AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮದು ರಾಮಜನ್ಮ ಭೂಮಿ, ಕೆಲವರಿಂದ ಭಾರತಕ್ಕೆ ಕೆಟ್ಟ ಹೆಸರು’: ರೇಪ್ ಬಗ್ಗೆ ಧ್ರುವ ಸರ್ಜಾ ಗರಂ

ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಭೀಕರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಮಾರ್ಟಿನ್​’ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿರುವ ಅವರು ಈ ಗಂಭೀರ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಅಪರಾಧಿಗಳಿಗೆ ತೀವ್ರ ಶಿಕ್ಷೆ ಆಗಬೇಕು ಎಂದು ಧ್ರುವ ಸರ್ಜಾ ಒತ್ತಾಯಿಸಿದ್ದಾರೆ.

‘ನಮ್ಮದು ರಾಮಜನ್ಮ ಭೂಮಿ, ಕೆಲವರಿಂದ ಭಾರತಕ್ಕೆ ಕೆಟ್ಟ ಹೆಸರು’: ರೇಪ್ ಬಗ್ಗೆ ಧ್ರುವ ಸರ್ಜಾ ಗರಂ
ಧ್ರುವ ಸರ್ಜಾ
ಮದನ್​ ಕುಮಾರ್​
|

Updated on:Aug 19, 2024 | 5:31 PM

Share

ಇಡೀ ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಹಲವು ಸೆಲೆಬ್ರಿಟಿಗಳು ಈ ಕುರಿತು ಮಾತನಾಡುತ್ತಿದ್ದಾರೆ. ಮಹಿಳೆಯರ ಸುರಕ್ಷತೆ ಬಗ್ಗೆ ಚಿಂತೆ ಮಾಡಬೇಕಾದ ಪರಿಸ್ಥಿತಿ ಕುರಿತಂತೆ ಅನೇಕರು ಮೌನ ಮುರಿದಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಕೊಲ್ಕತ್ತಾದಲ್ಲಿ ನಡೆದ ರೇಪ್​ ಬಗ್ಗೆ ನಟ ಧ್ರುವ ಸರ್ಜಾ ಕೂಡ ಪ್ರತಿಕ್ರಿಯಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ. ‘ಮಾರ್ಟಿನ್​’ ಸಿನಿಮಾದ ಬಿಡುಗಡೆಯ ತಯಾರಿಯಲ್ಲಿರುವ ಅವರು ಅತ್ಯಾಚಾರದ ಕೇಸ್​​ಗಳ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ನಾನು ಮಾರ್ಟಿನ್​ ಸಿನಿಮಾದ ಪ್ರಚಾರದಲ್ಲಿ ಇದ್ದೇನೆ ಎಂಬುದು ಹೌದು. ಮಾರ್ಟಿನ್​ ಸಿನಿಮಾವನ್ನು ಒಂದು ನಿಮಿಷ ಪಕ್ಕಕ್ಕೆ ಇಟ್ಟುಬಿಡೋಣ. ಇವತ್ತು ವಿಡಿಯೋ ಮಾಡುತ್ತಿರುವ ಉದ್ದೇಶ, 2024ರ ಆಗಸ್ಟ್​ 14ರ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಪ್ರತಿ 16 ನಿಮಿಷಕ್ಕೆ ಒಂದು ಹೆಣ್ಮಗು ಮೇಲೆ ಅತ್ಯಾಚಾರ ನಡೆಯುತ್ತಿದೆ. ಎಲ್ಲಿ ಹೆಣ್ಣುಮಕ್ಕಳಿಗೆ ಮರ್ಯಾದೆ, ಗೌರವ ಇರುವುದಿಲ್ಲವೋ ಅಲ್ಲಿ ಭಗವಂತನೇ ಇರುವುದಿಲ್ಲ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

‘ನಮ್ಮದು ರಾಮಜನ್ಮ ಭೂಮಿ. ಕೆಲವರು ಮಾಡುವ ಕೃತ್ಯದಿಂದ ನಮ್ಮ ಭಾರತಕ್ಕೆ ಕೆಟ್ಟ ಹೆಸರು. ಹೆಣ್ಮಕ್ಕಳಿಗೆ ಮಾತ್ರ ಹೀಗಿರಿ, ಹಾಗಿರಿ, ಹೀಗೆಯೇ ಬಟ್ಟೆ ಹಾಕಬೇಕು, ಇದನ್ನೇ ಮಾಡಬೇಕು, ಅದನ್ನೇ ಮಾಡಬೇಕು ಅಂತ ಹೇಳುವುದಕ್ಕಿಂತ ಒಬ್ಬ ಹುಡುಗನನ್ನು ಬೆಳೆಸುವಾಗ ಮೂರು ವಿಷಯ ಕಡ್ಡಾಯವಾಗಿ ಪ್ರತಿಯೊಬ್ಬರ ಮನೆಯಲ್ಲಿ ಹೇಳಿಕೊಡಬೇಕು. ಹೆಣ್ಮಕ್ಕಳನ್ನು ಹೇಗೆ ರಕ್ಷಿಸಬೇಕು, ಹೇಗೆ ಬೆಂಬಲಿಸಬೇಕು, ಹೇಗೆ ಗೌರವಿಸಬೇಕು ಎಂಬುದನ್ನು ಹೇಳಿಕೊಡಲೇಬೇಕು’ ಎಂದಿದ್ದಾರೆ ಧ್ರುವ ಸರ್ಜಾ.

ಇದನ್ನೂ ಓದಿ: 11 ವರ್ಷ ಹಿಂದಿನ ರೇಪ್‌ ಆ್ಯಂಡ್ ಮರ್ಡರ್ ಪ್ರಕರಣ ಭೇದಿಸಿದ ಸಿಐಡಿ: ಮೂವರ ಬಂಧನ

‘ಇಂಥ ರೇಪಿಸ್ಟ್​ಗಳು ಸಿಕ್ಕಿ, ಕಾನೂನಿನ ಪ್ರಕಾರ ಶಿಕ್ಷೆ ಆಗಲಿ ಅಂತ ಆ ಭಗವಂತನಲ್ಲಿ ಕೇಳಿಕೊಳ್ಳುತ್ತೇವೆ. ಅವರಿಗೆ ಎಂಥ ಶಿಕ್ಷೆ ಕೊಟ್ಟರೂ ಸಮಾಧಾನ ಆಗಲ್ಲ. ಇಂಥ ನನ್ಮಕ್ಕಳನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಜೀವಂತವಾಗಿ ಸುಟ್ಟುಹಾಕಿದರೂ ಸಮಾಧಾನ ಆಗಲ್ಲ. ಆ ಭಗವಂತ ಇಂಥವರಿಗೆ ಒಳ್ಳೆಯದು ಮಾಡದೇ ಇರಲಿ ಅಂತ ಮನಸಾರೆ ಕೇಳಿಕೊಳ್ಳುತ್ತೇನೆ. ನನಗೂ ಹೆಣ್ಣು ಮಗಳು ಇದ್ದಾಳೆ. ಯಾರಿಗೋ ಅನ್ಯಾಯ ಆಗಿದೆ ಎಂದಾಗ ಅವರ ಜೊತೆ ನಾವು ಇರಬೇಕು. ದಯವಿಟ್ಟು ಧ್ವನಿಯೆತ್ತಿ. ಎಲ್ಲರೂ ನ್ಯಾಯ ಕೇಳೋಣ. ಇದು ಭಾರತವನ್ನು ಬದಲಾಯಿಸುವ ಸಮಯ. ನಾವೆಲ್ಲರೂ ಒಂದಾಗಬೇಕು’ ಎಂದು ಧ್ರುವ ಸರ್ಜಾ ವಿಡಿಯೋ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:27 pm, Mon, 19 August 24

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು