AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣ್ ಕಂಠಸಿರಿಯಲ್ಲಿ ‘ಮರ್ಯಾದೆ ಪ್ರಶ್ನೆ’ ಹಾಡು; ಮಧ್ಯಮ ವರ್ಗದವರ ಜೀವನದ ಕಥೆ ವಿವರಿಸಿದ ಸಾಂಗ್

ಅರ್ಜುನ್ ರಾಮು ಅವರು ‘ಈಸಿ ಟೇಕ್ ಇಟ್ ಈಸಿ..’ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಜಾನಪದ ಶೈಲಿಯಲ್ಲಿ ಈ ಹಾಡು ಇದೆ. ನಟ ಶರಣ್ ಅವರು ಕಂಠ ಸಿರಿಯಲ್ಲಿ ಹಾಡು ಮೂಡಿ ಬಂದಿದೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ.

ಶರಣ್ ಕಂಠಸಿರಿಯಲ್ಲಿ ‘ಮರ್ಯಾದೆ ಪ್ರಶ್ನೆ’ ಹಾಡು; ಮಧ್ಯಮ ವರ್ಗದವರ ಜೀವನದ ಕಥೆ ವಿವರಿಸಿದ ಸಾಂಗ್
ಮರ್ಯಾದೆ ಪ್ರಶ್ನೆ
ರಾಜೇಶ್ ದುಗ್ಗುಮನೆ
|

Updated on: Oct 18, 2024 | 11:56 AM

Share

ನಟ ಶರಣ್ ಅವರು ಹಿರೋ ಆಗಿ ಫೇಮಸ್ ಆಗಿದ್ದಾರೆ. ಇದರ ಜೊತೆಗೆ ಅವರು ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಈಗ ‘ಸಕ್ಕತ್ ಸ್ಟುಡಿಯೋ’ ನಿರ್ಮಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರದ ‘ಈಸಿ ಟೇಕ್ ಇಟ್ ಈಸಿ’ ಹಾಡನ್ನು ಹಾಡಿದ್ದಾರೆ. ಈ ಹಾಡು ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಈ ಚಿತ್ರ ನವೆಂಬರ್ 22ಕ್ಕೆ ಬಿಡುಗಡೆ ಆಗುತ್ತಿದೆ.

ಅರ್ಜುನ್ ರಾಮು ಅವರು ‘ಈಸಿ ಟೇಕ್ ಇಟ್ ಈಸಿ..’ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಜಾನಪದ ಶೈಲಿಯಲ್ಲಿ ಈ ಹಾಡು ಇದೆ. ನಟ ಶರಣ್ ಅವರು ಕಂಠ ಸಿರಿಯಲ್ಲಿ ಹಾಡು ಮೂಡಿ ಬಂದಿದೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯ ಮತ್ತು ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜದ ಬಗ್ಗೆ ವಿವರಿಸಲಾಗಿದೆ.

‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್ ಸೀಸನ್ 9’ರ ಮೂಲಕ ಫೇಮಸ್ ಆದ ರಾಕೇಶ್ ಅಡಿಗ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸುನಿಲ್ ರಾವ್, ಪೂರ್ಣಚಂದ್ರ ಮೈಸೂರು, ತೇಜು ಬೆಳವಾಡಿ, ಮಹೇಶ್, ಪ್ರಭು, ಶೈನ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡ್, ಶ್ವೇತಾ ಆರ್ ಪ್ರಸಾದ್, ದಯಾಳ್ ಪದ್ಮನಾಭ್ ಸೇರಿ ಅನೇಕರು ನಟಿಸಿದ್ದಾರೆ.

ಈ ಚಿತ್ರವನ್ನು ‘ಸಕ್ಕತ್ ಸ್ಟುಡಿಯೋ’ ಅಡಿಯಲ್ಲಿ ಶ್ವೇತಾ ಆರ್. ಪ್ರಸಾದ್ ಹಾಗೂ ವಿದ್ಯಾ ಗಾಂಧಿ ರಾಜನ್ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಸದ್ಯ ಟೈಟಲ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ‘ಮರ್ಯಾದೆ ಪ್ರಶ್ನೆ’ಗೆ ಸಿಕ್ತು ಉತ್ತರ; ಮಧ್ಯಮ ವರ್ಗದ ಭಾವನೆಗಳನ್ನು ಹೇಳಲಿದೆ ಸಿನಿಮಾ

ನಾಗರಾಜ್ ಸೋಮಯಾಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಆರ್​ಜೆ ಪ್ರದೀಪ್ ಅವರು ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅವರೇ ಸಿನಿಮಾದ ಕ್ರಿಯೇಟಿವ್ ಹೆಡ್ ಕೂಡ ಹೌದು. ಸಂದೀಪ್ ವಲ್ಲುರಿ ಅವರ ಛಾಯಾಗ್ರಹಣ ಚಿತ್ರಕ್ಕೆ ಇದೆ. ಸಂಕೇತ್ ಶಿವಪ್ಪ ಅವರ ಸಂಕಲನ ಇದೆ. ಬಹುತೇಕ ಶೂಟಿಂಗ್ ಬೆಂಗಳೂರಿನಲ್ಲೇ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ