AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja: ‘ಲವ್​ ಯೂ ಮಗಳೇ’ ಎಂದು ಮೊದಲ ಬಾರಿ ಪುತ್ರಿಯ ಫೋಟೋ ಹಂಚಿಕೊಂಡ ಧ್ರುವ ಸರ್ಜಾ

Dhruva Sarja Daughter Photo: ಧ್ರುವ ಸರ್ಜಾ ಅವರು ಮಗಳ ಫೋಟೋ ಹಂಚಿಕೊಂಡಿದ್ದಾರೆ. ಆದರೆ ಇದರಲ್ಲಿ ಪುತ್ರಿಯ ಮುಖ ಕಾಣಿಸಿಲ್ಲ. ಫೋಟೋ ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

Dhruva Sarja: ‘ಲವ್​ ಯೂ ಮಗಳೇ’ ಎಂದು ಮೊದಲ ಬಾರಿ ಪುತ್ರಿಯ ಫೋಟೋ ಹಂಚಿಕೊಂಡ ಧ್ರುವ ಸರ್ಜಾ
ಮಗಳ ಜೊತೆ ಧ್ರುವ ಸರ್ಜಾ
ಮದನ್​ ಕುಮಾರ್​
|

Updated on:Mar 10, 2023 | 4:16 PM

Share

ನಟ ಧ್ರುವ ಸರ್ಜಾ (Dhruva Sarja) ಅವರ ಬದುಕಿನಲ್ಲಿ ಮಗಳಿಂದಾಗಿ ಖುಷಿ ಹೆಚ್ಚಿದೆ. ಕಳೆದ ವರ್ಷ ಅಕ್ಟೋಬರ್ 2ರಂದು ಅವರ ಪತ್ನಿ ಪ್ರೇರಣಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಈವರೆಗೂ ಪುತ್ರಿಯ (Dhruva Sarja Daughter) ಫೋಟೋವನ್ನು ಈ ದಂಪತಿ ಹಂಚಿಕೊಂಡಿರಲಿಲ್ಲ. ಇದೇ ಮೊದಲ ಬಾರಿಗೆ ಮಗಳ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಧ್ರುವ ಸರ್ಜಾ ಅವರು ಶೇರ್​ ಮಾಡಿಕೊಂಡಿದ್ದಾರೆ. ‘ನನ್ನ ಮಗಳು.. ಐ ಲವ್​ ಯೂ ಮಗಳೇ’ ಎಂದು ಅವರು ಈ ಫೋಟೋಗೆ ಕ್ಯಾಪ್ಷನ್​ ನೀಡಿದ್ದಾರೆ. ಧ್ರುವ ಸರ್ಜಾ ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗಿದೆ. ‘ಮಾರ್ಟಿನ್’​ ಸಿನಿಮಾ (Martin Movie) ಕೆಲಸಗಳಲ್ಲಿ ತೊಡಗಿಕೊಂಡಿರುವ ಅವರು ಬಿಡುವಿನ ಸಮಯದಲ್ಲಿ ಮಗಳ ಜೊತೆ ಕಾಲ ಕಳೆಯುತ್ತಿದ್ದಾರೆ.

ಧ್ರುವ ಸರ್ಜಾ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಕುಟುಂಬಕ್ಕೆ ಅವರು ಹೆಚ್ಚು ಸಮಯ ಮೀಸಲಿಡುತ್ತಾರೆ. ಮಗಳ ಆಗಮನದ ಬಳಿಕವಂತೂ ಫ್ಯಾಮಿಲಿ ಜೊತೆ ಅವರ ಅಟ್ಯಾಚ್​ಮೆಂಟ್​ ಇನ್ನಷ್ಟು ಹೆಚ್ಚಾಗಿದೆ. ಅವರು ಹಂಚಿಕೊಂಡಿರುವ ಫೋಟೋ ನೋಡಿ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Dhruva Sarja: ಅಪ್ಪನಾದ ಖುಷಿಯಲ್ಲಿ ಆಸ್ಪತ್ರೆ ಎದುರು ಅಭಿಮಾನಿಗಳ ಜತೆ ಸೆಲ್ಫಿಗೆ ಪೋಸ್​ ಕೊಟ್ಟ ಧ್ರುವ ಸರ್ಜಾ
Image
ಧ್ರುವ ಸರ್ಜಾ-ಪ್ರೇರಣಾಗೆ ಹೆಣ್ಣು ಮಗು; ರಾಯನ್​ ಜತೆ ಬಂದು ಪ್ರತಿಕ್ರಿಯೆ ನೀಡಿದ ಮೇಘನಾ ರಾಜ್​
Image
Dhruva Sarja: ‘ಹೆಣ್ಮಕ್ಕಳ ಮೇಲೆ ಗೌರವ ಜಾಸ್ತಿ ಆಗಿದೆ’; ಮಗಳು ಜನಿಸಿದ ಬಳಿಕ ಧ್ರುವ ಸರ್ಜಾ ಫಸ್ಟ್​ ರಿಯಾಕ್ಷನ್
Image
Dhruva Sarja: ನಾ ಅಣ್ಣನನ್ನು ತುಂಬಾ ಮಿಸ್ ಮಾಡ್ಕೊತ್ತಿದ್ದೀನಿ: ಖುಷಿಯ ನಡುವೆ ಧ್ರುವ ಸರ್ಜಾರ ನೋವು..!

ಇದನ್ನೂ ಓದಿ: ಏಕಾಏಕಿ ದೇಹದ ತೂಕ ಇಳಿಸಿಕೊಂಡ್ರೆ ಸೈಡ್ ಎಫೆಕ್ಟ್ ಆಗುತ್ತಾ? ಧ್ರುವ ಸರ್ಜಾ ಹೇಳಿದ್ದಿಷ್ಟು

ಈ ಫೋಟೋದಲ್ಲಿ ಧ್ರುವ ಸರ್ಜಾ ಪುತ್ರಿಯ ಮುಖ ಕಾಣಿಸಿಲ್ಲ. ಅದು ಅಭಿಮಾನಿಗಳಿಗೆ ಸ್ವಲ್ಪ ಬೇಸರ ಮೂಡಿಸಿದೆ. ‘ಮಗಳು ತುಂಬ ಕ್ಯೂಟ್​ ಆಗಿದ್ದಾಳೆ. ಆದರೆ ಮುಖ ಕಾಣುವಂತಹ ಫೋಟೋ ಹಾಕಿ’ ಎಂದು ಅಭಿಮಾನಿಗಳು ಕಮೆಂಟ್​ ಬಾಕ್ಸ್​ನಲ್ಲಿ ರಿಕ್ವೆಸ್ಟ್​ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪುತ್ರಿಯ ಮುಖ ಕಾಣುವಂತಹ ಫೋಟೋವನ್ನು ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿ ಹಂಚಿಕೊಳ್ಳುತ್ತಾರೆ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ನಿರೀಕ್ಷೆ ಮೂಡಿಸಿದ ‘ಮಾರ್ಟಿನ್’​ ಸಿನಿಮಾ:

ಮಾಸ್​ ಸಿನಿಮಾಗಳ ಮೂಲಕ ಧ್ರುವ ಸರ್ಜಾ ಅವರು ಫೇಮಸ್​ ಆಗಿದ್ದಾರೆ. ಅವರ ‘ಮಾರ್ಟಿನ್​’ ಸಿನಿಮಾ ಕೂಡ ಸಿಕ್ಕಾಪಟ್ಟೆ ಮಾಸ್​ ಆಗಿ ಮೂಡಿಬರುತ್ತಿದೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಆಯಿತು. ಅದರಲ್ಲಿ ಕಾಣಿಸಿದ ಮೇಕಿಂಗ್​ ಝಲಕ್​ ನೋಡಿ ಸಿನಿಪ್ರಿಯರು ಫಿದಾ ಆಗಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಅಬ್ಬರಿಸೋದು ಗ್ಯಾರಂಟಿ ಎಂದು ಧ್ರುವ ಫ್ಯಾನ್ಸ್​ ಅಭಿಪ್ರಾಯ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: Dhruva Sarja: ‘ಹೆಣ್ಮಕ್ಕಳ ಮೇಲೆ ಗೌರವ ಜಾಸ್ತಿ ಆಗಿದೆ’; ಮಗಳು ಜನಿಸಿದ ಬಳಿಕ ಧ್ರುವ ಸರ್ಜಾ ಫಸ್ಟ್​ ರಿಯಾಕ್ಷನ್

ಸೂಪರ್​ ಹಿಟ್​ ಆಗಿದೆ ‘ಮಾರ್ಟಿನ್’​ ಟೀಸರ್​:

ಎ.ಪಿ. ಅರ್ಜುನ್​ ಅವರು ‘ಮಾರ್ಟಿನ್’​ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅವರ ಮತ್ತು ಧ್ರುವ ಸರ್ಜಾ ಕಾಂಬಿನೇಷನ್​ನಲ್ಲಿ ‘ಅದ್ದೂರಿ’ ಸಿನಿಮಾ ಮೂಡಿಬಂದಿತ್ತು. ಈಗ ‘ಮಾರ್ಟಿನ್​’ ಮೂಲಕ ಅವರಿಬ್ಬರು ಮತ್ತೆ ಕೈ ಜೋಡಿಸಿರುವುದು ನಿರೀಕ್ಷೆ ಹೆಚ್ಚಲು ಕಾರಣ ಆಗಿದೆ. ಯೂಟ್ಯೂಬ್​ನಲ್ಲಿ ಈ ಸಿನಿಮಾದ ಟೀಸರ್​ 77 ಮಿಲಿಯನ್​ಗಿಂತಲೂ ಹೆಚ್ಚು ಬಾರಿ ವೀಕ್ಷಣೆ ಕಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:16 pm, Fri, 10 March 23

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು