AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏನಮ್ಮಿ..’ ಬಳಿಕ ಮತ್ತೊಂದು ಹಿಟ್​ ಹಾಡು ನೀಡಿದ ರಚಿತಾ ರಾಮ್-ಸತೀಶ್ ನೀನಾಸಂ; ‘ಮ್ಯಾಟ್ನಿ’ ಗೀತೆಗೆ ಮೆಚ್ಚುಗೆ

Matinee Movie Song: ಆನಂದ್ ಆಡಿಯೋ ಮೂಲಕ ‘ಸಂಜೆ ಮೇಲೆ ಸುಮ್ನೆ ಹಂಗೆ ಫೋನು ಮಾಡ್ಲ ನಿಂಗೆ..’ ಹಾಡು ಬಿಡುಗಡೆ ಆಗಿದೆ. ಪೂರ್ಣಚಂದ್ರ ತೇಜಸ್ವಿ ಅವರು ಸಾಹಿತ್ಯ ಬರೆದು, ಸಂಗೀತ ನೀಡಿರುವ ಈ ಹಾಡಿಗೆ ವಿಜಯ್ ಪ್ರಕಾಶ್ ಧ್ವನಿ ನೀಡಿದ್ದಾರೆ.

‘ಏನಮ್ಮಿ..’ ಬಳಿಕ ಮತ್ತೊಂದು ಹಿಟ್​ ಹಾಡು ನೀಡಿದ ರಚಿತಾ ರಾಮ್-ಸತೀಶ್ ನೀನಾಸಂ; ‘ಮ್ಯಾಟ್ನಿ’ ಗೀತೆಗೆ ಮೆಚ್ಚುಗೆ
‘ಮ್ಯಾಟ್ನಿ’ ಸಿನಿಮಾ ತಂಡ
ಮದನ್​ ಕುಮಾರ್​
|

Updated on: Aug 05, 2023 | 1:01 PM

Share

‘ಅಯೋಗ್ಯ’ ಸಿನಿಮಾ 2018ರಲ್ಲಿ ತೆರೆಕಂಡಿತ್ತು. ಆ ಸಿನಿಮಾದ ‘ಏನಮ್ಮಿ ಏನಮ್ಮಿ..’ ಹಾಡಿಗೆ ಕೇಳುಗರು ಮರುಳಾದರು. ಸತೀಶ್​ ನೀನಾಸಂ (Sathish Ninasam) ಮತ್ತು ರಚಿತಾ ರಾಮ್​ ಅವರು ಜೋಡಿಯಾಗಿ ಕಾಣಿಸಿಕೊಂಡ ಆ ಗೀತೆ ಇಂದಿಗೂ ಟ್ರೆಂಡಿಂಗ್​ನಲ್ಲಿ ಇದೆ. ಈಗ ಅದೇ ಜೋಡಿಯಿಂದ ಮತ್ತೊಂದು ಹಾಡು ಬಂದಿದೆ. ‘ಮ್ಯಾಟ್ನಿ’ ಸಿನಿಮಾದ ಹೊಸ ಸಾಂಗ್​ ಬಿಡುಗಡೆ ಮಾಡಲಾಗಿದೆ. ‘ಸಂಜೆ ಮೇಲೆ ಸುಮ್ನೆ ಹಂಗೆ ಫೋನು ಮಾಡ್ಲ ನಿಂಗೆ..’ ಎಂಬ ಸಾಲಿನಿಂದ ಶುರುವಾಗುವ ಈ ಹಾಡಿನಲ್ಲಿ ರಚಿತಾ ರಾಮ್ (Rachita Ram)​ ಮತ್ತು ನೀನಾಸಂ ಸತೀಶ್​ ಅವರು ಬಿಂದಾಸ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ಈ ಹಾಡು 12 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ. ಆ ಮೂಲಕ ‘ಮ್ಯಾಟ್ನಿ’ ಸಿನಿಮಾ (Matinee Kannada Movie) ಮೇಲೆ ನಿರೀಕ್ಷೆ ಹೆಚ್ಚುವಂತಾಗಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.

‘ಆನಂದ್ ಆಡಿಯೋ’ ಮೂಲಕ ‘ಸಂಜೆ ಮೇಲೆ ಸುಮ್ನೆ ಹಂಗೆ ಫೋನು ಮಾಡ್ಲ ನಿಂಗೆ..’ ಹಾಡು ಬಿಡುಗಡೆ ಆಗಿದೆ. ಪೂರ್ಣಚಂದ್ರ ತೇಜಸ್ವಿ ಅವರು ಸಾಹಿತ್ಯ ಬರೆದು, ಸಂಗೀತ ನೀಡಿರುವ ಈ ಹಾಡಿಗೆ ವಿಜಯ್ ಪ್ರಕಾಶ್ ಅವರು ಧ್ವನಿ ನೀಡಿದ್ದಾರೆ. ತುಂಬ ಕಲರ್​ಫುಲ್​ ಆಗಿ ಈ ಗೀತೆಯನ್ನು ಚಿತ್ರಿಸಲಾಗಿದೆ. ಬಿಡುಗಡೆಯಾದ ತಕ್ಷಣ ಈ ಗೀತೆಗೆ ಜನಮೆಚ್ಚುಗೆ ಸಿಕ್ಕಿದೆ. ಹಾಡು ಸೂಪರ್​ ಹಿಟ್​ ಆಗಿರುವುದಕ್ಕೆ ನೀನಾಸಂ ಸತೀಶ್​ ಅವರಿಗೆ ಬಹಳ ಖುಷಿ ಆಗಿದೆ.

ಇದನ್ನೂ ಓದಿ: Rachita Ram: ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ರಚಿತಾ ರಾಮ್​ ನಾಯಕಿ? ನಾಗಶೇಖರ್​ ಜೊತೆ ನಡೆದಿದೆ ಮಾತುಕತೆ

‘ಈ ಹಾಡಿನ ಕಲಾ ನಿರ್ದೇಶನ, ಕೊರಿಯೋಗ್ರಫಿ, ಕ್ಯಾಮೆರಾ ವರ್ಕ್​ ಎಲ್ಲವೂ ಚೆನ್ನಾಗಿದೆ. ನನ್ನ ವೃತ್ತಿಜೀವನದಲ್ಲಿ ಇದು ಅತ್ಯುತ್ತಮ ಹಾಡು. ಮ್ಯೂಸಿಕ್​ ಡೈರೆಕ್ಟರ್​ ಪೂರ್ಣಚಂದ್ರ ತೇಜಸ್ವಿಗೆ ನಾನು ತುಂಬಾ ತೊಂದರೆ ಕೊಟ್ಟಿದ್ದೇನೆ. ಅವರು ಅಷ್ಟೇ ಉತ್ತಮವಾಗಿ ಹಾಡನ್ನು ನೀಡಿದ್ದಾರೆ. ಈ ಗೀತೆಯನ್ನು ಮೊದಲು ಪೂರ್ಣಚಂದ್ರ ತೇಜಸ್ವಿ ಅವರೇ ಹಾಡಿದ್ದರು. ತಂಡದ ಎಲ್ಲರಿಗೂ ಅದು ಇಷ್ಟ ಆಗಿತ್ತು. ಆದರೂ ಕೂಡ ಈ ಹಾಡಿಗೆ ವಿಜಯ್​ ಪ್ರಕಾಶ್ ಕಂಠ ಸೂಕ್ತ ಎನಿಸಿತು. ಅದಕ್ಕೆ ಪೂರ್ಣಚಂದ್ರ ಅವರು ಒಪ್ಪಿಕೊಂಡರು’ ಎಂದಿದ್ದಾರೆ ಸತೀಶ್​ ನೀನಾಸಂ.

ಇದನ್ನೂ ಓದಿ: ‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ಈ ಸಿನಿಮಾದಲ್ಲಿ ಒಟ್ಟು ನಾಲ್ಕು ಹಾಡುಗಳು ಇವೆ. ಅದಿತಿ ಪ್ರಭುದೇವ ಮತ್ತು ಸತೀಶ್​ ಅವರು ಜೊತೆಯಾಗಿ ಕಾಣಿಸಿಕೊಂಡ ಹಾಡು ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ನಾಗಭೂಷಣ, ಶಿವರಾಜ್ ಕೆ.ಆರ್. ಪೇಟೆ, ಪೂರ್ಣಚಂದ್ರ ಮೈಸೂರು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸೆಪ್ಟೆಂಬರ್​ನಲ್ಲಿ ‘ಮ್ಯಾಟ್ನಿ’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಸತೀಶ್​ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಟ್ರೇಲರ್​ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿದ್ದಾರೆ. ಅದರಲ್ಲಿ ರಚಿತಾ ರಾಮ್​ ಪಾತ್ರದ ಬಗ್ಗೆ ಇನ್ನಷ್ಟು ವಿಷಯ ರಿವೀಲ್​ ಆಗಲಿವೆ.

ಮನೋಹರ್​ ಕಾಂಪಲ್ಲಿ ಅವರು ‘ಮ್ಯಾಟ್ನಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸತೀಶ್​ ನೀನಾಸಂ, ರಚಿತಾ ರಾಮ್​, ಅದಿತಿ ಪ್ರಭುದೇವ ಅವರ ಕಾಂಬಿನೇಷನ್​ ಇರುವುದರಿಂದ ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಮೂಡಿದೆ. ನಿರ್ಮಾಪಕಿ ಪಾರ್ವತಿ ಎಸ್. ಗೌಡ, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಅವರು ಕೂಡ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ