AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕ್ಸಸ್ ಮೀಟ್ ಘೋಷಣೆ ಮಾಡಿದ ‘ಮಾರ್ಟಿನ್’ ತಂಡ; ಎಲ್ಲಿ, ಯಾವಾಗ?

ಬೆಂಗಳೂರಿನ ಜಿಟಿ ಮಾಲ್​​ನಲ್ಲಿರೋ ಎಂಎಂಬಿ ಲೆಗಸಿಯಲ್ಲಿ ಸೋಮವಾರ (ಅಕ್ಟೋಬರ್ 14) ಸಂಜೆ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿದೆ. ಇದಕ್ಕೆ ಇಡೀ ಸಿನಿಮಾ ತಂಡ ಭಾಗಿ ಆಗುವ ಸಾಧ್ಯತೆ ಇದೆ. ‘ಮಾರ್ಟಿನ್’ ಸಿನಿಮಾದ ಗಳಿಕೆ ಮೂರು ದಿನಕ್ಕೆ 16 ಕೋಟಿ ರೂಪಾಯಿ ಆಗಿದೆ ಎನ್ನಲಾಗಿದೆ.

ಸಕ್ಸಸ್ ಮೀಟ್ ಘೋಷಣೆ ಮಾಡಿದ ‘ಮಾರ್ಟಿನ್’ ತಂಡ; ಎಲ್ಲಿ, ಯಾವಾಗ?
ಮಾರ್ಟಿನ್
ರಾಜೇಶ್ ದುಗ್ಗುಮನೆ
|

Updated on: Oct 14, 2024 | 8:52 AM

Share

ಬಿಗ್ ಬಜೆಟ್ ಸಿನಿಮಾ ‘ಮಾರ್ಟಿನ್’ ಸಿನಿಮಾ ದಸರಾ ಪ್ರಯುಕ್ತ ಅಕ್ಟೋಬರ್ 11ರಂದು ರಿಲೀಸ್ ಆಯಿತು. ಈ ಚಿತ್ರ ಉತ್ತಮ ಗಳಿಕೆ ಮಾಡುತ್ತಿದೆ. ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಹೀಗಿರುವಾಗಲೇ ಚಿತ್ರತಂಡ ಸಕ್ಸಸ್​ಮೀಟ್ ಘೋಷಣೆ ಮಾಡಿದೆ. ಧ್ರುವ ಸರ್ಜಾ ಹೀರೋ ಆಗಿ ನಟಿಸಿರೋ ಈ ಚಿತ್ರಕ್ಕೆ, ಎಪಿ ಅರ್ಜುನ್ ನಿರ್ದೇಶನ ಇದೆ. ಉದಯ್ ಮೆಹತಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

‘ಮಾರ್ಟಿನ್’ ಸಿನಿಮಾ ಘೋಷಣೆ ಆಗಿ ಬಹಳ ಸಮಯ ಕಳೆದಿತ್ತು. ಕಾರಣಾಂತರಗಳಿಂದ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗುತ್ತಲೇ ಬಂತು. ಆ ಬಳಿಕ ಇದನ್ನು ಪ್ಯಾನ್ ಇಂಡಿಯಾ ಸಿನಿಮಾ ಮಾಡುವ ಆಲೋಚನೆ ತಂಡದವರಿಗೆ ಬಂತು. ಅದೇ ರೀತಿ ಸಿನಿಮಾನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧಪಡಿಸಿ ಅಕ್ಟೋಬರ್ 11ರಂದು ಬಿಡುಗಡೆ ಮಾಡಲಾಯಿತು. ಕನ್ನಡದ ಜೊತೆ ಹಿಂದಿ ಮೊದಲಾದ ಭಾಷೆಗಳಿಗೆ ಸಿನಿಮಾ ಡಬ್ ಆಗಿ ರಿಲೀಸ್ ಆಯಿತು. ಈಗ ಚಿತ್ರದ ಸಕ್ಸಸ್ ಮೀಟ್ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಜಿಟಿ ಮಾಲ್​​ನಲ್ಲಿರೋ ಎಂಎಂಬಿ ಲೆಗಸಿಯಲ್ಲಿ ಸೋಮವಾರ (ಅಕ್ಟೋಬರ್ 14) ಸಂಜೆ ಸಕ್ಸಸ್ ಮೀಟ್ ಆಯೋಜನೆ ಮಾಡಲಾಗಿದೆ. ಇದಕ್ಕೆ ಇಡೀ ಸಿನಿಮಾ ತಂಡ ಭಾಗಿ ಆಗುವ ಸಾಧ್ಯತೆ ಇದೆ. ‘ಮಾರ್ಟಿನ್’ ಸಿನಿಮಾದ ಗಳಿಕೆ ಮೂರು ದಿನಕ್ಕೆ 16 ಕೋಟಿ ರೂಪಾಯಿ ಆಗಿದೆ ಎನ್ನಲಾಗಿದೆ. ಸಕ್ಸ್​ಸ್​ಮೋಟ್ ವೇಳೆ ಸಿನಿಮಾದ ಒಟ್ಟಾರೆ ಕಲೆಕ್ಷನ್ ಬಗ್ಗೆ ಮಾಹಿತಿ ಸಿಗೋ ಸಾಧ್ಯತೆ ಇದೆ.

ಇದನ್ನೂ ಓದಿ:  ‘ಮಾರ್ಟಿನ್’ ಸಿನಿಮಾ ಮೂರು ದಿನಕ್ಕೆ ಗಳಿಸಿದ್ದೆಷ್ಟು? ಇಲ್ಲಿದೆ ಕಲೆಕ್ಷನ್ ವಿವರ

‘ಮಾರ್ಟಿನ್’ ಚಿತ್ರದಲ್ಲಿ ಧ್ರುವ ಸರ್ಜಾ ಅವರು ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಪರಭಾಷಿಗರು ಈ ಚಿತ್ರದ ಬಗ್ಗೆ ಅಪಸ್ವರ ತೆಗೆದಿದ್ದಾರೆ. ಸಿನಿಮಾ ಉತ್ತಮವಾಗಿಲ್ಲ ಎಂದು ಕೆಲವರು ಹೇಳಿದ್ದು ಇದೆ. ಆದರೆ, ಧ್ರುವ ಸರ್ಜಾ ಅಭಿಮಾನಿಗಳು ಇದನ್ನು ಒಪ್ಪುತ್ತಿಲ್ಲ. ಸಿನಿಮಾ ಬಗ್ಗೆ ಅಪ ಪ್ರಚಾರ ಮಾಡಲಾಗುತ್ತಿದೆ ಎನ್ನುವ ಆರೋಪವನ್ನು ಅವರು ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ