AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Matte Maduve: ತಮ್ಮದೇ ಸಂಸಾರದ ಕಿರಿಕ್​ ಕಥೆಯನ್ನು ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಮಾಡಿದ ನರೇಶ್​-ಪವಿತ್ರಾ?

Pavithra Lokesh | Naresh: ‘ಮತ್ತೆ ಮದುವೆ’ ಸಿನಿಮಾದಲ್ಲಿ ಪವಿತ್ರಾ ಲೋಕೇಶ್​ ಮತ್ತು ನರೇಶ್​ ಅವರು ಜೋಡಿಯಾಗಿ ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿ ನಡೆದ ಘಟನೆಗಳನ್ನೇ ಈ ಸಿನಿಮಾದಲ್ಲಿ ಮರುಸೃಷ್ಟಿ ಮಾಡಲಾಗಿದೆ.

Matte Maduve: ತಮ್ಮದೇ ಸಂಸಾರದ ಕಿರಿಕ್​ ಕಥೆಯನ್ನು ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಮಾಡಿದ ನರೇಶ್​-ಪವಿತ್ರಾ?
ಪವಿತ್ರಾ ಲೋಕೇಶ್, ನರೇಶ್
ಮದನ್​ ಕುಮಾರ್​
|

Updated on: Apr 21, 2023 | 3:11 PM

Share

ತೆಲುಗು ನಟ ನರೇಶ್​ (Naresh) ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್​ ನಡುವೆ ಏನೆಲ್ಲ ನಡೆಯಿತು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ನರೇಶ್​ ಅವರು ತಮ್ಮ ಪತ್ನಿ ರಮ್ಯಾಗೆ ವಿಚ್ಛೇದನ ನೀಡದೆಯೇ ಪವಿತ್ರಾ ಲೋಕೇಶ್​ (Pavithra Lokesh) ಜೊತೆ ಸಂಸಾರ ಶುರು ಮಾಡಿದ್ದಾರೆ ಎಂಬ ವಿಷಯ ದೊಡ್ಡ ವಿವಾದಕ್ಕೆ ಕಾರಣ ಆಗಿತ್ತು. ಮಾಧ್ಯಮಗಳ ಎದುರಿನಲ್ಲಿ ನರೇಶ್​ ಮತ್ತು ರಮ್ಯಾ ಅವರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಅಚ್ಚರಿ ಏನೆಂದರೆ ಈ ಘಟನೆಗಳನ್ನೇ ಆಧಾರವಾಗಿ ಇಟ್ಟುಕೊಂಡು ನರೇಶ್​ ಮತ್ತು ಪವಿತ್ರಾ ಅವರು ಸಿನಿಮಾ ಮಾಡಿದ್ದಾರೆ. ಆ ಸಿನಿಮಾದ ಹೆಸರು ‘ಮತ್ತೆ ಮದುವೆ’. ಇತ್ತೀಚೆಗೆ ಈ ಸಿನಿಮಾದ ಟೈಟಲ್​ ಅನೌನ್ಸ್​ ಆಗಿತ್ತು. ಈಗ ಟೀಸರ್​ ಕೂಡ ಬಿಡುಗಡೆ ಆಗಿದ್ದು, ಇದು ಅವರ ರಿಯಲ್​ ಲೈಫ್​ ಕಥೆಯನ್ನೇ ಆಧರಿಸಿದ ಸಿನಿಮಾ (Matte Maduve Movie) ಎಂಬುದಕ್ಕೆ ಟೀಸರ್​ನಲ್ಲಿ ಝಲಕ್​ ತೋರಿಸಲಾಗಿದೆ.

ನರೇಶ್​ ತೆಲುಗಿನವರು. ಪವಿತ್ರಾ ಲೋಕೇಶ್​ ಕನ್ನಡದವರು. ‘ತೆಲುಗು ಇಂಡಸ್ಟ್ರಿಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದೀರಲ್ಲ..’ ಎಂಬ ಡೈಲಾಗ್​ನೊಂದಿಗೆ ‘ಮತ್ತೆ ಮದುವೆ’ ಸಿನಿಮಾದ ಟೀಸರ್​ ಆರಂಭ ಆಗುತ್ತದೆ. ನಂತರ ಮಹಿಳೆಯೊಬ್ಬರು ‘ನನಗೆ ಮೋಸ ಆಗಿದೆ. ಹೆಂಡತಿಯನ್ನು ಹೇಗೆ ನೋಡಿಕೊಳ್ಳಬೇಕು ಅಂತ ಗೊತ್ತಿಲ್ಲದ ಮೃಗ ಅವನು’ ಎಂದು ಮಾಧ್ಯಮದ ಮುಂದೆ ಆರೋಪ ಮಾಡುತ್ತಿರುವ ದೃಶ್ಯ ಇದೆ.

ಇದನ್ನೂ ಓದಿ: ‘ಮತ್ತೆ ಮದುವೆ’ ಆದ ಬಳಿಕ ಮನೆ ಎದುರು ರಂಗೋಲಿ ಹಾಕುತ್ತಾ ಕುಳಿತ ಪವಿತ್ರಾ ಲೋಕೇಶ್

ಈ ಸಿನಿಮಾದಲ್ಲಿ ಪವಿತ್ರಾ ಲೋಕೇಶ್​ ಮತ್ತು ನರೇಶ್​ ಅವರು ಜೋಡಿಯಾಗಿ ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿ ನಡೆದ ಘಟನೆಗಳನ್ನೇ ಈ ಸಿನಿಮಾದಲ್ಲಿ ಮರುಸೃಷ್ಟಿ ಮಾಡಲಾಗಿದೆ. ಮೈಸೂರಿನ ಹೋಟೆಲ್​ನಲ್ಲಿ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರು ಜೊತೆಯಾಗಿ ಇದ್ದಾಗ ರಮ್ಯಾ ಅವರು ದಾಳಿ ಮಾಡಿದ್ದರು. ಆಗ ನರೇಶ್​ ಅವರು ಶಿಳ್ಳೆ ಹಾಕುತ್ತಾ ಪವಿತ್ರಾ ಜೊತೆ ಹೋಟೆಲ್​ ರೂಮ್​ನಿಂದ ಹೊರಗೆ ಬಂದಿದ್ದರು. ಆ ದೃಶ್ಯ ಕೂಡ ‘ಮತ್ತೆ ಮದುವೆ’ ಟೀಸರ್​ನಲ್ಲಿ ಹೈಲೈಟ್​ ಆಗಿದೆ.

ಕನ್ನಡ ಮತ್ತು ತೆಲುಗಿನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ತೆಲುಗಿನಲ್ಲಿ ‘ಮಳ್ಳಿ ಪೆಳ್ಳಿ’ ಎಂದು ಶೀರ್ಷಿಕೆ ಇಡಲಾಗಿದೆ. ಮೇ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್. ಬಾಲ್ ರೆಡ್ಡಿ ಛಾಯಾಗ್ರಹಣ, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: Pavitra Lokesh Marriage: ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟು ಮದುವೆ ನ್ಯೂಸ್​ ತಿಳಿಸಿದ ನರೇಶ್​; ವಿಡಿಯೋ ವೈರಲ್​

ಜಯ ಕೃಷ್ಣ ಮೂವೀಸ್ ಬ್ಯಾನರ್ ಮೂಲಕ ನರೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎಂ.ಎಸ್. ರಾಜು ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಒಂದು ಫ್ಯಾಮಿಲಿ ಎಂಟರ್​ಟೇನರ್​ ಎಂದು ಚಿತ್ರತಂಡ ಹೇಳಿಕೊಂಡಿದೆ. ಜಯಸುಧಾ, ಶರತ್ ಬಾಬು, ವನಿತಾ ವಿಜಯಕುಮಾರ್, ಅನನ್ಯಾ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧೂ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ