AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಾಲಿ ಚಳಿಯಲ್ಲಿ ಸತೀಶ್​-ಅದಿತಿ ಪ್ರಭುದೇವ; ‘ಮ್ಯಾಟ್ನಿ’ ಚಿತ್ರದ ಹೊಸ ಹಾಡು ರಿಲೀಸ್​

‘ಮ್ಯಾಟ್ನಿ’ ಸಿನಿಮಾ ಏಪ್ರಿಲ್​ 5ರಂದು ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಸತೀಶ್ ನೀನಾಸಂ, ಅದಿತಿ ಪ್ರಭುದೇವ, ರಚಿತಾ ರಾಮ್, ಶಿವರಾಜ್ ಕೆ.ಆರ್. ಪೇಟೆ, ಮುಂತಾದವರು ಅಭಿನಯಿಸಿದ್ದಾರೆ. ಆನಂದ್​ ಆಡಿಯೋ ಮೂಲಕ ‘ನಿನಗಾಗೇ ಮಿಡಿಯುವುದು..’ ಎಂಬ ಹೊಸ ಹಾಡು ಬಿಡುಗಡೆ ಆಗಿದೆ. ಆ ಮೂಲಕ ಪ್ರೇಕ್ಷಕರ ನಿರೀಕ್ಷೆ ಹೆಚ್ಚಿಸಲಾಗಿದೆ.

ಮನಾಲಿ ಚಳಿಯಲ್ಲಿ ಸತೀಶ್​-ಅದಿತಿ ಪ್ರಭುದೇವ; ‘ಮ್ಯಾಟ್ನಿ’ ಚಿತ್ರದ ಹೊಸ ಹಾಡು ರಿಲೀಸ್​
ಸತೀಶ್​ ನೀನಾಸಂ, ಅದಿತಿ ಪ್ರಭುದೇವ
ಮದನ್​ ಕುಮಾರ್​
|

Updated on: Mar 21, 2024 | 8:35 PM

Share

ಸತೀಶ್​ ನೀನಾಸಂ ನಟನೆಯ ‘ಮ್ಯಾಟ್ನಿ’ ಸಿನಿಮಾ (Matinee) ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಈ ಸಿನಿಮಾದ ಪ್ರಮೋಷನ್​ಗೆ ಚುರುಕು ಮುಟ್ಟಿಸಲಾಗಿದೆ. ಈ ಸಿನಿಮಾದಲ್ಲಿ ಸತೀಶ್ ನೀನಾಸಂ (Sathish Ninasam), ರಚಿತಾ ರಾಮ್ ಮತ್ತು ಅದಿತಿ ಪ್ರಭುದೇವ ಅವರು ಮುಖ್ಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಈ ಮೊದಲು ಸತೀಶ್ ಹಾಗೂ ರಚಿತಾ ರಾಮ್​ ಅವರು ‘ಅಯೋಗ್ಯ’ ಸಿನಿಮಾದಲ್ಲಿ ನಟಿಸಿ ಜನಮನ ಗೆದ್ದಿದ್ದರು. ಈಗ ಎರಡನೇ ಬಾರಿಗೆ ಈ ಜೋಡಿ ಒಂದಾಗಿದೆ. ಅವರಿಗೆ ಅದಿತಿ ಪ್ರಭುದೇವ (Aditi Prabhudeva) ಸಾಥ್​ ನೀಡಿದ್ದಾರೆ. ‘ಮ್ಯಾಟ್ನಿ’ ಸಿನಿಮಾದಿಂದ ಹೊಸ ಹಾಡು ಬಿಡುಗಡೆ ಆಗಿದೆ.

ಸದ್ಯ ‘ಮ್ಯಾಟ್ನಿ’ ಚಿತ್ರತಂಡ ಬಿಡುಗಡೆ ಮಾಡಿರುವ ಹಾಡು ಸಖತ್​ ರೊಮ್ಯಾಂಟಿಕ್ ಆಗಿದೆ. ‘ನಿನಗಾಗೇ ಮಿಡಿಯುವುದು ಈ ಹೃದಯ..’ ಎಂಬ ಈ ಗೀತೆಯಲ್ಲಿ ಸತೀಶ್ ನೀನಾಸಂ ಮತ್ತು ಅದಿತಿ ಪ್ರಭುದೇವ ಅವರು ರೊಮ್ಯಾಂಟಿಕ್​ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಹಾಡಿನ ಥೀಮ್​ಗೆ ಅನುಗುಣವಾಗಿ ಸಂಪೂರ್ಣ ಮನಾಲಿಯಲ್ಲಿ ಇದರ ಶೂಟಿಂಗ್​ ಮಾಡಲಾಗಿದೆ.

ವಿಶೇಷ ಏನೆಂದರೆ, ಈ ಗೀತೆಯನ್ನು ‘ಕರುನಾಡ ಚಕ್ರವರ್ತಿ’ ಶಿವರಾಜ್​ಕುಮಾರ್ ಅವರು ರಿಲೀಸ್​ ಮಾಡಿದ್ದಾರೆ. ಹಾಡು ಬಿಡುಗಡೆ ಮಾಡಿದ ಬಳಿಕ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ‘ನಿನಗಾಗೇ ಮಿಡಿಯುವುದು ಈ ಹೃದಯ..’ ಗೀತೆಯ ಜೊತೆಗೆ ಮೇಕಿಂಗ್ ವಿಡಿಯೋವನ್ನು ಕೂಡ ಬಿಡುಗಡೆ ಮಾಡಲಾಗಿದೆ. ಮೂರು ದಿನಗಳ ಕಾಲ ಮನಾಲಿಯ ಚುಮುಚುಮು ಚಳಿಯಲ್ಲಿ ಚಿತ್ರೀಕರಣ ಮಾಡಿದ್ದರ ಅನುಭವವನ್ನು ಮೇಕಿಂಗ್​ ವಿಡಿಯೋದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಸೀಮಂತ ಶಾಸ್ತ್ರದಲ್ಲಿ ಹಸಿರು ಸೀರೆ ಧರಿಸಿ ಕಂಗೊಳಿಸಿದ ಅದಿತಿ ಪ್ರಭುದೇವ

ಮನೋಹರ್ ಕಾಂಪಲ್ಲಿ ಅವರು ‘ಮ್ಯಾಟ್ನಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪಾರ್ವತಿ ಎಸ್. ಗೌಡ ಅವರು ‘ಎಫ್ ಥ್ರೀ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಕೀರ್ತನ್ ಪೂಜಾರಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ‘ನಿನಗಾಗೇ ಮಿಡಿಯುವುದು..’ ಗೀತೆಯನ್ನು ಹೇಮಂತ್ ಕುಮಾರ್ ಗಂಜಂ ಅವರು ಬರೆದಿದ್ದಾರೆ. ಸಂತು ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಸಾದ್ವಿನಿ ಕೊಪ್ಪ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ.

‘ನಿನಗಾಗೇ ಮಿಡಿಯುವುದು..’ ಸಾಂಗ್​:

ಏಪ್ರಿಲ್​ 5ರಂದು ‘ಮ್ಯಾಟ್ನಿ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಸತೀಶ್ ನಿನಾಸಂ, ಅದಿತಿ ಪ್ರಭುದೇವ, ರಚಿತಾ ರಾಮ್ ಮಾತ್ರವಲ್ಲದೇ ಶಿವರಾಜ್ ಕೆ.ಆರ್. ಪೇಟೆ, ಪೂರ್ಣಚಂದ್ರ ಮೈಸೂರು, ನಾಗಭೂಷನ್, ದಿಗಂತ್, ಪ್ರಕಾಶ್ ತುಮ್ಮಿನಾಡು, ತಬಲ ನಾಣಿ, ಮಿಮಿಕ್ರಿ ಗೋಪಿ ಮುಂತಾದವರು ಕೂಡ ನಟಿಸಿದ್ದಾರೆ. ಆನಂದ್​ ಆಡಿಯೋ ಮೂಲಕ ‘ನಿನಗಾಗೇ ಮಿಡಿಯುವುದು..’ ಸಾಂಗ್​ ಬಿಡುಗಡೆ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ