AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದೆ ಪ್ರಶ್ನೆ: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗೆ ಅಂಥದ್ದೇನಾಯ್ತು?

ಜನ ಸಾಮಾನ್ಯರಾಗಿರಲಿ ಅಥವಾ ಸೆಲೆಬ್ರಿಟಿಗಳೇ ಆಗಿರಲಿ ಮರ್ಯಾದೆ ಪ್ರಶ್ನೆ ಬಂದರೆ ಸುಮ್ಮನಿರೋಕೆ ಸಾಧ್ಯವಿಲ್ಲ. ಸ್ಯಾಂಡಲ್​ವುಡ್​ನ ಅನೇಕ ಮಂದಿಗೆ ಈಗ ಮರ್ಯಾದೆ ಪ್ರಶ್ನೆ ಎದುರಾಗಿದೆ. ಅವರೆಲ್ಲ ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿದ್ದಾರೆ. ಅಷ್ಟಕ್ಕೂ ಈ ಸೆಲೆಬ್ರಿಟಿಗಳೆಲ್ಲ ಏಕಕಾಲಕ್ಕೆ ಮರ್ಯಾದೆ ಬಗ್ಗೆ ತಲೆ ಕೆಡಿಸಿಕೊಂಡಿದ್ದು ಯಾಕೆ ಎಂಬ ಕೌತುಕ ಮೂಡಿದೆ.

ಮರ್ಯಾದೆ ಪ್ರಶ್ನೆ: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗೆ ಅಂಥದ್ದೇನಾಯ್ತು?
ಮರ್ಯಾದೆ ಪ್ರಶ್ನೆ
ಮದನ್​ ಕುಮಾರ್​
|

Updated on: Mar 13, 2024 | 7:33 PM

Share

ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಮರ್ಯಾದೆ ಪ್ರಶ್ನೆ (Maryade Prashne) ಎದುರಾಗಿದೆ. ಅವರ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಇದೇ ಟ್ರೆಂಡ್​ ಆಗುತ್ತಿದೆ. ತಮ್ಮ ಪಾಲಿನ ಮರ್ಯಾದೆ ಪ್ರಶ್ನೆ ಏನು ಎಂಬುದನ್ನು ಸೆಲೆಬ್ರಿಟಿಗಳು ಪೋಸ್ಟ್​ ಮಾಡುತ್ತಿದ್ದಾರೆ. ನಿರ್ದೇಶಕ ಸಿಂಪಲ್​ ಸುನಿ, ನಟಿ ನಿಶ್ವಿಕಾ ನಾಯ್ಡು, ಸಂಯುಕ್ತಾ ಹೊರನಾಡು, ಸೆಲೆಬ್ರಿಟಿ ಜಿಮ್​ ಟ್ರೇನರ್​ ಶ್ರಿನಿವಾಸ್​ ಗೌಡ ಮುಂತಾದವರು ಇದೇ ವಿಷಯವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ವಲಯದಲ್ಲಿ ಕೌತುಕ ಮೂಡಿಸಲಾಗಿದೆ. ಸ್ಯಾಂಡಲ್​ವುಡ್​ನ (Sandalwood) ಇವರಿಗೆಲ್ಲ ಅಂದೆಂಥ ಮರ್ಯಾದೆ ಪ್ರಶ್ನೆ ಎದುರಾಗಿರಬಹುದು ಎಂದು ಫ್ಯಾನ್ಸ್​ ತಲೆ ಕೆಡಿಸಿಕೊಂಡಿದ್ದಾರೆ.

‘ಕರಟಕ ದಮನಕ’ ಸಿನಿಮಾದಲ್ಲಿ ನಿಶ್ವಿಕಾ ನಾಯ್ಡು ಅವರು ನಟಿಸಿದ್ದಾರೆ. ಆ ಚಿತ್ರದಲ್ಲಿ ಪ್ರಭುದೇವ ಜೊತೆ ಅವರು ಡ್ಯಾನ್ಸ್​ ಮಾಡಿದ ‘ಹಿತ್ತಲಕ ಕರಿಬ್ಯಾಡ ಮ್ಯಾವ..’ ಸಾಂಗ್​ ಸೂಪರ್​ ಹಿಟ್​ ಆಗಿದೆ. ಇದೇ ವಿಷಯವನ್ನು ಇಟ್ಟುಕೊಂಡು ನಿಶ್ವಿಕಾ ನಾಯ್ಡು ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ‘ಹಿತ್ತಲಕ ಕರಿಬೇಡ ಮಾವಾ. ಮರ್ಯಾದೆ ಪ್ರಶ್ನೆ’ ಎಂದು ಬರೆದುಕೊಂಡಿದ್ದಾರೆ.

ಇನ್ನು, ಸಿಂಪಲ್​ ಸುನಿ ನಿರ್ದೇಶನ ಮಾಡಿರುವ ‘ಅವತಾರ ಪುರುಷ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಮಾರ್ಚ್​ 22ರಂದು ತೆರೆಕಾಣಲಿದೆ. ಅದರ ತಯಾರಿಯಲ್ಲಿರುವ ಸಿಂಪಲ್​ ಸುನಿ ಅವರಿಗೂ ಮರ್ಯಾದೆ ಪ್ರಶ್ನೆ ಎದುರಾಗಿದೆ. ‘ಅವತಾರ ಪುರುಷ 2 ಸಿನಿಮಾ ಗೆಲ್ಲಲೇ ಬೇಕು. ಮರ್ಯಾದೆ ಪ್ರಶ್ನೆ’ ಎಂದು ಸುನಿ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಲೇಡಿ ಡೈರೆಕ್ಟರ್ಸ್ ಕಡಿಮೆ ಏಕೆ? ಉತ್ತರಿಸಿದ ನಿರ್ದೇಶಕಿ ರಿಷಿಕಾ ಶರ್ಮಾ

‘ಮನಸ್ಸಿಗೆ ಅನ್ಸಿದ್ದು ಹೇಳಿಬಿಡಬೇಕು. ಮರ್ಯಾದೆ ಪ್ರಶ್ನೆ’ ಎಂದು ನಿರಂಜನ್​ ದೇಶಪಾಂಡೆ ಬರೆದುಕೊಂಡಿದ್ದಾರೆ. ‘ಒಳ್ಳೆಯವರಾಗಿ ಇರೋದಕ್ಕೆ ಕಾಸು ಬೇಕಾ? ಮರ್ಯಾದೆ ಪ್ರಶ್ನೆ’ ಎಂದು ನಟಿ ಸಂಯುಕ್ತಾ ಹೊರನಾಡು ಬರೆದುಕೊಂಡಿದ್ದಾರೆ. ‘ಜಿಮ್​ಗೆ ಸೇರ್ತೀರ. ಕಾಸು ಕೊಡ್ತೀರ. ಆದ್ರೆ ಜಿಮ್​ಗೆ ಬರೋದೇ ಇಲ್ಲ. ಮರ್ಯಾದೆ ಪ್ರಶ್ನೆ’ ಎಂದು ಸೆಲೆಬ್ರಿಟಿ ಟ್ರೇನರ್​ ಶ್ರೀನಿವಾಸ್​ ಗೌಡ ಪೋಸ್ಟ್​ ಮಾಡಿದ್ದಾರೆ. ಸೆಲೆಬ್ರಿಟಿಗಳ ಈ ಪೋಸ್ಟ್​ಗೆ ಕಮೆಂಟ್​ ಮಾಡಿದ ನೆಟ್ಟಿಗರು ‘ಇದೇನು ಹೊಸ ಟ್ರೆಂಡ್​’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನನ್ನೊಬ್ಬನಿಂದ ಕನ್ನಡ ಚಿತ್ರರಂಗ ಅಲ್ಲ, ಹೊಸಬರಿಗೂ ಪ್ರೋತ್ಸಾಹ ಸಿಗಲಿ: ಯಶ್

‘ಮರ್ಯಾದೆ ಪ್ರಶ್ನೆ’ ಬಗ್ಗೆ ಕೆಲವು ಅನುಮಾನಗಳ ಕೂಡ ಮೂಡಿವೆ. ಇದು ಹೊಸ ಸಿನಿಮಾದ ಟೈಟಲ್​ ಆಗಿರಬಹುದೇ? ಆ ಶೀರ್ಷಿಕೆ ಅನೌನ್ಸ್​ ಮಾಡುವುದಕ್ಕೂ ಮುನ್ನವೇ ಹೀಗೆ ಟ್ರೆಂಡ್​ ಮಾಡಲಾಗುತ್ತಿದೆಯೇ? ಪ್ರಚಾರಕ್ಕಾಗಿ ಹೊಸ ಪ್ಲ್ಯಾನ್​ ಮಾಡಲಾಗಿದೆಯೇ? ಒಂದು ವೇಳೆ ಅದು ಸಿನಿಮಾದ ಟೈಟಲ್​ ಆಗಿದ್ದರೆ ಆ ಚಿತ್ರಕ್ಕೆ ಹೀರೋ ಯಾರು ಎಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಶೀಘ್ರದಲ್ಲೇ ಅದಕ್ಕೆ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ