AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿನ್ನವಾಗಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಿಸಿದ ‘ಮರ್ಯಾದೆ ಪ್ರಶ್ನೆ’ ತಂಡ

Shankar Nag: ಇಂದು ಶಂಕರ್ ನಾಗ್ ಹುಟ್ಟುಹಬ್ಬ. ಶಂಕರ್ ನಾಗ್ ಹುಟ್ಟುಹಬ್ಬವನ್ನು ‘ಮರ್ಯಾದೆ ಪ್ರಶ್ನೆ’ ಚಿತ್ರತಂಡ ಆಟೋ ಚಾಲಕರ ಜೊತೆಗೆ ಆಚರಣೆ ಮಾಡಿದರು.

ಭಿನ್ನವಾಗಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಿಸಿದ ‘ಮರ್ಯಾದೆ ಪ್ರಶ್ನೆ’ ತಂಡ
ಮಂಜುನಾಥ ಸಿ.
|

Updated on: Nov 09, 2024 | 10:00 PM

Share

ಇಂದು (ನವೆಂಬರ್ 09) ಶಂಕರ್ ನಾಗ್ ಹುಟ್ಟುಹಬ್ಬ. ಈ ದಿನ ರಾಜ್ಯದಾದ್ಯಂತ ಆಟೋ ಡ್ರೈವರ್​ಗಳು, ಸಿನಿಮಾ ಪ್ರೇಮಿಗಳು ಶಂಕರ್ ನಾಗ್ ಅವರ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಅದರಲ್ಲೂ ಆಟೋ ಡ್ರೈವರ್​ಗಳಂತೂ ಶಂಕರ್ ನಾಗ್ ಅವರ ಹುಟ್ಟುಹಬ್ಬವನ್ನು ‘ಚಾಲಕರ ದಿನ’ವನ್ನಾಗಿಯೇ ಆಚರಿಸಿದ್ದಾರೆ. ಶಂಕರ್ ನಾಗ್ ಹುಟ್ಟುಹಬ್ಬವನ್ನು ಚಾಲಕರ ದಿನವನ್ನಾಗಿ ಅಧಿಕೃತ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯವನ್ನೂ ಮಾಡಿದ್ದಾರೆ. ಇದರ ನಡುವೆ ಕನ್ನಡದ ‘ಮರ್ಯಾದೆ ಪ್ರಶ್ನೆ’ ಚಿತ್ರತಂಡ ಭಿನ್ನವಾಗಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ ಮಾಡಿದೆ.

‘ಮರ್ಯಾದೆ ಪ್ರಶ್ನೆ’ ಚಿತ್ರತಂಡ ಆಟೋ ಚಾಲಕರ ಜೊತೆಗೆ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ ಮಾಡಿದೆ. ಮಾತ್ರವಲ್ಲದೆ ತಮ್ಮ ‘ಮರ್ಯಾದೆ ಪ್ರಶ್ನೆ’ ಸಿನಿಮಾದ ಪ್ರಚಾರವನ್ನೂ ಸಹ ಅದ್ಧೂರಿಯಾಗಿ ಮಾಡಿದೆ. ಮರ್ಯಾದೆ ಪ್ರಶ್ನೆ ಚಿತ್ರತಂಡದ ಜೊತೆಗೆ ನಮ್ಮ ಯಾತ್ರಿ ಆ್ಯಪಿನ ರಾಜೀವ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

2017 ರಲ್ಲಿ ಶಂಕರ್ ನಾಗ್ ಅವರ ಹುಟ್ಟುಹಬ್ಬದಂದೇ ಪ್ರಾರಂಭವಾದ ಆರ್​ಜೆ ಪ್ರದೀಪ್ ಅವರ ಸಖತ್ ಸ್ಟುಡಿಯೋ ಮೂಲಕ ಬಿಡುಗಡೆ ಆಗಲಿರುವ ಮೊದಲ ಸಿನಿಮಾ ‘ಮರ್ಯಾದೆ ಪ್ರಶ್ನೆ’. ಈ ಸಿನಿಮಾದ ತಂಡ ಆಟೋ ಡ್ರೈವರ್​ಗಳ ಜೊತೆಗೆ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಮಾಡಿದೆ. ಜೊತೆಗೆ ಸಿನಿಮಾದ ಪ್ರಚಾರವನ್ನೂ ಸಹ ಮಾಡಿದೆ. ‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ‘ಡ್ರೈವರ್’ ಪಾತ್ರ ಮಾಡಿರುವ ನಟ ಪೂರ್ಣಚಂದ್ರ ಮೈಸೂರು ಅವರಿಗೆ ಖಾಕಿ ಕೋಟ್ ಹಾಕುವ ಮೂಲಕ ಆಟೋ ಚಾಲಕರು ಸಾಂಕೇತಿಕವಾಗಿ ಪೂರ್ಣ ಅವರನ್ನು ಚಾಲಕರ ಬಳಗಕ್ಕೆ ಬರಮಾಡಿಕೊಂಡರು‌‌. ಇದೇ ಸಂದರ್ಭದಲ್ಲಿ ಮರ್ಯಾದೆ ಪ್ರಶ್ನೆ ಚಿತ್ರದ ಆಟೋ ಸ್ಟಿಕ್ಕರ್ಸ್ ಹಾಕಲಾಯ್ತು.

ಇದನ್ನೂ ಓದಿ:ಅಪಘಾತದ ವೇಳೆ ನಿಜಕ್ಕೂ ಶಂಕರ್ ನಾಗ್ ಕಾರು ಚಲಾಯಿಸುತ್ತಿದ್ದರಾ?

ಈ ಸಂದರ್ಭದಲ್ಲಿ ಮಾತನಾಡಿದ ನಟ ಪೂರ್ಣಚಂದ್ರ ಮೈಸೂರು ‘ಈ ಸಿನಿಮಾದಲ್ಲಿ ನಾನು ಚಾಲಕನ ಪಾತ್ರ ಮಾಡಿದ್ದೇನೆ.‌ ಚಾಲಕರ ಕಷ್ಟಸುಖಗಳನ್ನು ತೋರಿಸುವ ಚಂದದ ಪಾತ್ರ. ‘ಮರ್ಯಾದೆ ಪ್ರಶ್ನೆ’ ಮಿಡಲ್ ಕ್ಲಾಸ್ ಜೀವನ ತೋರಿಸುವ ಚಿತ್ರ. ಚಾಲಕರು ಸೇರಿದಂತೆ ಎಲ್ಲ ದುಡಿಯುವ ವರ್ಗಕ್ಕೂ ಈ ಸಿನಿಮಾ ಇಷ್ಟವಾಗುವ ನಂಬಿಕೆಯಿದೆ’ ಎಂದರು.

‘ಲೂಸ್ ಕನೆಕ್ಷನ್’, ‘ಹನಿಮೂನ್’ ವೆಬ್ ಸೀರೀಸ್​ಗಳನ್ನು ನಿರ್ಮಿಸಿ ಸದ್ದು ಮಾಡಿದ್ದ ಆರ್‌ಜೆ ಪ್ರದೀಪಾ ಅವರ ‘ಸಕ್ಕತ್ ಸ್ಟೂಡಿಯೋ’ ಈ ಚಿತ್ರವನ್ನು ನಿರ್ಮಿಸಿದೆ. ಪ್ರದೀಪಾ ಅವರೇ ಬರೆದ ಕಥೆಗೆ ನಾಗರಾಜ ಸೋಮಯಾಜಿ ಅವರ ಚಿತ್ರಕತೆ, ಸಂಭಾಷಣೆ ನಿರ್ದೇಶನವಿದೆ. ‘ಮರ್ಯಾದೆ ಪ್ರಶ್ನೆʼ ನವೆಂಬರ್ 22ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೇ ತಿಂಗಳ 12ಕ್ಕೆ ಟ್ರೇಲರ್ ಬಿಡುಗಡೆಗೊಳಿಸಲು ಚಿತ್ರತಂಡ ಸಜ್ಜಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್