AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಯಾದೆ ಪ್ರಶ್ನೆ: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗೆ ಅಂಥದ್ದೇನಾಯ್ತು?

ಜನ ಸಾಮಾನ್ಯರಾಗಿರಲಿ ಅಥವಾ ಸೆಲೆಬ್ರಿಟಿಗಳೇ ಆಗಿರಲಿ ಮರ್ಯಾದೆ ಪ್ರಶ್ನೆ ಬಂದರೆ ಸುಮ್ಮನಿರೋಕೆ ಸಾಧ್ಯವಿಲ್ಲ. ಸ್ಯಾಂಡಲ್​ವುಡ್​ನ ಅನೇಕ ಮಂದಿಗೆ ಈಗ ಮರ್ಯಾದೆ ಪ್ರಶ್ನೆ ಎದುರಾಗಿದೆ. ಅವರೆಲ್ಲ ಸೋಶಿಯಲ್​ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್​ ಮಾಡಿದ್ದಾರೆ. ಅಷ್ಟಕ್ಕೂ ಈ ಸೆಲೆಬ್ರಿಟಿಗಳೆಲ್ಲ ಏಕಕಾಲಕ್ಕೆ ಮರ್ಯಾದೆ ಬಗ್ಗೆ ತಲೆ ಕೆಡಿಸಿಕೊಂಡಿದ್ದು ಯಾಕೆ ಎಂಬ ಕೌತುಕ ಮೂಡಿದೆ.

ಮರ್ಯಾದೆ ಪ್ರಶ್ನೆ: ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗೆ ಅಂಥದ್ದೇನಾಯ್ತು?
ಮರ್ಯಾದೆ ಪ್ರಶ್ನೆ
ಮದನ್​ ಕುಮಾರ್​
|

Updated on: Mar 13, 2024 | 7:33 PM

Share

ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೆ ಮರ್ಯಾದೆ ಪ್ರಶ್ನೆ (Maryade Prashne) ಎದುರಾಗಿದೆ. ಅವರ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಇದೇ ಟ್ರೆಂಡ್​ ಆಗುತ್ತಿದೆ. ತಮ್ಮ ಪಾಲಿನ ಮರ್ಯಾದೆ ಪ್ರಶ್ನೆ ಏನು ಎಂಬುದನ್ನು ಸೆಲೆಬ್ರಿಟಿಗಳು ಪೋಸ್ಟ್​ ಮಾಡುತ್ತಿದ್ದಾರೆ. ನಿರ್ದೇಶಕ ಸಿಂಪಲ್​ ಸುನಿ, ನಟಿ ನಿಶ್ವಿಕಾ ನಾಯ್ಡು, ಸಂಯುಕ್ತಾ ಹೊರನಾಡು, ಸೆಲೆಬ್ರಿಟಿ ಜಿಮ್​ ಟ್ರೇನರ್​ ಶ್ರಿನಿವಾಸ್​ ಗೌಡ ಮುಂತಾದವರು ಇದೇ ವಿಷಯವಾಗಿ ಬರೆದುಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ವಲಯದಲ್ಲಿ ಕೌತುಕ ಮೂಡಿಸಲಾಗಿದೆ. ಸ್ಯಾಂಡಲ್​ವುಡ್​ನ (Sandalwood) ಇವರಿಗೆಲ್ಲ ಅಂದೆಂಥ ಮರ್ಯಾದೆ ಪ್ರಶ್ನೆ ಎದುರಾಗಿರಬಹುದು ಎಂದು ಫ್ಯಾನ್ಸ್​ ತಲೆ ಕೆಡಿಸಿಕೊಂಡಿದ್ದಾರೆ.

‘ಕರಟಕ ದಮನಕ’ ಸಿನಿಮಾದಲ್ಲಿ ನಿಶ್ವಿಕಾ ನಾಯ್ಡು ಅವರು ನಟಿಸಿದ್ದಾರೆ. ಆ ಚಿತ್ರದಲ್ಲಿ ಪ್ರಭುದೇವ ಜೊತೆ ಅವರು ಡ್ಯಾನ್ಸ್​ ಮಾಡಿದ ‘ಹಿತ್ತಲಕ ಕರಿಬ್ಯಾಡ ಮ್ಯಾವ..’ ಸಾಂಗ್​ ಸೂಪರ್​ ಹಿಟ್​ ಆಗಿದೆ. ಇದೇ ವಿಷಯವನ್ನು ಇಟ್ಟುಕೊಂಡು ನಿಶ್ವಿಕಾ ನಾಯ್ಡು ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ‘ಹಿತ್ತಲಕ ಕರಿಬೇಡ ಮಾವಾ. ಮರ್ಯಾದೆ ಪ್ರಶ್ನೆ’ ಎಂದು ಬರೆದುಕೊಂಡಿದ್ದಾರೆ.

ಇನ್ನು, ಸಿಂಪಲ್​ ಸುನಿ ನಿರ್ದೇಶನ ಮಾಡಿರುವ ‘ಅವತಾರ ಪುರುಷ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾ ಮಾರ್ಚ್​ 22ರಂದು ತೆರೆಕಾಣಲಿದೆ. ಅದರ ತಯಾರಿಯಲ್ಲಿರುವ ಸಿಂಪಲ್​ ಸುನಿ ಅವರಿಗೂ ಮರ್ಯಾದೆ ಪ್ರಶ್ನೆ ಎದುರಾಗಿದೆ. ‘ಅವತಾರ ಪುರುಷ 2 ಸಿನಿಮಾ ಗೆಲ್ಲಲೇ ಬೇಕು. ಮರ್ಯಾದೆ ಪ್ರಶ್ನೆ’ ಎಂದು ಸುನಿ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಲೇಡಿ ಡೈರೆಕ್ಟರ್ಸ್ ಕಡಿಮೆ ಏಕೆ? ಉತ್ತರಿಸಿದ ನಿರ್ದೇಶಕಿ ರಿಷಿಕಾ ಶರ್ಮಾ

‘ಮನಸ್ಸಿಗೆ ಅನ್ಸಿದ್ದು ಹೇಳಿಬಿಡಬೇಕು. ಮರ್ಯಾದೆ ಪ್ರಶ್ನೆ’ ಎಂದು ನಿರಂಜನ್​ ದೇಶಪಾಂಡೆ ಬರೆದುಕೊಂಡಿದ್ದಾರೆ. ‘ಒಳ್ಳೆಯವರಾಗಿ ಇರೋದಕ್ಕೆ ಕಾಸು ಬೇಕಾ? ಮರ್ಯಾದೆ ಪ್ರಶ್ನೆ’ ಎಂದು ನಟಿ ಸಂಯುಕ್ತಾ ಹೊರನಾಡು ಬರೆದುಕೊಂಡಿದ್ದಾರೆ. ‘ಜಿಮ್​ಗೆ ಸೇರ್ತೀರ. ಕಾಸು ಕೊಡ್ತೀರ. ಆದ್ರೆ ಜಿಮ್​ಗೆ ಬರೋದೇ ಇಲ್ಲ. ಮರ್ಯಾದೆ ಪ್ರಶ್ನೆ’ ಎಂದು ಸೆಲೆಬ್ರಿಟಿ ಟ್ರೇನರ್​ ಶ್ರೀನಿವಾಸ್​ ಗೌಡ ಪೋಸ್ಟ್​ ಮಾಡಿದ್ದಾರೆ. ಸೆಲೆಬ್ರಿಟಿಗಳ ಈ ಪೋಸ್ಟ್​ಗೆ ಕಮೆಂಟ್​ ಮಾಡಿದ ನೆಟ್ಟಿಗರು ‘ಇದೇನು ಹೊಸ ಟ್ರೆಂಡ್​’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನನ್ನೊಬ್ಬನಿಂದ ಕನ್ನಡ ಚಿತ್ರರಂಗ ಅಲ್ಲ, ಹೊಸಬರಿಗೂ ಪ್ರೋತ್ಸಾಹ ಸಿಗಲಿ: ಯಶ್

‘ಮರ್ಯಾದೆ ಪ್ರಶ್ನೆ’ ಬಗ್ಗೆ ಕೆಲವು ಅನುಮಾನಗಳ ಕೂಡ ಮೂಡಿವೆ. ಇದು ಹೊಸ ಸಿನಿಮಾದ ಟೈಟಲ್​ ಆಗಿರಬಹುದೇ? ಆ ಶೀರ್ಷಿಕೆ ಅನೌನ್ಸ್​ ಮಾಡುವುದಕ್ಕೂ ಮುನ್ನವೇ ಹೀಗೆ ಟ್ರೆಂಡ್​ ಮಾಡಲಾಗುತ್ತಿದೆಯೇ? ಪ್ರಚಾರಕ್ಕಾಗಿ ಹೊಸ ಪ್ಲ್ಯಾನ್​ ಮಾಡಲಾಗಿದೆಯೇ? ಒಂದು ವೇಳೆ ಅದು ಸಿನಿಮಾದ ಟೈಟಲ್​ ಆಗಿದ್ದರೆ ಆ ಚಿತ್ರಕ್ಕೆ ಹೀರೋ ಯಾರು ಎಂಬಿತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಶೀಘ್ರದಲ್ಲೇ ಅದಕ್ಕೆ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ