಂಗದ ಕಲಾವಿದರಿಗಾಗಿ ಗೆಟ್​​ ಟುಗೆದರ್ ಮಾಡೋ ಯೋಜನೆ ಇದೆ’ ಎಂದು ಮಾನ್ವಿತಾ ಹೇಳಿದ್ದಾರೆ.

ಸಾಮಾನ್ಯವಾಗಿ ಮದುವೆ ಆದ ಬಳಿಕ ನಟಿಯರು ಸಿನಿಮಾರಂಗದಿಂದ ದೂರವೇ ಇರುತ್ತಾರೆ. ಮದುವೆ ಬಳಿಕ ಸಿನಿಮಾ ಮಾಡುತ್ತಾ ಇರುವವರೂ ಇದ್ದಾರೆ. ಇದರಲ್ಲಿ ಒಬ್ಬೊಬ್ಬರ ನಿರ್ಧಾರ ಒಂದೊಂದು ರೀತಿ ಇದೆ. ಈ ಬಗ್ಗೆ ಮಾನ್ವಿತಾ ಮಾತನಾಡಿದ್ದಾರೆ. ‘ಮದುವೆ ನಂತರವೂ ಸಿನಿಮಾಗಳನ್ನು ಮಾಡುತ್ತೇನೆ. ವೈಯಕ್ತಿಕ ಬೇರೆ, ಪ್ರೊಫೆಷನಲ್ ಬೇರೆ. ಅದನ್ನು ಮಿಕ್ಸ್ ಅಪ್ ಮಾಡಲ್ಲ’ ಎಂದಿದ್ದಾರೆ ಮಾನ್ವಿತಾ.

ಇದನ್ನೂ ಓದಿ: ನಟಿ ಮಾನ್ವಿತಾಗೆ ಕೂಡಿಬಂತು ಕಂಕಣ ಭಾಗ್ಯ; ಹುಡ್ಗ ಯಾರು? ಮದ್ವೆ ಎಲ್ಲಿ?

ಮದುವೆ ಬಳಿಕ ಮಾನ್ವಿತಾ ಸಿನಿಮಾ ಮಾಡಿದರೆ ತಮಗೆ ಯಾವುದೇ ಅಭ್ಯಂತರ ಇಲ್ಲ ಎಂದು ಮಾನ್ವಿತಾ ಹೇಳಿದ್ದಾರೆ.  ಮೈಸೂರಿನಲ್ಲಿ ಅರುಣ್ ಇಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ. ಸದ್ಯ ಮಾನ್ವಿತಾ ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?