AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಸೆಟಲ್ ಆದರೂ ಕೊವಿಡ್ ಸಮಯದಲ್ಲಿ ಕನ್ನಡಿಗರ ಕಷ್ಟಕ್ಕೆ ಮಿಡಿದ ದರ್ಶನ್‌ ‘ಶಾಸ್ತ್ರಿ’ ಸಿನಿಮಾ ನಟಿ

ಲಾಕ್​ಡೌನ್​ನಿಂದಾಗಿ ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಶೂಟಿಂಗ್​ ಸಂಪೂರ್ಣ ನಿಂತುಹೋಗಿವೆ. ಹಾಗಾಗಿ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು, ಬಡ ಕಲಾವಿದರು ಬದುಕು ನಡೆಸುವುದು ಕಷ್ಟ ಆಗಿದೆ.

ಅಮೆರಿಕದಲ್ಲಿ ಸೆಟಲ್ ಆದರೂ ಕೊವಿಡ್ ಸಮಯದಲ್ಲಿ ಕನ್ನಡಿಗರ ಕಷ್ಟಕ್ಕೆ ಮಿಡಿದ ದರ್ಶನ್‌ 'ಶಾಸ್ತ್ರಿ' ಸಿನಿಮಾ ನಟಿ
ಮಾನ್ಯ ನಾಯ್ಡು- ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 12, 2021 | 3:08 PM

Share

ಕೊರೊನಾ ಸಂಕಷ್ಟದ ಸಮಯದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ಜನರ ಸಹಾಯಕ್ಕೆ ನಿಂತಿದ್ದಾರೆ. ತಮ್ಮ ಕೈಲಾದಷ್ಟು ಹಣ ನೀಡಿ, ಕಷ್ಟದಲ್ಲಿರುವವರಿಗೆ ನೆರವಾಗುತ್ತಿದ್ದಾರೆ. ಈಗ ದರ್ಶನ್​​ ನಟನೆಯ ‘ಶಾಸ್ತ್ರಿ’ ಸಿನಿಮಾದ ನಟಿ ಮಾನ್ಯ ನಾಯ್ಡು ಅವರು ಅಮೆರಿಕದಲ್ಲಿ ನೆಲಸಿದ್ದರೂ ಸಂಕಷ್ಟದಲ್ಲಿದ್ದರುವ ಕನ್ನಡಿಗರರಿಗಾಗಿ ಅವರ ಮನ ಮಿಡಿದಿದ್ದು, 1 ಲಕ್ಷ ರೂಪಾಯಿ ಧನ ಸಹಾಯ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ಲಾಕ್​ಡೌನ್​ನಿಂದಾಗಿ ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಶೂಟಿಂಗ್​ ಸಂಪೂರ್ಣ ನಿಂತುಹೋಗಿವೆ. ಹಾಗಾಗಿ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು, ಬಡ ಕಲಾವಿದರು ಬದುಕು ನಡೆಸುವುದು ಕಷ್ಟ ಆಗಿದೆ. ಅಂಥವರ ಸಹಾಯಕ್ಕೆ ನಟ ಉಪೇಂದ್ರ ಧಾವಿಸಿದ್ದಾರೆ. ಸಿನಿಮಾ ಚಟುವಟಿಕೆಗಳು ಸ್ಥಗಿತ ಆಗಿರುವುದರಿಂದ ಕೆಲಸ ಇಲ್ಲದೆ ಸಂಸಾರ ಸಾಗಿಸಲು ಕಷ್ಟಪಡುತ್ತಿರುವ ನೂರಾರು ಸಿನಿಮಾ ಕಾರ್ಮಿಕರು, ತಂತ್ರಜ್ಞರು ಹಾಗೂ ಕಲಾವಿದರ ಸಾವಿರಾರು ಕುಟುಂಬಗಳಿಗೆ ಉಪೇಂದ್ರ ಉಚಿತ ರೇಷನ್​ ಕಿಟ್​ಗಳನ್ನು ಹಂಚುವುದಾಗಿ ತಿಳಿಸಿದ್ದಾರೆ. ಇವರ ಕಾರ್ಯಕ್ಕೆ ಅನೇಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಸಾಧು ಕೋಕಿಲ ಸೇರಿ ಸಾಕಷ್ಟು ಜನರು ಉಪೇಂದ್ರ ಬೆಂಬಲಕ್ಕೆ ನಿಂತಿದ್ದಾರೆ. ಇದಕ್ಕೆ ಶಾಸ್ತ್ರಿ ಸಿನಿಮಾದ ನಟಿ ಮಾನ್ಯಾ ಕೂಡ ಕೈಜೋಡಿಸಿದ್ದಾರೆ.

‘ಶಾಸ್ತ್ರಿ’ ಸಿನಿಮಾದ ನಟಿ ಮಾನ್ಯಾ ನಾಯ್ಡು ಚಿತ್ರರಂಗ ತೊರೆದು ಅಮೆರಿಕದ ನ್ಯೂಯಾರ್ಕ್​ನಲ್ಲಿ ಸೆಟ್ಲ್​ ಆಗಿದ್ದಾರೆ. ಅವರು 1 ಲಕ್ಷ ರೂಪಾಯಿ ಸಹಾಯ ಮಾಡಿದ್ದಾರೆ. ಈ ಬಗ್ಗೆ ಉಪೇಂದ್ರ ಟ್ವೀಟ್​ ಮಾಡಿದ್ದಾರೆ. ಶಾಸ್ತ್ರಿ ಸಿನಿಮಾದ ನಟಿ ಮಾನ್ಯಾ ನಾಯ್ಡು ಸದ್ಯ ನ್ಯೂಯಾರ್ಕ್​​ನಲ್ಲಿ ವಾಸವಾಗಿದ್ದಾರೆ. ಅವರು 1 ಲಕ್ಷ ರೂಪಾಯಿ ನೀಡಿದ್ದು, ಸಹಾಯ ಅಗತ್ಯವಿರುವ ಕುಟುಂಬ ಹಾಗೂ ಮಕ್ಕಳಿಗೆ ಈ ಹಣ ಬಳಕೆ ಮಾಡಲು ಕೋರಿದ್ದಾರೆ. ಶೀಘ್ರದಲ್ಲೇ ಈ ಹಣದಿಂದ ದಿನಸಿ ಕಿಟ್​ಗಳನ್ನು ವಿತರಣೆ ಮಾಡುತ್ತಿದ್ದೇವೆ ಎಂದು ಉಪೇಂದ್ರ ಹೇಳಿದ್ದಾರೆ.

ಚೈಲ್ಡ್​ ಆರ್ಟಿಸ್ಟ್​ ಆಗಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದ ಮಾನ್ಯಾ ನಂತರ ತೆಲುಗಿನ ‘ಸೀತಾರಾಮ ರಾಜು’ ಚಿತ್ರದ ಮೂಲಕ ನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ಕನ್ನಡದಲ್ಲಿ ‘ಶಾಸ್ತ್ರಿ’, ‘ಅಂಬಿ’ ಮೊದಲಾದ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. 2010ರ ನಂತರ ಅವರು ಚಿತ್ರರಂಗದಿಂದ ದೂರ ಉಳಿದಿದ್ದಾರೆ.

ಇದನ್ನೂ ಓದಿ: Upendra: ಸಿನಿಮಾ ಕಾರ್ಮಿಕರ ಸಾವಿರಾರು ಕುಟುಂಬಗಳಿಗೆ ಉಚಿತ ದಿನಸಿ ಕಿಟ್​ ವಿತರಿಸಲಿರುವ ಉಪೇಂದ್ರ

ಉಪೇಂದ್ರ ಮಾಡುತ್ತಿರುವ ಪುಣ್ಯದ ಕೆಲಸಕ್ಕೆ ಕೈ ಜೋಡಿಸಿದ ಸಾಧುಕೋಕಿಲ, ಸರೋಜಾದೇವಿ ಮುಂತಾದ ಸೆಲೆಬ್ರಿಟಿಗಳು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು