AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ ಮೀರಿದ್ದಕ್ಕೆ ‘ಮಾರ್ಟಿನ್​’ ತಂಡದಲ್ಲಿ ಕಿರಿಕ್​ ಆಯ್ತಾ? ಉತ್ತರಿಸಿದ ಎ.ಪಿ. ಅರ್ಜುನ್

ಕೆಲವು ನೆಗೆಟಿವ್​ ಕಾರಣಗಳಿಂದ ‘ಮಾರ್ಟಿನ್​’ ಸಿನಿಮಾ ತಂಡ ಸುದ್ದಿ ಆಗುತ್ತಿದೆ. ನಿರ್ದೇಶಕ ಎ.ಪಿ. ಅರ್ಜುನ್​ ಅವರ ಮೇಲೆ ಆರೋಪ ಬಂದಿದ್ದು, ಅದನ್ನು ಅವರು ತಳ್ಳಿಹಾಕಿದ್ದಾರೆ. ಸುದ್ದಿಗೋಷ್ಠಿ ನಡೆಸುವ ಮೂಲಕ ಎ.ಪಿ. ಅರ್ಜುನ್​ ಅವರು ತಮ್ಮ ವಾದ ಏನು ಎಂಬುದನ್ನು ಮುಂದಿಟ್ಟಿದ್ದಾರೆ. ಬಜೆಟ್​ ಬಗ್ಗೆಯೂ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಬಜೆಟ್​ ಮೀರಿದ್ದಕ್ಕೆ ‘ಮಾರ್ಟಿನ್​’ ತಂಡದಲ್ಲಿ ಕಿರಿಕ್​ ಆಯ್ತಾ? ಉತ್ತರಿಸಿದ ಎ.ಪಿ. ಅರ್ಜುನ್
ಎ.ಪಿ. ಅರ್ಜುನ್​, ಧ್ರುವ ಸರ್ಜಾ
ಮದನ್​ ಕುಮಾರ್​
|

Updated on: Jul 26, 2024 | 10:35 PM

Share

ನಟ ಧ್ರುವ ಸರ್ಜಾ ಅವರು ಬಹುನಿರೀಕ್ಷಿತ ‘ಮಾರ್ಟಿನ್​’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರತಂಡದಲ್ಲಿ ಬಿರುಕು ಮೂಡಿದೆ. ಬಿಗ್​ ಬಜೆಟ್​ನ ಈ ಸಿನಿಮಾದಲ್ಲಿ ಮನಸ್ತಾಪ ಉಂಟಾಗಲು ಕಾರಣ ಹಲವು. ಈ ಕುರಿತು ಮಾತನಾಡಲು ಇಂದು (ಜುಲೈ 26) ನಿರ್ದೇಶಕ ಎ.ಪಿ. ಅರ್ಜುನ್​ ಅವರು ಪ್ರೆಸ್​ಮೀಟ್​ ನಡೆಸಿ ಒಂದಷ್ಟು ವಿಷಯಗಳಿಗೆ ಸ್ಪಷ್ಟನೆ ನೀಡಿದ್ದಾರೆ. ‘ಮಾರ್ಟಿನ್​’ ಚಿತ್ರದ ಸಿಜಿ ಕೆಲಸಗಳಿಗೆ ಎ.ಪಿ. ಅರ್ಜುನ್​ ಅವರು 50 ಲಕ್ಷ ರೂಪಾಯಿ ಕಮಿಷನ್​ ಪಡೆದಿದ್ದಾರೆ ಎನ್ನುವ ಆರೋಪವನ್ನು ಕೆಲವರು ಮಾಡಿದ್ದಾರೆ. ಅದರ ಬಗ್ಗೆ ಎ.ಪಿ. ಅರ್ಜುನ್​ ಮಾತನಾಡಿದ್ದಾರೆ.

‘ಬಜೆಟ್​ ಜಾಸ್ತಿ ಆಯಿತು ಅನ್ನೋದಕ್ಕಿಂತ, ಒಂದು ಪ್ಯಾನ್​ ಇಂಡಿಯಾ ಸಿನಿಮಾ ಎಂದಾಗ ಆ ರೀತಿಯ ದೊಡ್ಡ ಬಜೆಟ್​ ಬೇಕಾಗುತ್ತದೆ. ನಿರ್ಮಾಪಕರು, ನಿರ್ದೇಶಕರು, ಹೀರೋ ಇದನ್ನೆಲ್ಲ ಮೊದಲೇ ನಿರ್ಧರಿಸಿರುತ್ತಾರೆ. ಮೊದಲು 20 ಕೋಟಿ ರೂಪಾಯಿ ಹೇಳಿ, ಆಮೇಲೆ 100 ಕೋಟಿಯನ್ನು ತಂದು ಯಾರೂ ಹಾಕಲ್ಲ. ಶೇಕಡ 10ರಿಂದ 20ರಷ್ಟು ವ್ಯತ್ಯಾಸ ಬರಬಹುದು’ ಎಂದು ಎ.ಪಿ. ಅರ್ಜುನ್ ಹೇಳಿದ್ದಾರೆ. ಈ ಮೊದಲು ಕೂಡ ನಿರ್ಮಾಪಕರ ಜೊತೆ ನಿರ್ದೇಶಕರು ಮನಸ್ತಾಪ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು.

‘ಸಂಭಾವನೆ ವಿಚಾರದಲ್ಲಿ ನಿರ್ಮಾಪಕರ ಜೊತೆ ನಾನು ಒಪ್ಪಂದ ಮಾಡಿಕೊಂಡಿದ್ದು 2 ವರ್ಷಗಳಿಗೆ. ಆದರೆ ಈ ಸಿನಿಮಾದ ಕೆಲಸ ಒಂದೂವರೆ ವರ್ಷ ಜಾಸ್ತಿ ಆಗಿದೆ. ಆ ಬಗ್ಗೆ ನಾನು ನಿರ್ಮಾಪಕರ ಜೊತೆ ಕುಳಿತು ಮಾತುಕಥೆ ಮಾಡುತ್ತೇನೆ. ಆದರೆ ನಾನು ಇಂದು ಸುದ್ದಿಗೋಷ್ಠಿ ಕರೆದಿದ್ದು ಆ ವಿಚಾರಕ್ಕೆ ಅಲ್ಲ. ನನ್ನ ಮೇಲೆ 50 ಲಕ್ಷ ರೂಪಾಯಿ ಕಮಿಷನ್​ ಪಡೆದ ಆರೋಪ ಬಂದಿದೆ. ಅದನ್ನು ತಳ್ಳಿಹಾಕುತ್ತೇನೆ’ ಎಂದು ಎ.ಪಿ. ಅರ್ಜುನ್​ ಹೇಳಿದ್ದಾರೆ.

‘ಮಾಧ್ಯಮ ತುಂಬ ಶಕ್ತಿಶಾಲಿ. ನಾನು ಹೆಸರು ಮಾಡಲು ಹಲವು ವರ್ಷ ಕಷ್ಟಪಟ್ಟಿದ್ದೇನೆ. ನನ್ನ ಮೇಲಿನ ಕೋಪಕ್ಕೆ ಕೆಲವರು ಅವಾಚ್ಯ ಶಬ್ದಗಳಲ್ಲಿ ನಿಂದಿಸಿ ಬರೆದರೆ ಸರಿ-ತಪ್ಪು ಏನು ಎಂಬುದು ನಮ್ಮವರಿಗೆ ಗೊತ್ತಿರುತ್ತದೆ. ಆದರೆ ದೂರದಿಂದ ನೋಡುವವರಿಗೆ ಬೇರೆ ರೀತಿಯ ಸಂದೇಶ ಹೋಗುತ್ತದೆ. ಮನೆ ಕಟ್ಟುವುದು ತುಂಬ ಕಷ್ಟ. ಆದರೆ ಕೆಡಗುವುದು ಸುಲಭ. ನಾನು ಬೆಳೆಯುವಾಗ ಯಾರೂ ಬೆಂಬಲಿಸಿಲ್ಲ. ಆದರೆ ಈಗ ತೇಜೋವಧೆ ಮಾಡುತ್ತಿದ್ದಾರೆ’ ಎಂದಿದ್ದಾರೆ ಎ.ಪಿ. ಆರ್ಜುನ್​.

ಇದನ್ನೂ ಓದಿ: ‘ಮಾರ್ಟಿನ್’ ತಂಡದಲ್ಲಿ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

‘ಎಫ್​ಐಆರ್​ ಕಾಪಿಯಲ್ಲಿ ನನ್ನ ಹೆಸರು ಇದ್ದು, ಆಗ ಸುದ್ದಿ ಮಾಡಿದರೆ ಒಳ್ಳೆಯದು. ಎಫ್​ಐಆರ್​ ಕಾಪಿಯಲ್ಲಿ ನನ್ನ ಹೆಸರು ಇಲ್ಲ. ಚಿತ್ರತಂಡದ ಯಾರೋಬ್ಬರೂ ನನ್ನ ಮೇಲೆ ದೂರು ನೀಡಿಲ್ಲ. ಯಾರೋ ಒಬ್ಬರು ಊಹಾಪೋಹದಿಂದ ಸುದ್ದಿ ಹಬ್ಬಿಸಿದಾಗ ನನ್ನ ಫೋನ್​ ನಂಬರ್​ ಇದೆಯಲ್ಲ. ಆರೋಪ ಬಂದಾಗ ಕರೆ ಮಾಡಿ ನನ್ನನ್ನೇ ಕೇಳಬಹುದಿತ್ತು. ನಿರ್ಮಾಪಕರಿಗಾದರೂ ಕೇಳಿ ವಿಚಾರಿಸಬಹುದಿತ್ತು’ ಎಂದು ಎ.ಪಿ. ಅರ್ಜುನ್​ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ