AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep About Controversy: ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ? ಉತ್ತರ ನೀಡಿದ ಕಿಚ್ಚ ಸುದೀಪ್

Kichcha Sudeep On Mark Movie: ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಬಿಡುಗಡೆಗೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ಕಿತ್ತಾಟ ಶುರುವಾಗಿದೆ. ಪೈರಸಿ ವಿರುದ್ಧ ಕಿಚ್ಚ ಸುದೀಪ್ ಅವರು ಯುದ್ಧ ಸಾರಿದ್ದಾರೆ. ಅದರ ಕುರಿತು ಈ ಸಂದರ್ಶನದಲ್ಲಿ ಸುದೀಪ್ ಅವರು ಮಾತನಾಡಿದ್ದಾರೆ.

Kichcha Sudeep About Controversy: ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ? ಉತ್ತರ ನೀಡಿದ ಕಿಚ್ಚ ಸುದೀಪ್
Kichcha Sudeep
ಮದನ್​ ಕುಮಾರ್​
|

Updated on:Dec 23, 2025 | 8:12 PM

Share

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ ಚಿತ್ರದ (Mark Kannada Movie) ಪ್ರೀ-ರಿಲೀಸ್ ಇವೆಂಟ್ ನಡೆಯಿತು. ಆ ವೇದಿಕೆಯಲ್ಲಿ ಸುದೀಪ್ ಅವರು ಮಾತನಾಡಿದ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹೇಳಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ. ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ (Kichcha Sudeep) ಹೇಳಿದ್ದಾರೆ. ಹಾಗಾದ್ರೆ ಆ ವೇದಿಕೆಯಲ್ಲಿ ಪೈರಸಿ ಎಂಬ ಪದವನ್ನು ಸುದೀಪ್ ಯಾಕೆ ಬಳಸಲಿಲ್ಲ ಎಂಬ ಪ್ರಶ್ನೆ ಕೂಡ ಉದ್ಘವ ಆಗಿದೆ. ಆ ಎಲ್ಲ ವಿಷಯಗಳಿಗೆ ಸುದೀಪ್ ಅವರು ಈ ಸಂದರ್ಶನದಲ್ಲಿ (Kichcha Sudeep Interview) ಉತ್ತರ ನೀಡಿದ್ದಾರೆ.

ಪೈರಸಿ ಪದ ಬಳಸಿಲ್ಲ ಯಾಕೆ?

‘ನಾನು ಆ ವೇದಿಕೆಯಲ್ಲಿ ಪೈರಸಿ ಎಂಬ ಪದ ಬಳಕೆ ಮಾಡಿಲ್ಲ. ಹಾಗಾದರೆ ಇಡೀ ಚಿತ್ರರಂಗ ರಿಯಾಕ್ಟ್ ಮಾಡಬೇಕಿತ್ತಲ್ಲ. ಮೊದಲು ‘45’ ಚಿತ್ರತಂಡದವರು ರಿಯಾಕ್ಟ್ ಮಾಡಬೇಕಿತ್ತು. ಉಪ್ಪಿ ಸರ್, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ಗಣೇಶ್, ರಿಷಬ್ ಶೆಟ್ಟಿ, ಯಶ್ ಮುಂತಾದವರೆಲ್ಲ ರಿಯಾಕ್ಟ್ ಮಾಡಬೇಕಿತ್ತು. ನಾನು ಹೇಳಿಕೆ ನೀಡಿದೆ. ಎಲ್ಲಿಂದ ಸೌಂಡು ಬರುತ್ತದೆ ಅಂತ ನೋಡಿದೆ. ಚಿತ್ರರಂಗದಲ್ಲಿ ಒಂದು ಲಕ್ಷ ಜನರು ಇದ್ದಾರೆ. ಯಾರೂ ನಮ್ಮ ಮಾತಿಗೆ ಪ್ರತಿಕ್ರಿಯೆ ನೀಡಿಲ್ಲ. ಪ್ರತಿಕ್ರಿಯೆ ನೀಡಿದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು. ಅಲ್ಲಿ ಮಾತನಾಡಿದ ನನಗೆ ಘನತೆ ಇಲ್ಲವಾ? 30 ವರ್ಷದಿಂದ ಜನರು ನನ್ನನ್ನು ನೋಡಿಲ್ಲವೇ? ಯಾವತ್ತಾದರೂ ನಾನು ತಪ್ಪಾದ ಹೇಳಿಕೆ ನೀಡಿದ್ದೇನಾ? ಯಾವುದಾದರೂ ಕಲಾವಿದರ ಬಗ್ಗೆ ತಪ್ಪಾಗಿ ಮಾತನಾಡಿದ್ದೇನಾ?’

ಆ ರೀತಿ ಮಾತಾಡಿದ್ದಕ್ಕೆ ಕಾರಣ?

‘ಅಂದು ನಾನು ಅಲ್ಲಿ ಮಾತನಾಡುವುದಕ್ಕೂ ಮುನ್ನ ನನಗೆ ಒಂದು ಫೋನ್ ಕರೆ ಬಂದಿತ್ತು. ದುಡ್ಡಿಗಾಗಿ ನಿಮ್ಮ ಸಿನಿಮಾವನ್ನು ಪೈರಸಿ ಮಾಡುತ್ತಿಲ್ಲ. ನಿಮ್ಮ ಸಿನಿಮಾವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ಪೈರಸಿ ಮಾಡಲಿದ್ದಾರೆ ಎಂಬ ಮಾಹಿತಿ ಬಂತು. ಅದರ ವಿರುದ್ಧ ನಾನು ನಿಂತುಕೊಳ್ಳದೇ ಮತ್ತೆ ಯಾರು ಬರಬೇಕು? ಅಂದು ನಾನು ನನ್ನ ಸಂಭ್ರಮವನ್ನು ನಿಲ್ಲಿಸಿ, ಆ ಮಾತನ್ನು ಹೇಳಿದೆ ಎಂದರೆ ಅರ್ಥ ಮಾಡಿಕೊಳ್ಳಿ. ಯಾರು ಕೇಳಿಸಿಕೊಳ್ಳುತ್ತಿದ್ದಾರೋ ಅವರಿಗೆ ನಾನು ಆ ಮಾತನ್ನು ಹೇಳಬೇಕಿತ್ತು. ಅವರಿಗೆ ಅರ್ಥ ಆಗಿದೆ.’

ಆ ಮಾತು ಹೇಳಿದ್ದು ಯಾರಿಗೆ?

‘ಪ್ರಭುದ್ಧತೆ ಇಲ್ಲದೇ ಆವೇಷದಲ್ಲಿ ಏನೇನೋ ಮಾತಾಡುವವನು ನಾನಾಗಿದ್ದರೆ ಈಗಾಗಲೇ ಅನೇಕ ವಿವಾದಗಳಲ್ಲಿ ಸಿಕ್ಕಿಕೊಳ್ಳಬೇಕಿತ್ತು. ಬೇರೆಯವರ ಸಿನಿಮಾದಲ್ಲಿ ತಲೆ ಹಾಕುವ ಉದ್ದೇಶ ನನಗೆ ಇಲ್ಲ. ಇಂಥವರಿಗೆ ಹೇಳಿದ್ದು ಅಂತ ನಾನು ಹೇಳಿಲ್ಲ. ಅಷ್ಟು ಜನ ಕಲಾವಿದರು ಇದ್ದಾರೆ. ಎಲ್ಲರಿಗೂ ಸುದೀಪ್ ಗೊತ್ತು. ಅವರು ಯಾರೂ ಕೂಡ ಪ್ರತಿಕ್ರಿಯಿಸಿಲ್ಲ. ಯಾಕೆ ಪ್ರತಿಕ್ರಿಯಿಸಿಲ್ಲ ಎಂಬುದು ಅವರಿಗೆ ಗೊತ್ತು. ಬೇರೆ ಯಾರದ್ದೂ ಮಾತಿಗೆ ನಾನು ಯಾಕೆ ಪ್ರತಿಕ್ರಿಯೆ ನೀಡಬೇಕು? ನನ್ನ ಹೆಸರು ಹೇಳಿ ಮಾತನಾಡಿದರೆ ನಾನು ಪ್ರತಿಕ್ರಿಯೆ ಕೊಡುತ್ತೇನೆ.

‘ನಮ್ಮ ಸಿನಿಮಾ ಕಾಪಾಡಿಕೊಳ್ಳುವುದು ನಮಗೆ ಮುಖ್ಯ. ನನಗೆ ಅಹಂ ಇಲ್ಲ. ಅದರ ಅವಶ್ಯಕತೆ ನನಗೆ ಇಲ್ಲ. ಸಿನಿಮಾ ಬಿಟ್ಟು ಬೇರೆ ವಿಚಾರಗಳ ಬಗ್ಗೆ ನಾನು ಕೇರ್ ಮಾಡಲ್ಲ. ನನ್ನದು ಸಿಂಪಲ್ ಜೀವನ. ದರ್ಶನ್ ಬಗ್ಗೆ ನೀವು ಬಂದು ಕೇಳಿದಾಗ ನಾನು ಇಂದಿನ ತನಕ ಕೆಟ್ಟದಾಗಿ ಮಾತನಾಡಿಲ್ಲ. ನಾನು ಯಾಕೆ ಯಾರಿಗಾದರೂ ಕೆಟ್ಟದ್ದು ಬಯಸಬೇಕು? ನನ್ನ ಸಿನಿಮಾವನ್ನು ಅದರ ಪಾಡಿಗೆ ಬಿಟ್ಟುಬಿಡಬಹುದಲ್ಲ. ಯಾರು ಮಾಡುತ್ತಿದ್ದಾರೋ ಅವರಿಗೆ ಹೇಳಿದ್ದೇನೆ. ಅದು ಅವರಿಗೆ ತಲುಪಿದೆ. ಅವರನ್ನು ನಾನು ಬಿಡಲ್ಲ.’

ಇದನ್ನೂ ಓದಿ: ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ

ಪೈರಸಿ ವಿರುದ್ಧ ನಿಮ್ಮ ಯುದ್ಧ ಹೇಗೆ?

‘ವಿವಾದ ಮಾಡಲು ನಾನು ಇಲ್ಲಿ ಬಂದಿಲ್ಲ. ನನಗೆ ಆಗಿರುವ ನೋವನ್ನು ಊಹಿಸಿಕೊಳ್ಳಿ. ಪೈರಸಿ ವಿರುದ್ಧ ನಾವು ಏನು ಮಾಡುತ್ತಿದ್ದೇವೆ ಎಂಬುದನ್ನು ಈಗ ಹೇಳಲ್ಲ. ಪ್ರಯತ್ನ ಮಾಡುತ್ತಿದ್ದೇನೆ. ಯಶಸ್ವಿ ಆಗುತ್ತೇನೋ ಇಲ್ಲವೋ ಗೊತ್ತಿಲ್ಲ. ಯಶಸ್ವಿಯಾದರೆ ಪೈರಸಿ ಜಾಲವನ್ನು ಶೇಕಡ 80ರಷ್ಟು ಅಂತ್ಯಗೊಳಿಸುತ್ತೇವೆ. ಅದಕ್ಕಾಗಿ ಸರ್ಕಾರದಿಂದ ದೊಡ್ಡ ದೊಡ್ಡ ವ್ಯಕ್ತಿಗಳ ಸಹಾಯ ಕೇಳಿದ್ದೇವೆ. ಪ್ರತಿಯೊಬ್ಬರೂ ಅದಕ್ಕೆ ಸಹಕಾರ ಕೊಟ್ಟಿದ್ದಾರೆ.’

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:45 pm, Tue, 23 December 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?