AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರಣ್ ಕಂಠಸಿರಿಯಲ್ಲಿ ‘ಮರ್ಯಾದೆ ಪ್ರಶ್ನೆ’ ಹಾಡು; ಮಧ್ಯಮ ವರ್ಗದವರ ಜೀವನದ ಕಥೆ ವಿವರಿಸಿದ ಸಾಂಗ್

ಅರ್ಜುನ್ ರಾಮು ಅವರು ‘ಈಸಿ ಟೇಕ್ ಇಟ್ ಈಸಿ..’ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಜಾನಪದ ಶೈಲಿಯಲ್ಲಿ ಈ ಹಾಡು ಇದೆ. ನಟ ಶರಣ್ ಅವರು ಕಂಠ ಸಿರಿಯಲ್ಲಿ ಹಾಡು ಮೂಡಿ ಬಂದಿದೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ.

ಶರಣ್ ಕಂಠಸಿರಿಯಲ್ಲಿ ‘ಮರ್ಯಾದೆ ಪ್ರಶ್ನೆ’ ಹಾಡು; ಮಧ್ಯಮ ವರ್ಗದವರ ಜೀವನದ ಕಥೆ ವಿವರಿಸಿದ ಸಾಂಗ್
ಮರ್ಯಾದೆ ಪ್ರಶ್ನೆ
Follow us
ರಾಜೇಶ್ ದುಗ್ಗುಮನೆ
|

Updated on: Oct 18, 2024 | 11:56 AM

ನಟ ಶರಣ್ ಅವರು ಹಿರೋ ಆಗಿ ಫೇಮಸ್ ಆಗಿದ್ದಾರೆ. ಇದರ ಜೊತೆಗೆ ಅವರು ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಈಗ ‘ಸಕ್ಕತ್ ಸ್ಟುಡಿಯೋ’ ನಿರ್ಮಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರದ ‘ಈಸಿ ಟೇಕ್ ಇಟ್ ಈಸಿ’ ಹಾಡನ್ನು ಹಾಡಿದ್ದಾರೆ. ಈ ಹಾಡು ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇದೆ. ಈ ಚಿತ್ರ ನವೆಂಬರ್ 22ಕ್ಕೆ ಬಿಡುಗಡೆ ಆಗುತ್ತಿದೆ.

ಅರ್ಜುನ್ ರಾಮು ಅವರು ‘ಈಸಿ ಟೇಕ್ ಇಟ್ ಈಸಿ..’ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಜಾನಪದ ಶೈಲಿಯಲ್ಲಿ ಈ ಹಾಡು ಇದೆ. ನಟ ಶರಣ್ ಅವರು ಕಂಠ ಸಿರಿಯಲ್ಲಿ ಹಾಡು ಮೂಡಿ ಬಂದಿದೆ. ಪ್ರಮೋದ್ ಮರವಂತೆ ಅವರು ಸಾಹಿತ್ಯ ಬರೆದಿದ್ದಾರೆ. ಈ ಹಾಡಿನಲ್ಲಿ ನಟರ ಪಾತ್ರದ ಪರಿಚಯ ಮತ್ತು ಅವರು ಬದುಕುತ್ತಿರುವ ಮಧ್ಯಮ ವರ್ಗದ ಸಮಾಜದ ಬಗ್ಗೆ ವಿವರಿಸಲಾಗಿದೆ.

‘ಬಿಗ್ ಬಾಸ್ ಒಟಿಟಿ’ ಹಾಗೂ ‘ಬಿಗ್ ಬಾಸ್ ಸೀಸನ್ 9’ರ ಮೂಲಕ ಫೇಮಸ್ ಆದ ರಾಕೇಶ್ ಅಡಿಗ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸುನಿಲ್ ರಾವ್, ಪೂರ್ಣಚಂದ್ರ ಮೈಸೂರು, ತೇಜು ಬೆಳವಾಡಿ, ಮಹೇಶ್, ಪ್ರಭು, ಶೈನ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡ್, ಶ್ವೇತಾ ಆರ್ ಪ್ರಸಾದ್, ದಯಾಳ್ ಪದ್ಮನಾಭ್ ಸೇರಿ ಅನೇಕರು ನಟಿಸಿದ್ದಾರೆ.

ಈ ಚಿತ್ರವನ್ನು ‘ಸಕ್ಕತ್ ಸ್ಟುಡಿಯೋ’ ಅಡಿಯಲ್ಲಿ ಶ್ವೇತಾ ಆರ್. ಪ್ರಸಾದ್ ಹಾಗೂ ವಿದ್ಯಾ ಗಾಂಧಿ ರಾಜನ್ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾ ಸದ್ಯ ಟೈಟಲ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ: ‘ಮರ್ಯಾದೆ ಪ್ರಶ್ನೆ’ಗೆ ಸಿಕ್ತು ಉತ್ತರ; ಮಧ್ಯಮ ವರ್ಗದ ಭಾವನೆಗಳನ್ನು ಹೇಳಲಿದೆ ಸಿನಿಮಾ

ನಾಗರಾಜ್ ಸೋಮಯಾಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಆರ್​ಜೆ ಪ್ರದೀಪ್ ಅವರು ಚಿತ್ರಕ್ಕೆ ಕಥೆ ಬರೆದಿದ್ದಾರೆ. ಅವರೇ ಸಿನಿಮಾದ ಕ್ರಿಯೇಟಿವ್ ಹೆಡ್ ಕೂಡ ಹೌದು. ಸಂದೀಪ್ ವಲ್ಲುರಿ ಅವರ ಛಾಯಾಗ್ರಹಣ ಚಿತ್ರಕ್ಕೆ ಇದೆ. ಸಂಕೇತ್ ಶಿವಪ್ಪ ಅವರ ಸಂಕಲನ ಇದೆ. ಬಹುತೇಕ ಶೂಟಿಂಗ್ ಬೆಂಗಳೂರಿನಲ್ಲೇ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ