AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಿನ್ನವಾಗಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಿಸಿದ ‘ಮರ್ಯಾದೆ ಪ್ರಶ್ನೆ’ ತಂಡ

Shankar Nag: ಇಂದು ಶಂಕರ್ ನಾಗ್ ಹುಟ್ಟುಹಬ್ಬ. ಶಂಕರ್ ನಾಗ್ ಹುಟ್ಟುಹಬ್ಬವನ್ನು ‘ಮರ್ಯಾದೆ ಪ್ರಶ್ನೆ’ ಚಿತ್ರತಂಡ ಆಟೋ ಚಾಲಕರ ಜೊತೆಗೆ ಆಚರಣೆ ಮಾಡಿದರು.

ಭಿನ್ನವಾಗಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಿಸಿದ ‘ಮರ್ಯಾದೆ ಪ್ರಶ್ನೆ’ ತಂಡ
ಮಂಜುನಾಥ ಸಿ.
|

Updated on: Nov 09, 2024 | 10:00 PM

Share

ಇಂದು (ನವೆಂಬರ್ 09) ಶಂಕರ್ ನಾಗ್ ಹುಟ್ಟುಹಬ್ಬ. ಈ ದಿನ ರಾಜ್ಯದಾದ್ಯಂತ ಆಟೋ ಡ್ರೈವರ್​ಗಳು, ಸಿನಿಮಾ ಪ್ರೇಮಿಗಳು ಶಂಕರ್ ನಾಗ್ ಅವರ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಅದರಲ್ಲೂ ಆಟೋ ಡ್ರೈವರ್​ಗಳಂತೂ ಶಂಕರ್ ನಾಗ್ ಅವರ ಹುಟ್ಟುಹಬ್ಬವನ್ನು ‘ಚಾಲಕರ ದಿನ’ವನ್ನಾಗಿಯೇ ಆಚರಿಸಿದ್ದಾರೆ. ಶಂಕರ್ ನಾಗ್ ಹುಟ್ಟುಹಬ್ಬವನ್ನು ಚಾಲಕರ ದಿನವನ್ನಾಗಿ ಅಧಿಕೃತ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯವನ್ನೂ ಮಾಡಿದ್ದಾರೆ. ಇದರ ನಡುವೆ ಕನ್ನಡದ ‘ಮರ್ಯಾದೆ ಪ್ರಶ್ನೆ’ ಚಿತ್ರತಂಡ ಭಿನ್ನವಾಗಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ ಮಾಡಿದೆ.

‘ಮರ್ಯಾದೆ ಪ್ರಶ್ನೆ’ ಚಿತ್ರತಂಡ ಆಟೋ ಚಾಲಕರ ಜೊತೆಗೆ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ ಮಾಡಿದೆ. ಮಾತ್ರವಲ್ಲದೆ ತಮ್ಮ ‘ಮರ್ಯಾದೆ ಪ್ರಶ್ನೆ’ ಸಿನಿಮಾದ ಪ್ರಚಾರವನ್ನೂ ಸಹ ಅದ್ಧೂರಿಯಾಗಿ ಮಾಡಿದೆ. ಮರ್ಯಾದೆ ಪ್ರಶ್ನೆ ಚಿತ್ರತಂಡದ ಜೊತೆಗೆ ನಮ್ಮ ಯಾತ್ರಿ ಆ್ಯಪಿನ ರಾಜೀವ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

2017 ರಲ್ಲಿ ಶಂಕರ್ ನಾಗ್ ಅವರ ಹುಟ್ಟುಹಬ್ಬದಂದೇ ಪ್ರಾರಂಭವಾದ ಆರ್​ಜೆ ಪ್ರದೀಪ್ ಅವರ ಸಖತ್ ಸ್ಟುಡಿಯೋ ಮೂಲಕ ಬಿಡುಗಡೆ ಆಗಲಿರುವ ಮೊದಲ ಸಿನಿಮಾ ‘ಮರ್ಯಾದೆ ಪ್ರಶ್ನೆ’. ಈ ಸಿನಿಮಾದ ತಂಡ ಆಟೋ ಡ್ರೈವರ್​ಗಳ ಜೊತೆಗೆ ಶಂಕರ್ ನಾಗ್ ಹುಟ್ಟು ಹಬ್ಬ ಆಚರಣೆ ಮಾಡಿದೆ. ಜೊತೆಗೆ ಸಿನಿಮಾದ ಪ್ರಚಾರವನ್ನೂ ಸಹ ಮಾಡಿದೆ. ‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ‘ಡ್ರೈವರ್’ ಪಾತ್ರ ಮಾಡಿರುವ ನಟ ಪೂರ್ಣಚಂದ್ರ ಮೈಸೂರು ಅವರಿಗೆ ಖಾಕಿ ಕೋಟ್ ಹಾಕುವ ಮೂಲಕ ಆಟೋ ಚಾಲಕರು ಸಾಂಕೇತಿಕವಾಗಿ ಪೂರ್ಣ ಅವರನ್ನು ಚಾಲಕರ ಬಳಗಕ್ಕೆ ಬರಮಾಡಿಕೊಂಡರು‌‌. ಇದೇ ಸಂದರ್ಭದಲ್ಲಿ ಮರ್ಯಾದೆ ಪ್ರಶ್ನೆ ಚಿತ್ರದ ಆಟೋ ಸ್ಟಿಕ್ಕರ್ಸ್ ಹಾಕಲಾಯ್ತು.

ಇದನ್ನೂ ಓದಿ:ಅಪಘಾತದ ವೇಳೆ ನಿಜಕ್ಕೂ ಶಂಕರ್ ನಾಗ್ ಕಾರು ಚಲಾಯಿಸುತ್ತಿದ್ದರಾ?

ಈ ಸಂದರ್ಭದಲ್ಲಿ ಮಾತನಾಡಿದ ನಟ ಪೂರ್ಣಚಂದ್ರ ಮೈಸೂರು ‘ಈ ಸಿನಿಮಾದಲ್ಲಿ ನಾನು ಚಾಲಕನ ಪಾತ್ರ ಮಾಡಿದ್ದೇನೆ.‌ ಚಾಲಕರ ಕಷ್ಟಸುಖಗಳನ್ನು ತೋರಿಸುವ ಚಂದದ ಪಾತ್ರ. ‘ಮರ್ಯಾದೆ ಪ್ರಶ್ನೆ’ ಮಿಡಲ್ ಕ್ಲಾಸ್ ಜೀವನ ತೋರಿಸುವ ಚಿತ್ರ. ಚಾಲಕರು ಸೇರಿದಂತೆ ಎಲ್ಲ ದುಡಿಯುವ ವರ್ಗಕ್ಕೂ ಈ ಸಿನಿಮಾ ಇಷ್ಟವಾಗುವ ನಂಬಿಕೆಯಿದೆ’ ಎಂದರು.

‘ಲೂಸ್ ಕನೆಕ್ಷನ್’, ‘ಹನಿಮೂನ್’ ವೆಬ್ ಸೀರೀಸ್​ಗಳನ್ನು ನಿರ್ಮಿಸಿ ಸದ್ದು ಮಾಡಿದ್ದ ಆರ್‌ಜೆ ಪ್ರದೀಪಾ ಅವರ ‘ಸಕ್ಕತ್ ಸ್ಟೂಡಿಯೋ’ ಈ ಚಿತ್ರವನ್ನು ನಿರ್ಮಿಸಿದೆ. ಪ್ರದೀಪಾ ಅವರೇ ಬರೆದ ಕಥೆಗೆ ನಾಗರಾಜ ಸೋಮಯಾಜಿ ಅವರ ಚಿತ್ರಕತೆ, ಸಂಭಾಷಣೆ ನಿರ್ದೇಶನವಿದೆ. ‘ಮರ್ಯಾದೆ ಪ್ರಶ್ನೆʼ ನವೆಂಬರ್ 22ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದೇ ತಿಂಗಳ 12ಕ್ಕೆ ಟ್ರೇಲರ್ ಬಿಡುಗಡೆಗೊಳಿಸಲು ಚಿತ್ರತಂಡ ಸಜ್ಜಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!