AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾರ್ಟಿನ್’ ವಿವಾದ; ನಿರ್ದೇಶಕ ಎಪಿ ಅರ್ಜುನ್​ಗೆ ಗೆಲುವು

ಎ.ಪಿ.ಅರ್ಜುನ್‌ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ‘ಸಿನಿಮಾ ಬಿಡುಗಡೆಗೂ ಮುನ್ನ ಸಂಭಾವನೆ ಪಾವತಿ ಮಾಡಬೇಕು, ಪೋಸ್ಟರ್ ಹಾಗೂ ಪ್ರಚಾರ ದಾಖಲೆಗಳಲ್ಲಿ ಎಪಿ ಅರ್ಜುನ್ ಹೆಸರನ್ನು ಉಲ್ಲೇಖಿಸುವಂತೆ ನಿರ್ಮಾಪಕರಿಗೆ ಸೂಚಿಸಿ’ ಎಂದು ಅರ್ಜುನ್ ಪರ ವಕೀಲರು ಕೋರಿದ್ದರು.

‘ಮಾರ್ಟಿನ್’ ವಿವಾದ; ನಿರ್ದೇಶಕ ಎಪಿ ಅರ್ಜುನ್​ಗೆ ಗೆಲುವು
ಧ್ರುವ-ಅರ್ಜುನ್
ರಾಜೇಶ್ ದುಗ್ಗುಮನೆ
|

Updated on: Oct 05, 2024 | 12:24 PM

Share

ನಿರ್ದೇಶಕ ಎಪಿ ಅರ್ಜುನ್ ಹಾಗೂ ‘ಮಾರ್ಟಿನ್’ ಸಿನಿಮಾ ನಿರ್ಮಾಪಕ ಉದಯ್ ಮೆಹ್ತಾ ಮಧ್ಯೆ ಮನಸ್ತಾಪ ಇದೆ ಎಂಬ ವಿಚಾರ ಆಗಾಗ ಚರ್ಚೆಗೆ ಬರುತ್ತಲೇ ಇದೆ. ಆದರೆ, ಇದನ್ನು ತಂಡ ನೇರವಾಗಿ ಒಪ್ಪಿಕೊಂಡಿಲ್ಲ. ಆದರೆ, ಪ್ರಕರಣಕ್ಕೆ ಸಂಬಂಧಿಸಿ ತಂಡದವರು ಕೋರ್ಟ್ ಮೆಟ್ಟಿಲನ್ನು ಹತ್ತುತ್ತಲೇ ಇದ್ದಾರೆ. ತಮ್ಮ ಹೆಸರನ್ನು ತಂಡ ಕೈಬಿಟ್ಟಿದೆ ಎಂದು ನಿರ್ದೇಶಕ ಎಪಿ ಅರ್ಜುನ್ ಆರೋಪಿಸಿದ್ದರು. ಈಗ ಅವರ ಪರವಾಗಿ ಕೋರ್ಟ್ ಆದೇಶ ನೀಡಿದೆ. ಪ್ರಚಾರ ದಾಖಲೆಗಳಲ್ಲಿ ಎಪಿ ಅರ್ಜುನ್ ಅವರ ಹೆಸರನ್ನು ಸೇರಿಸಬೇಕು ಎಂದು ಆದೇಶ ನೀಡಿದೆ.

ಎಪಿ ಅರ್ಜುನ್ ಕಡೆಯಿಂದ ನಿರ್ಮಾಪಕರಿಗೆ ವಂಚನೆ ಆಗಿರೋ ಆರೋಪ ಈ ಮೊದಲು ಕೇಳಿ ಬಂದಿತ್ತು. ವಿಎಫ್​ಎಕ್ಸ್​ ಕೆಲಸಕ್ಕೆ ಕಂಪನಿಯೊಂದಕ್ಕೆ ಡೀಲ್ ಕೊಡಲಾಗಿತ್ತು. ಈ ಡೀಲ್​ನಲ್ಲಿ ಅರ್ಜುನ್ ಕಮಿಷನ್ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂತು. ಈ ಆರೋಪದ ಬೆನ್ನಲ್ಲೇ ನಿರ್ದೇಶಕರು ಹಾಗೂ ನಿರ್ಮಾಪಕರ ಮಧ್ಯೆ ಮನಸ್ತಾಪ ಉಂಟಾಯಿತು ಎನ್ನಲಾಗಿದೆ. ಪ್ರಚಾರದ ವೇಳೆ ಉದಯ್ ಮೆಹ್ತಾ ಅವರು ಎಪಿ ಅರ್ಜುನ್ ಹೆಸರನ್ನು ಕೈಬಿಟ್ಟ ಆರೋಪ ಕೇಳಿ ಬಂತು.

ಈ ಬೆನ್ನಲ್ಲೇ ಎ.ಪಿ.ಅರ್ಜುನ್‌ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ‘ಸಿನಿಮಾ ಬಿಡುಗಡೆಗೂ ಮುನ್ನ ಸಂಭಾವನೆ ಪಾವತಿ ಮಾಡಬೇಕು, ಪೋಸ್ಟರ್ ಹಾಗೂ ಪ್ರಚಾರ ದಾಖಲೆಗಳಲ್ಲಿ ಎಪಿ ಅರ್ಜುನ್ ಹೆಸರನ್ನು ಉಲ್ಲೇಖಿಸುವಂತೆ ನಿರ್ಮಾಪಕರಿಗೆ ಸೂಚಿಸಿ’ ಎಂದು ಅರ್ಜುನ್ ಪರ ವಕೀಲರು ಕೋರಿದ್ದರು. ಈ ಅರ್ಜಿಯನ್ನು ಹೈಕೋರ್ಟ್​ನ ರಜಾಕಾಲದ ವಿಭಾಗೀಯ ನ್ಯಾಯಪೀಠದ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣ ಕುಮಾರ್‌ ಮತ್ತು ಎಂ.ಜಿ.ಉಮಾ ವಿಚಾರಣೆ ನಡೆಸಿ, ಅರ್ಜುನ್ ಪರವಾಗಿ ಆದೇಶ ನೀಡಿದೆ.

‘ಮುಂದೆ ಪ್ರಿಂಟ್ ಮಾಡುವ ದಾಖಲೆಗಳಲ್ಲಿ ಎಪಿ ಅರ್ಜುನ್ ಹೆಸರನ್ನು ಸೇರಿಸಿ. ಪ್ರಮೋಷನ್​ನಲ್ಲಿ ಭಾಗಿ ಆಗಲು ಅವಕಾಶ ನೀಡಿ. ಅರ್ಜುನ್ ಅವರು ತಂಡದ ಬಗ್ಗೆ ಯಾವುದೇ ಕೆಟ್ಟ ಅಭಿಪ್ರಾಯ ವ್ಯಕ್ತಪಡಿಸಬಾರದು’ ಎಂದು ಆದೇಶ ನೀಡಿತು.

ಇದನ್ನೂ ಓದಿ: ತಮ್ಮದೇ ‘ಮಾರ್ಟಿನ್‘ ಸಿನಿಮಾ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿರ್ದೇಶಕ ಎಪಿ ಅರ್ಜುನ್

ಅಕ್ಟೋಬರ್ 11ರಂದು ‘ಮಾರ್ಟಿನ್’ ಸಿನಿಮಾ ರಿಲೀಸ್ ಆಗುತ್ತಿದೆ. ಧ್ರುವ ಸರ್ಜಾ ಅವರ ಲುಕ್ ಗಮನ ಸೆಳೆದಿದೆ. ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಕಾಣುತ್ತಿದೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಬೆಂಗಳೂರಲ್ಲಿ ಸಿಎನ್​​ಜಿ ದರ 2 ರೂ ಏರಿಕೆ: ವಾಹನ ಸವಾರರು ಕಂಗಾಲು
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಸ್ಪೀಡ್ ಬ್ರೇಕರ್ ಕಾಣದೆ ವೇಗವಾಗಿ ಬಂದ ಬೈಕ್​; ಮುಂದೇನಾಯಿತು ನೋಡಿ
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಸಿಂಹ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 80ಕ್ಕೂ ಅಧಿಕ ಮಂದಿ ಸಾವು
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್ ಪಲ್ಟಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದ ಮೃತನ ತಂದೆ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಯುವಕರಿಗೆ ಸ್ವಿಮ್ಮಿಂಗ್ ಪೂಲ್ ಆಗಿದ್ದ ಹೊಂಡಕ್ಕೆ ಮೊಸಳೆ ಎಂಟ್ರಿ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ
ಟೈರ್ ಬ್ಲಾಸ್ಟ್ ಆಗಿ ಟಿಟಿ ವಾಹನ ಪಲ್ಟಿ, ಮಗು ಸೇರಿ 12 ಜನರಿಗೆ ಗಾಯ