AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneetha Parva: ಪುನೀತ ಪರ್ವಕ್ಕೆ ಚೆನ್ನೈನಿಂದ ಸೂರ್ಯ ಬಂದರೂ ಕನ್ನಡದ ಕೆಲವು ನಟರೇ ಬರಲಿಲ್ಲ; ನೆಟ್ಟಿಗರ ಟೀಕೆ

Gandhada Gudi: ಪುನೀತ್​ ರಾಜ್​ಕುಮಾರ್​ ಅವರಿಗೋಸ್ಕರ ಎಲ್ಲರೂ ಒಂದೆಡೆ ಸೇರಲು ಸಿಕ್ಕಿದ ಅಪರೂಪದ ಅವಕಾಶ ಇದಾಗಿತ್ತು. ಇಂಥ ಕಾರ್ಯಕ್ರಮಕ್ಕೆ ಬರಲಾಗದೇ ನೆಪ ಹೇಳಿರುವುದು ಸರಿಯಲ್ಲ ಎಂಬುದು ಜನರ ಅಭಿಪ್ರಾಯ.

Puneetha Parva: ಪುನೀತ ಪರ್ವಕ್ಕೆ ಚೆನ್ನೈನಿಂದ ಸೂರ್ಯ ಬಂದರೂ ಕನ್ನಡದ ಕೆಲವು ನಟರೇ ಬರಲಿಲ್ಲ; ನೆಟ್ಟಿಗರ ಟೀಕೆ
ಪುನೀತ್​ ರಾಜ್​ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on:Oct 22, 2022 | 4:47 PM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಅಜಾತಶತ್ರು ಆಗಿದ್ದರು. ಚಿತ್ರರಂಗದ ಎಲ್ಲರ ಜೊತೆಗೂ ಅವರು ಉತ್ತಮ ಒಡನಾಟ ಹೊಂದಿದ್ದರು. ಅನೇಕ ಸಿನಿಮಾ ತಂಡಗಳಿಗೆ ಅವರು ಬೆನ್ನು ತಟ್ಟಿದ್ದರು. ಈಗ ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​ ‘ಗಂಧದ ಗುಡಿ’ (Gandhada Gudi) ಬಿಡುಗಡೆಗೆ ಸಜ್ಜಾಗಿದೆ. ಅದರ ಸಲುವಾಗಿ ಅ.21ರಂದು ಪ್ರೀ-ರಿಲೀಸ್​ ಇವೆಂಟ್​ ಮಾಡಲಾಯಿತು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಲಕ್ಷಾಂತರ ಅಭಿಮಾನಿಗಳು ಹಾಗೂ ನೂರಾರು ಮಂದಿ ಸ್ಟಾರ್​ ಕಲಾವಿದರು ಹಾಗೂ ತಂತ್ರಜ್ಞರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಿತು. ‘ಪುನೀತ ಪರ್ವ’ (Puneetha Parva) ಹೆಸರಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಕನ್ನಡ ಕೆಲವು ಕಲಾವಿದರು ಗೈರಾಗಿದ್ದು ಬೇಸರದ ಸಂಗತಿ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ.

‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಹಾಜರಾಗದೇ ಇರುವುದಕ್ಕೆ ಕೆಲವು ನಟರು ಕುಂಟು ನೆಪಗಳನ್ನು ನೀಡಿದ್ದಾರೆ. ಈ ದಿನಾಂಕದಲ್ಲೇ ಕಾರ್ಯಕ್ರಮ ನಡೆಯಲಿದೆ ಎಂಬುದು ಮೊದಲೇ ಗೊತ್ತಾಗಿತ್ತು. ಆದರೂ ಕೂಡ ಕೆಲವರು ಸಮಯ ಹೊಂದಿಸಿಕೊಳ್ಳದೇ ಇರುವುದು ಯಾಕೆ ಎಂಬುದು ಎಲ್ಲರ ಮನದಲ್ಲೂ ಹುಟ್ಟಿಕೊಂಡಿರುವ ಪ್ರಶ್ನೆ. ಪರಭಾಷೆ ಕಲಾವಿದರು ಪುನೀತ್​ ಮೇಲಿನ ಪ್ರೀತಿ-ಗೌರವದಿಂದ ಬೆಂಗಳೂರಿಗೆ ಬಂದರು. ತಮಿಳಿನ ನಟರಾದ ಸೂರ್ಯ, ಸಿದ್ಧಾರ್ಥ್​, ತೆಲುಗು ಕಲಾವಿದರಾದ ರಾಣಾ ದಗ್ಗುಬಾಟಿ, ಅಖಿಲ್​ ಅಕ್ಕಿನೇನಿ ಮುಂತಾದವರು ಬಂದು ಪುನೀತ್​ ಬಗ್ಗೆ ಅಭಿಮಾನದ ಮಾತುಗಳನ್ನು ಆಡಿದರು. ವಿಡಿಯೋ ಬೈಟ್​ ಮೂಲಕ ಅಮಿತಾಭ್​ ಬಚ್ಚನ್​, ಕಮಲ್ ಹಾಸನ್​ ಅವರು ಮಾತನಾಡಿದರು. ಆದರೆ ಚಂದನವನದ ಒಂದಷ್ಟು ನಟರೇ ಗೈರಾಗಿದ್ದು ಅಭಿಮಾನಿಗಳಿಗೆ ಅಸಮಾಧಾನ ತರಿಸಿದೆ.

ಇಡೀ ದೇಶದ ಗಮನ ಸೆಳೆಯುವ ರೀತಿಯಲ್ಲಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಿತು. ಪುನೀತ್​ ರಾಜ್​ಕುಮಾರ್​ ಅವರಿಗೋಸ್ಕರ ಎಲ್ಲರೂ ಒಂದೆಡೆ ಸೇರಲು ಸಿಕ್ಕಿದ ಅಪರೂಪದ ಅವಕಾಶ ಇದಾಗಿತ್ತು. ಇಂಥ ಕಾರ್ಯಕ್ರಮಕ್ಕೆ ಬರಲಾಗದೇ ನೆಪ ಹೇಳಿರುವುದು ಸರಿಯಲ್ಲ ಎಂಬುದು ಜನರ ಅಭಿಪ್ರಾಯ.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

ಅದೇನೇ ಇರಲಿ, ಲಕ್ಷಾಂತರ ಅಭಿಮಾನಿಗಳು ಈ ಕಾರ್ಯಕ್ರಮವನ್ನು ಕಣ್ತುಂಬಿಕೊಂಡಿದ್ದಾರೆ. ಅಪ್ಪು ಕನಸಿನ ‘ಗಂಧದ ಗುಡಿ’ ಚಿತ್ರ ಸೂಪರ್​ ಹಿಟ್​ ಆಗಲಿ ಎಂದು ಹಾರೈಸಿದ್ದಾರೆ. ಅ.28ರಂದು ಥಿಯೇಟರ್​ನಲ್ಲಿ ಈ ಸಾಕ್ಷ್ಯಚಿತ್ರ ರಿಲೀಸ್​ ಆಗಲಿದ್ದು, ಪುನೀತ್​ ರಾಜ್​ಕುಮಾ​ರ್​ ಅಭಿಮಾನಿಗಳಿಗೆ ವಿಶೇಷ ಅನುಭವ ನೀಡುವುದು ಖಚಿತ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:47 pm, Sat, 22 October 22

ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ