AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​​ನಲ್ಲಿ ಧೂಳೆಬ್ಬಿಸಿದ ‘ಮಾರ್ಟಿನ್​’ ಸಿನಿಮಾ ಟೀಸರ್; ಪರಭಾಷಿಗರಿಂದಲೂ ಸಿಕ್ತು ಮೆಚ್ಚುಗೆ

Martin Teaser: ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾನ ತೆರೆಗೆ ತರಲು ಏನೆಲ್ಲ ಸಿದ್ಧತೆ ಬೇಕೋ ಅದನ್ನು ಮಾಡಿಕೊಂಡು ‘ಮಾರ್ಟಿನ್’ ತಂಡ ರೆಡಿ ಆಗಿದೆ. ಸದ್ಯ ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

ಯೂಟ್ಯೂಬ್​​ನಲ್ಲಿ ಧೂಳೆಬ್ಬಿಸಿದ ‘ಮಾರ್ಟಿನ್​’ ಸಿನಿಮಾ ಟೀಸರ್; ಪರಭಾಷಿಗರಿಂದಲೂ ಸಿಕ್ತು ಮೆಚ್ಚುಗೆ
ಧ್ರುವ ಸರ್ಜಾ
ರಾಜೇಶ್ ದುಗ್ಗುಮನೆ
|

Updated on: Feb 24, 2023 | 10:33 AM

Share

ಫೆಬ್ರವರಿ 23ರಂದು ರಿಲೀಸ್ ಆದ ‘ಮಾರ್ಟಿನ್’ (Martin Teaser) ಸಿನಿಮಾದ ಟೀಸರ್ ಧೂಳೆಬ್ಬಿಸುತ್ತಿದೆ. ನಟ ಧ್ರುವ ಸರ್ಜಾ ಹಾಗೂ ನಿರ್ದೇಶಕ ಎ.ಪಿ. ಅರ್ಜುನ್ (AP Arjun) ಕಾಂಬಿನೇಷನ್​ನ ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಪರಭಾಷಿಗರೂ ಕೂಡ ಈ ಚಿತ್ರದ ಟೀಸರ್​ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ‘ಕನ್ನಡ ಚಿತ್ರರಂಗದಿಂದ ಮತ್ತೊಂದು ಭರವಸೆಯ ಸಿನಿಮಾ ಬರುತ್ತಿದೆ’ ಎನ್ನುವ ಕಮೆಂಟ್​ಗಳು ಬರುತ್ತಿವೆ. ‘ಮಾರ್ಟಿನ್’ ಸಿನಿಮಾದ ಟೀಸರ್ 17 ಗಂಟೆಯಲ್ಲಿ ಬರೋಬ್ಬರಿ 1.7 ಕೋಟಿ ಬಾರಿ ವೀಕ್ಷಣೆ ಪಡೆದಿದೆ. ಸಿನಿಮಾ ಬಗ್ಗೆ ಇದ್ದ ನಿರೀಕ್ಷೆ ಈ ಚಿತ್ರದ ಟೀಸರ್​ನಿಂದ ಹೆಚ್ಚಿದೆ.

ಇತ್ತೀಚೆಗೆ ಪ್ಯಾನ್ ಇಂಡಿಯಾ ಟ್ರೆಂಡ್ ಹೆಚ್ಚಿದೆ. ಕನ್ನಡದ ಅನೇಕ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿವೆ. ‘ಕೆಜಿಎಫ್ 2’, ‘ಕಾಂತಾರ’ ಮೊದಲಾದ ಸಿನಿಮಾಗಳು ಐದು ಭಾಷೆಗಳಲ್ಲಿ ರಿಲೀಸ್ ಆಗಿ ಸದ್ದು ಮಾಡಿವೆ. ಈಗ ‘ಮಾರ್ಟಿನ್​’ ಚಿತ್ರದ ಸರದಿ. ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾನ ತೆರೆಗೆ ತರಲು ಏನೆಲ್ಲ ಸಿದ್ಧತೆ ಬೇಕೋ ಅದನ್ನು ಮಾಡಿಕೊಂಡು ‘ಮಾರ್ಟಿನ್’ ತಂಡ ರೆಡಿ ಆಗಿದೆ. ಸದ್ಯ ಟೀಸರ್​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

‘ಮಾರ್ಟಿನ್​’ ಸಿನಿಮಾದ ಕಥೆ ರೆಟ್ರೋ ಶೈಲಿಯಲ್ಲಿ ಸಾಗಲಿದೆ ಎನ್ನುವ ಸೂಚನೆ ಸಿಕ್ಕಿದೆ. ಧ್ರುವ ಸರ್ಜಾ ಅವರು ಸಖತ್ ಆ್ಯಕ್ಷನ್ ಮೆರೆದಿದ್ದಾರೆ. ಪಾಕಿಸ್ತಾನದ ಉಗ್ರರು, ಐಎಸ್​ಐ, ಅಲ್ಲಿನ ಮಿಲಿಟರಿ ವಿಚಾರ ಇಟ್ಟುಕೊಂಡು ಬಾಲಿವುಡ್ ಮಂದಿ ಸಾಕಷ್ಟು ಸಿನಿಮಾ ಮಾಡಿದ್ದಾರೆ. ಆದರೆ, ಕನ್ನಡದವರು ಈ ವಿಚಾರವನ್ನು ಹೆಚ್ಚು ಟಚ್ ಮಾಡಿಲ್ಲ. ಈಗ ‘ಮಾರ್ಟಿನ್’ ಚಿತ್ರದ ಮೂಲಕ ಹಾಗೊಂದು ಪ್ರಯತ್ನ ನಡೆಯುವ ಸೂಚನೆ ಸಿಕ್ಕಿದೆ. ಧ್ರುವ ಸರ್ಜಾ ಅವರ ಬಾಡಿ ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ
Image
‘ಎಲ್ಲವೂ ಭಾರತದ ಸಿನಿಮಾ ಎಂದು ಕರೆಯಬೇಕು’; ಅಭಿಪ್ರಾಯ ತಿಳಿಸಿದ ಅರ್ಜುನ್ ಸರ್ಜಾ
Image
Martin Teaser Launch: ವೀರೇಶ್ ಚಿತ್ರಮಂದಿರದ ಒಳಗೆ ಧ್ರುವ ಫ್ಯಾನ್ಸ್: ಟೀಸರ್ ರಿಲೀಸ್​ಗೆ ಕ್ಷಣಗಣನೆ
Image
Martin Teaser: ಮಾರ್ಟಿನ್ ಸಿನಿಮಾ ಟೀಸರ್ ನೋಡಲು ಟಿಕೆಟ್! ಕೊಟ್ಟ ಹಣ ಸತ್ಕಾರ್ಯಕ್ಕೆ ಬಳಕೆ

ಅರ್ಜುನ್ ಸರ್ಜಾ ಅವರು ನಿರ್ದೇಶನದ ಮೂಲಕ, ನಟನೆ ಮೂಲಕ ಗಮನ ಸೆಳೆದವರು. ಅವರು ‘ಮಾರ್ಟಿನ್​’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಹೀಗಾಗಿ, ಸಹಜವಾಗಿಯೇ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಚಿತ್ರದ ಕಥೆ ಯಾವ ರೀತಿ ಇರಲಿದೆ ಅನ್ನೋದು ಕುತೂಹಲ. ಸಿನಿಮಾ ಈ ವರ್ಷ ತೆರೆಗೆ ಬರಲಿದೆ ಎಂಬ ವಿಚಾರವಷ್ಟೇ ಟೀಸರ್​ನಲ್ಲಿ ಗೊತ್ತಾಗಿದೆ. ಸಿನಿಮಾ ರಿಲೀಸ್ ದಿನಾಂಕ ಇನ್ನಷ್ಟೇ ಅಧಿಕೃತವಾಗಬೇಕಿದೆ.

ಇದನ್ನೂ ಓದಿ:‘ಎಲ್ಲವೂ ಭಾರತದ ಸಿನಿಮಾ ಎಂದು ಕರೆಯಬೇಕು’; ಅಭಿಪ್ರಾಯ ತಿಳಿಸಿದ ಅರ್ಜುನ್ ಸರ್ಜಾ

ಎಪಿ ಅರ್ಜುನ್ ನಿರ್ದೇಶನದ ಈ ಸಿನಿಮಾದಲ್ಲಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ, ಮಾಳವಿಕಾ ಅವಿನಾಶ್ ಮೊದಲಾದವರು ಬಣ್ಣ ಹಚ್ಚಿದ್ದಾರೆ. ಮೋನಿ ಶರ್ಮಾ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಅವರು ಟೀಸರ್​ನಲ್ಲೇ ತಮ್ಮ ಕೈಚಳಕ ತೋರಿಸಿದ್ದಾರೆ. ಸತ್ಯ ಹೆಗ್ಡೆ ಛಾಯಾಗ್ರಹಣ ಚಿತ್ರಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ