AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಮರ್ಯಾದೆ ಪ್ರಶ್ನೆ, ಟೆನಂಟ್, ಅಂಶು, ಜೀಬ್ರಾ ಮುಂತಾದ ಸಿನಿಮಾ; ಪ್ರೇಕ್ಷಕರ ಆಯ್ಕೆ ಯಾವುದು?

ಉತ್ತಮ ಕಥೆ ಇರುವ ಸಿನಿಮಾಗಳನ್ನು ನೋಡಬೇಕು ಎಂಬ ಪ್ರೇಕ್ಷಕರಿಗೆ ಈ ವಾರ ಒಳ್ಳೆಯ ಆಯ್ಕೆ. ಮರ್ಯಾದೆ ಪ್ರಶ್ನೆ, ಅಂಶು, ಟೆನಂಟ್, ಜೀಬ್ರಾ, ಆರಾಮ್ ಅರವಿಂದ ಸ್ವಾಮಿ ಮುಂತಾದ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಟ್ರೇಲರ್​ ಮೂಲಕ ಈ ಸಿನಿಮಾಗಳು ಗಮನ ಸೆಳೆದಿವೆ. ಬೇರೆ ಬೇರೆ ಪ್ರಕಾರದ ಈ ಸಿನಿಮಾಗಳ ಪೈಕಿ ಪ್ರೇಕ್ಷಕರು ಯಾವ ಚಿತ್ರಕ್ಕೆ ಕೃಪೆ ತೋರುತ್ತಾರೆ ಎಂಬುದು ಸದ್ಯದಲ್ಲೇ ತಿಳಿಯಲಿದೆ.

ಈ ವಾರ ಮರ್ಯಾದೆ ಪ್ರಶ್ನೆ, ಟೆನಂಟ್, ಅಂಶು, ಜೀಬ್ರಾ ಮುಂತಾದ ಸಿನಿಮಾ; ಪ್ರೇಕ್ಷಕರ ಆಯ್ಕೆ ಯಾವುದು?
ಹೊಸ ಕನ್ನಡ ಸಿನಿಮಾಗಳು
ಮದನ್​ ಕುಮಾರ್​
|

Updated on: Nov 20, 2024 | 7:18 PM

Share

ಒಂದೇ ವಾರ ಹಲವು ಸಿನಿಮಾಗಳು ಬಿಡುಗಡೆ ಆದಾಗ ಪ್ರೇಕ್ಷಕರಿಗೆ ಗೊಂದಲ ಮೂಡುತ್ತದೆ. ಯಾವ ಸಿನಿಮಾ ನೋಡೋದು, ಯಾವ ಸಿನಿಮಾ ಬಿಡೋದು ಎಂಬ ಪ್ರಶ್ನೆ ಕಾಡುತ್ತದೆ. ಎಲ್ಲ ಚಿತ್ರಕ್ಕೂ ಅದರದ್ದೇ ಆದ ಪ್ರೇಕ್ಷಕರ ವರ್ಗ ಇರುತ್ತದೆ. ಹಾಗಾಗಿ ಎಲ್ಲ ಸಿನಿಮಾಗಳಿಗೂ ನಿರೀಕ್ಷಿತ ಪ್ರಮಾಣದ ಆಡಿಯನ್ಸ್ ಬರುತ್ತಾರೆ ಎಂಬುದು ಚಿತ್ರತಂಡಗಳ ನಂಬಿಕೆ. ಈ ಶುಕ್ರವಾರ (ನವೆಂಬರ್​ 22) ಕೂಡ ಕನ್ನಡದಲ್ಲಿ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಈ ಎಲ್ಲ ಸಿನಿಮಾಗಳು ಬೇರೆ ಬೇರೆ ಕಾರಣಕ್ಕೆ ಕೌತುಕ ಮೂಡಿಸಿವೆ. ಅವುಗಳ ಬಗ್ಗೆ ಇಲ್ಲಿದೆ ಮಾಹಿತಿ..

ಡಾಲಿ ನಟನೆಯ ಜೀಬ್ರಾ

ನಟ ಡಾಲಿ ಧನಂಜಯ ಅವರು ಪ್ಯಾನ್ ಇಂಡಿಯಾ ಕಲಾವಿದ ಆಗಿದ್ದಾರೆ. ಕನ್ನಡದ ಜೊತೆ ಬೇರೆ ಬೇರೆ ಭಾಷೆಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ಅವರು ಪ್ರಮುಖ ಪಾತ್ರ ಮಾಡಿರುವ ‘ಜೀಬ್ರಾ’ ಸಿನಿಮಾ ಕನ್ನಡ, ತೆಲುಗು, ತಮಿಳು, ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಅಮೃತಾ ಅಯ್ಯಂಗಾರ್, ಸತ್ಯದೇವ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಜೊತೆ ಮಾಸ್ ಕಥೆ ಬಯಸುವವರು ‘ಜೀಬ್ರಾ’ ವೀಕ್ಷಿಸಬಹುದು.

ಬಿಗ್ ಬಾಸ್ ಸ್ಪರ್ಧಿಗಳ ಟೆನಂಟ್

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋನಲ್ಲಿ ಧರ್ಮ ಕೀರ್ತಿರಾಜ್ ಮತ್ತು ಉಗ್ರಂ ಮಂಜು ಸ್ಪರ್ಧಿಸುತ್ತಿದ್ದಾರೆ. ಅವರು ನಟಿಸಿರುವ ‘ಟೆನಂಟ್’ ಸಿನಿಮಾ ಈ ವಾರ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ಸೋನು ಗೌಡ, ತಿಲಕ್, ರಾಕೇಶ್ ಮಯ್ಯ ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಟ್ರೇಲರ್​ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಲಾಕ್​ಡೌನ್ ಸಂದರ್ಭದ ಕಥೆ ಈ ಚಿತ್ರದಲ್ಲಿದೆ. ಕ್ರೈಮ್ ಥ್ರಿಲ್ಲರ್​ ಇಷ್ಟಪಡುವ ಪ್ರೇಕ್ಷಕರಿಗೆ ‘ಟೆನಂಟ್’ ಈ ವಾರದ ಆಯ್ಕೆ.

‘ಮರ್ಯಾದೆ ಪ್ರಶ್ನೆ’

ಪೂರ್ಣಚಂದ್ರ ಮೈಸೂರು, ರಾಕೇಶ್ ಅಡಿಗ, ಸುನೀಲ್ ರಾವ್​, ತೇಜು ಬೆಳವಾಡಿ, ಶೈನ್ ಶೆಟ್ಟಿ, ಪ್ರಭು ಮುಂಡ್ಕೂರ್ ಮುಂತಾದವರು ನಟಿಸಿರುವ ‘ಮರ್ಯಾದೆ ಪ್ರಶ್ನೆ’ ಸಿನಿಮಾ ಕೂಡ ಟ್ರೇಲರ್​ ಮೂಲಕ ಸದ್ದು ಮಾಡಿದೆ. ಈ ಚಿತ್ರದ ಹಾಡುಗಳು ಸಹ ಗಮನ ಸೆಳೆದಿವೆ. ಈ ಶುಕ್ರವಾರ ಬಿಡುಗಡೆ ಆಗುತ್ತಿರುವ ಈ ಸಿನಿಮಾ ಬಗ್ಗೆ ಹೈಪ್ ಸೃಷ್ಟಿ ಆಗಿದೆ. ನಾಗರಾಜ್ ಸೋಮಯಾಜಿ ನಿರ್ದೇಶನ ಮಾಡಿದ್ದು, ಶ್ವೇತಾ ಪ್ರಸಾದ್, ಆರ್​ಜೆ ಪ್ರದೀಪ ನಿರ್ಮಾಣ ಮಾಡಿದ್ದಾರೆ. ಮಧ್ಯಮವರ್ಗದ ರಿಯಲಿಸ್ಟಿಕ್ ಕಹಾನಿ ನೋಡಲು ಇಷ್ಟಪಡುವ ಪ್ರೇಕ್ಷಕರಿಗೆ ಈ ಸಿನಿಮಾ ಉತ್ತಮ ಆಯ್ಕೆ.

ನಿಶಾ ಅಭಿನಯದ ‘ಅಂಶು’

‘ಗಟ್ಟಿಮೇಳ’, ‘ಅಣ್ಣಯ್ಯ’ ಮುಂತಾದ ಸೀರಿಯಲ್​ಗಳ ಮೂಲಕ ಫೇಮಸ್ ಆಗಿರುವ ನಿಶಾ ರವಿಕೃಷ್ಣನ್ ಅವರು ‘ಅಂಶು’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಥ್ರಿಲ್ಲರ್​ ಕಥಾಹಂದರ ಹೊಂದಿರುವ ಈ ಸಿನಿಮಾಗೆ ಎಂ.ಸಿ. ಚನ್ನಕೇಶವ ನಿರ್ದೇಶನ ಮಾಡಿದ್ದಾರೆ. ಸೀರಿಯಲ್​ಗಳಲ್ಲಿ ಯಶಸ್ಸು ಪಡೆದ ನಿಶಾ ಅವರು ಹಿರಿತೆರೆಯಲ್ಲಿ ಯಾವ ರೀತಿ ನಟಿಸಿದ್ದಾರೆ ಎಂಬುದು ತಿಳಿಯುವ ಕುತೂಹಲ ಇರುವವರು ‘ಅಂಶು’ ನೋಡಬೇಕು.

ಇದನ್ನೂ ಓದಿ: ಹರಿ ಸಂತೋಷ್ ಸಾರಥ್ಯದಲ್ಲಿ ಸೆಟ್ಟೇರಿದ ‘ಡಿಸ್ಕೊ’, ‘ಕಂಗ್ರ್ಯಾಜುಲೇಷನ್ಸ್​ ಬ್ರದರ್’ ಸಿನಿಮಾ

ಆರಾಮ್​ ಅರವಿಂದ ಸ್ವಾಮಿ

ಅನೀಶ್​ ತೇಜೇಶ್ವರ್, ಮಿಲನಾ ನಾಗರಾಜ್, ಹೃತಿಕಾ ಶ್ರೀನಿವಾಸ್, ಅಚ್ಯುತ್ ಕುಮಾರ್​ ಮುಂತಾದವರು ನಟಿಸಿರುವ ‘ಆರಾಮ್​ ಅರವಿಂದ ಸ್ವಾಮಿ’ ಸಿನಿಮಾ ಕೂಡ ನವೆಂಬರ್​ 22ರಂದು ಬಿಡುಗಡೆ ಆಗುತ್ತಿದೆ. ಕಾಮಿಡಿ ಕಿಕ್ ಬೇಕು ಎನ್ನುವ ಪ್ರೇಕ್ಷಕರು ಈ ಸಿನಿಮಾವನ್ನು ಈ ವಾರ ನೋಡಬಹುದು. ಈ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ. ಅಭಿಷೇಕ್​ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

‘ಪ್ರಭುತ್ವ’ ಸಿನಿಮಾ

ರಾಜಕೀಯದ ಕಥಾಹಂದರ ಇರುವ ‘ಪ್ರಭುತ್ವ’ ಸಿನಿಮಾದಲ್ಲಿ ಚೇತನ್ ಚಂದ್ರ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಮತದಾನದ ಮಹತ್ವ ತಿಳಿಸುವಂತಹ ಕಥೆ ಈ ಸಿನಿಮಾದಲ್ಲಿದೆ. ರವಿರಾಜ್​ ಎಸ್​ ಕುಮಾರ್​ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಆದಿ ಲೋಕೇಶ್, ವಿಜಯ್ ಚೆಂಡೂರು, ಡ್ಯಾನಿ, ರಾಜೇಶ್​ ನಟರಂಗ, ಅವಿನಾಶ್, ಶರತ್ ಲೋಹಿತಾಶ್ವ, ಪಾವನಾ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ರಾಜಕೀಯದ ಬಗ್ಗೆ ಪ್ರೇಕ್ಷಕರಿಗೆ ಮೆಸೇಜ್ ನೀಡುವಂತಹ ಕಥೆ ಈ ಚಿತ್ರದಲ್ಲಿದೆ.

ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ

ದರ್ಶನ್ ನಟನೆಯ ಸಾಲು ಸಾಲು ಸಿನಿಮಾಗಳು ಮರು ಬಿಡುಗಡೆ ಆಗುತ್ತಿವೆ. ಈಗಾಗಲೇ ಕರಿಯ, ನವಗ್ರಹ ಸಿನಿಮಾಗಳು ರೀ-ರಿಲೀಸ್ ಆಗಿ ಸದ್ದು ಮಾಡಿವೆ. ಈ ವಾರ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ ಆಗುತ್ತಿದ್ದು, ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ದರ್ಶನ್ ಅವರನ್ನು ದೊಡ್ಡ ಪರದೆಯಲ್ಲಿ ಮಿಸ್ ಮಾಡಿಕೊಳ್ಳುತ್ತಿರುವವರು ಈ ಸಿನಿಮಾ ನೋಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ