AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhruva Sarja: ಐದು ದಿನಕ್ಕೆ ‘ಮಾರ್ಟಿನ್’ ಚಿತ್ರ ಮಾಡಿದ ಗಳಿಕೆ ಎಷ್ಟು?

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ಭಾರಿ ಬಜೆಟ್​ನ ಈ ಸಿನಿಮಾ ಬಿಡುಗಡೆ ಆದಾಗ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿತ್ತು. ಧ್ರುವ ಸರ್ಜಾ ದ್ವಿಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಆಗಿತ್ತು. ಚಿತ್ರದ ಗಳಿಕೆ ಬಗ್ಗೆ ಇಲ್ಲಿದೆ ವಿವರ.

Dhruva Sarja: ಐದು ದಿನಕ್ಕೆ ‘ಮಾರ್ಟಿನ್’ ಚಿತ್ರ ಮಾಡಿದ ಗಳಿಕೆ ಎಷ್ಟು?
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on:Oct 16, 2024 | 10:49 AM

Share

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡುವ ನಿರೀಕ್ಷೆ ಅಭಿಮಾನಿಗಳಿಗೆ ಇತ್ತು. ಆದರೆ, ಈ ನಿರೀಕ್ಷೆ ಹುಸಿಯಾಗಿದೆ. ಮೊದಲ ಮೂರು ದಿನ ಚಿತ್ರವು ಭರ್ಜರಿ ಗಳಿಕೆ ಮಾಡಿತ್ತು. ಈಗ ವಾರದ ದಿನಗಳಲ್ಲಿ ಸಿನಿಮಾದ ಗಳಿಕೆ ನಿಧಾನವಾಗಿ ತಗ್ಗುತ್ತಿದೆ. ಮಂಗಳವಾರ (ಅಕ್ಟೋಬರ್ 16) ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ, ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್ 11ರಂದು ರಿಲೀಸ್ ಆಯಿತು. ತಮಿಳಿನಲ್ಲಿ ‘ವೆಟ್ಟೈಯಾನ್’, ಹಿಂದಿಯಲ್ಲಿ ‘ಜಿಗ್ರಾ’ ಸಿನಿಮಾಗಳು ರಿಲೀಸ್ ಆದ ಹೊರತಾಗಿಯೂ ‘ಮಾರ್ಟಿನ್’ ಮೊದಲ ಮೂರು ದಿನ ಉತ್ತಮ ಗಳಿಕೆ ಮಾಡಿತು. ಆದರೆ, ವಾರದ ದಿನ ಸಿನಿಮಾದ ಕಲೆಕ್ಷನ್ ತಗ್ಗುತ್ತಿದೆ.

Sacnilk ವರದಿ ಮಾಡಿರುವ ಪ್ರಕಾರ, ‘ಮಾರ್ಟಿನ್’ ಚಿತ್ರ ಐದನೇ ದಿನವಾದ ಮಂಗಳವಾರ 1 ಕೋಟಿ ರೂಪಾಯಿ ಗಳಿಕೆ ಮಾಡಿದೆಯಂತೆ. ಮೊದಲ ದಿನ ಈ ಚಿತ್ರ 6.7 ಕೋಟಿ ರೂಪಾಯಿ, ಎರಡನೇ ದಿನ 5.5 ಕೋಟಿ ರೂಪಾಯಿ, ಮೂರನೇ ದಿನ 3.35 ಕೋಟಿ ರೂಪಾಯಿ ಹಾಗೂ ನಾಲ್ಕನೇ ದಿನ 1.35 ಕೋಟಿ ರೂಪಾಯಿ ಹಾಗೂ ಐದನೇ ದಿನ 1 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 18 ಕೋಟಿ ರೂಪಾಯಿ ಆಗಿದೆ.

18 ಕೋಟಿ ರೂಪಾಯಿ ದೊಡ್ಡ ಮೊತ್ತವೇ. ಆದರೆ, ಚಿತ್ರದ ಬಜೆಟ್​ಗೆ ಹೋಲಿಕೆ ಮಾಡಿದರೆ ಈ ಗಳಿಕೆ ತುಂಬಾನೇ ಚಿಕ್ಕದು ಎನಿಸಿದೆ. ಸಿನಿಮಾಗೆ ನಿರ್ಮಾಪಕ ಉದಯ್ ಮೆಹ್ತಾ ಅವರು ಬರೋಬ್ಬರಿ 100 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ ಎನ್ನುವ ವರದಿ ಇದೆ. ಇದು ನಿಜವೇ ಆಗಿದ್ದಲ್ಲಿ ನಿರ್ಮಾಪಕರಿಗೆ ದೊಡ್ಡ ನಷ್ಟ ಉಂಟಾಗಿದೆ.

ಇದನ್ನೂ ಓದಿ: ‘ಮಾರ್ಟಿನ್’ ಚೆನ್ನಾಗಿಲ್ಲ ಎಂದ ಯೂಟ್ಯೂಬರ್​ಗೆ ಧ್ರುವ ಅಭಿಮಾನಿಗಳಿಂದ ಬೆದರಿಕೆ

ಮುಂದಿನ ದಿನಗಳಲ್ಲಿ ಸಿನಿಮಾದ ಗಳಿಕೆ ನಿಧಾನವಾಗಿ ಕುಗ್ಗುತ್ತಾ ಬರುತ್ತದೆ. ಈ ವಾರಾಂತ್ಯದಲ್ಲಿ ಸಿನಿಮಾದ ಕಲೆಕ್ಷನ್ ಸ್ವಲ್ಪ ಹೆಚ್ಚಬಹುದು. ‘ಮಾರ್ಟಿನ್’ ಸಿನಿಮಾ ಬುಕ್ ಮೈ ಶೋ ಹಾಗೂ ಐಎಂಡಿಬಿಯಲ್ಲಿ ಹೆಚ್ಚಿನ ಗಳಿಕೆ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:37 am, Wed, 16 October 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​