Dhruva Sarja: ಐದು ದಿನಕ್ಕೆ ‘ಮಾರ್ಟಿನ್’ ಚಿತ್ರ ಮಾಡಿದ ಗಳಿಕೆ ಎಷ್ಟು?

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಭಾರಿ ಬಜೆಟ್​ನ ಈ ಸಿನಿಮಾ ಬಿಡುಗಡೆ ಆದಾಗ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿತ್ತು. ಧ್ರುವ ಸರ್ಜಾ ದ್ವಿಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಆಗಿತ್ತು. ಚಿತ್ರದ ಗಳಿಕೆ ಬಗ್ಗೆ ಇಲ್ಲಿದೆ ವಿವರ.

Dhruva Sarja: ಐದು ದಿನಕ್ಕೆ ‘ಮಾರ್ಟಿನ್’ ಚಿತ್ರ ಮಾಡಿದ ಗಳಿಕೆ ಎಷ್ಟು?
ಧ್ರುವ ಸರ್ಜಾ
Follow us
|

Updated on:Oct 16, 2024 | 10:49 AM

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ನಿರೀಕ್ಷೆ ಅಭಿಮಾನಿಗಳಿಗೆ ಇತ್ತು. ಆದರೆ, ಈ ನಿರೀಕ್ಷೆ ಹುಸಿಯಾಗಿದೆ. ಮೊದಲ ಮೂರು ದಿನ ಚಿತ್ರವು ಭರ್ಜರಿ ಗಳಿಕೆ ಮಾಡಿತ್ತು. ಈಗ ವಾರದ ದಿನಗಳಲ್ಲಿ ಸಿನಿಮಾದ ಗಳಿಕೆ ನಿಧಾನವಾಗಿ ತಗ್ಗುತ್ತಿದೆ. ಮಂಗಳವಾರ (ಅಕ್ಟೋಬರ್ 16) ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ, ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್ 11ರಂದು ರಿಲೀಸ್ ಆಯಿತು. ತಮಿಳಿನಲ್ಲಿ ‘ವೆಟ್ಟೈಯಾನ್’, ಹಿಂದಿಯಲ್ಲಿ ‘ಜಿಗ್ರಾ’ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ‘ಮಾರ್ಟಿನ್’ ಮೊದಲ ಮೂರು ದಿನ ಉತ್ತಮ ಗಳಿಕೆ ಮಾಡಿತು. ಆದರೆ, ವಾರದ ದಿನ ಸಿನಿಮಾದ ಕಲೆಕ್ಷನ್ ತಗ್ಗುತ್ತಿದೆ.

Sacnilk ವರದಿ ಮಾಡಿರುವ ಪ್ರಕಾರ, ‘ಮಾರ್ಟಿನ್’ ಚಿತ್ರ ಐದನೇ ದಿನವಾದ ಮಂಗಳವಾರ 1 ಕೋಟಿ ರೂಪಾಯಿ ಗಳಿಕೆ ಮಾಡಿದೆಯಂತೆ. ಮೊದಲ ದಿನ ಈ ಚಿತ್ರ 6.7 ಕೋಟಿ ರೂಪಾಯಿ, ಎರಡನೇ ದಿನ 5.5 ಕೋಟಿ ರೂಪಾಯಿ, ಮೂರನೇ ದಿನ 3.35 ಕೋಟಿ ರೂಪಾಯಿ ಹಾಗೂ ನಾಲ್ಕನೇ ದಿನ 1.35 ಕೋಟಿ ರೂಪಾಯಿ ಹಾಗೂ ಐದನೇ ದಿನ 1 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 18 ಕೋಟಿ ರೂಪಾಯಿ ಆಗಿದೆ.

18 ಕೋಟಿ ರೂಪಾಯಿ ದೊಡ್ಡ ಮೊತ್ತವೇ. ಆದರೆ, ಚಿತ್ರದ ಬಜೆಟ್​ಗೆ ಹೋಲಿಕೆ ಮಾಡಿದರೆ ಈ ಗಳಿಕೆ ತುಂಬಾನೇ ಚಿಕ್ಕದು ಎನಿಸಿದೆ. ಸಿನಿಮಾಗೆ ನಿರ್ಮಾಪಕ ಉದಯ್ ಮೆಹ್ತಾ ಅವರು ಬರೋಬ್ಬರಿ 100 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎನ್ನುವ ವರದಿ ಇದೆ. ಇದು ನಿಜವೇ ಆಗಿದ್ದಲ್ಲಿ ನಿರ್ಮಾಪಕರಿಗೆ ದೊಡ್ಡ ನಷ್ಟ ಉಂಟಾಗಿದೆ.

ಇದನ್ನೂ ಓದಿ: ‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಧ್ರುವ ಅಭಿಮಾನಿಗಳಿಂದ ಬೆದರಿಕೆ

ಮುಂದಿನ ದಿನಗಳಲ್ಲಿ ಸಿನಿಮಾದ ಗಳಿಕೆ ನಿಧಾನವಾಗಿ ಕುಗ್ಗುತ್ತಾ ಬರುತ್ತದೆ. ಈ ವಾರಾಂತ್ಯದಲ್ಲಿ ಸಿನಿಮಾದ ಕಲೆಕ್ಷನ್ ಸ್ವಲ್ಪ ಹೆಚ್ಚಬಹುದು. ‘ಮಾರ್ಟಿನ್’ ಸಿನಿಮಾ ಬುಕ್ ಮೈ ಶೋ ಹಾಗೂ ಐಎಂಡಿಬಿಯಲ್ಲಿ ಹೆಚ್ಚಿನ ಗಳಿಕೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:37 am, Wed, 16 October 24

ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!
ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!
Daily Devotional: ಸಂತಾನ ಪ್ರಾಪ್ತಿಗೆ ಸುಭ್ರಹ್ಮಣ್ಯ ಆರಾಧನೆಯ ಮಹತ್ವ
Daily Devotional: ಸಂತಾನ ಪ್ರಾಪ್ತಿಗೆ ಸುಭ್ರಹ್ಮಣ್ಯ ಆರಾಧನೆಯ ಮಹತ್ವ
Nithya Bhavishya: ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿ
Nithya Bhavishya: ಈ ರಾಶಿಯವರಿಗೆ ಇಂದು ಮಾನಸಿಕ ನೆಮ್ಮದಿ
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ಬೆಂಗಳೂರಿನಲ್ಲಿ ಮಳೆ ಆರ್ಭಟ; ಮಾನ್ಯತಾ ಟೆಕ್​ಪಾರ್ಕ್​ ವಿಡಿಯೋ ವೈರಲ್!
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ವಿಡಿಯೋ: ಸಣ್ಣ ವಿಷಯಕ್ಕೆ ಜಗದೀಶ್​-ಸುರೇಶ್ ನಡುವೆ ಜಟಾಪಟಿ
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದರ್ಶನ್ ವಿರುದ್ಧದ ಕೊಲೆ ಪ್ರಕರಣದ ಬಗ್ಗೆ ಕೋಡಿಶ್ರೀ ಸ್ಫೋಟಕ ಮಾತು
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಎಗರಿಸಿದ ಕಳ್ಳ
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಬೆಂಗಳೂರು ಮಳೆ: ನಡು ರಸ್ತೆಯಲ್ಲೇ ಸಿಲುಕಿದ ಶಾಲಾ ವಾಹನ; ಮಕ್ಕಳು ಕಂಗಾಲು
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಮಳೆಯನ್ನು ಸ್ವಾಗತಿಸುತ್ತಾ ಬಿಬಿಎಂಪಿಯ ವಾರ್ ರೂಂ ಕಡೆ ತೆರಳಿದ ಶಿವಕುಮಾರ್!
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್
ಇವರ ಅಪ್ಪನಿಗೆ ಹೊಡೆದು ಕೇಸ್ ಹಾಕಿಸಿಕೊಂಡಿಲ್ಲ: ಜಗದೀಶ್​ಗೆ ಚೈತ್ರಾ ಕ್ಲಾಸ್