AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Matte Maduve: ತಮ್ಮದೇ ಸಂಸಾರದ ಕಿರಿಕ್​ ಕಥೆಯನ್ನು ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಮಾಡಿದ ನರೇಶ್​-ಪವಿತ್ರಾ?

Pavithra Lokesh | Naresh: ‘ಮತ್ತೆ ಮದುವೆ’ ಸಿನಿಮಾದಲ್ಲಿ ಪವಿತ್ರಾ ಲೋಕೇಶ್​ ಮತ್ತು ನರೇಶ್​ ಅವರು ಜೋಡಿಯಾಗಿ ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿ ನಡೆದ ಘಟನೆಗಳನ್ನೇ ಈ ಸಿನಿಮಾದಲ್ಲಿ ಮರುಸೃಷ್ಟಿ ಮಾಡಲಾಗಿದೆ.

Matte Maduve: ತಮ್ಮದೇ ಸಂಸಾರದ ಕಿರಿಕ್​ ಕಥೆಯನ್ನು ಇಟ್ಟುಕೊಂಡು ‘ಮತ್ತೆ ಮದುವೆ’ ಸಿನಿಮಾ ಮಾಡಿದ ನರೇಶ್​-ಪವಿತ್ರಾ?
ಪವಿತ್ರಾ ಲೋಕೇಶ್, ನರೇಶ್
ಮದನ್​ ಕುಮಾರ್​
|

Updated on: Apr 21, 2023 | 3:11 PM

Share

ತೆಲುಗು ನಟ ನರೇಶ್​ (Naresh) ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್​ ನಡುವೆ ಏನೆಲ್ಲ ನಡೆಯಿತು ಎಂಬುದು ಈಗ ಗುಟ್ಟಾಗಿ ಉಳಿದಿಲ್ಲ. ನರೇಶ್​ ಅವರು ತಮ್ಮ ಪತ್ನಿ ರಮ್ಯಾಗೆ ವಿಚ್ಛೇದನ ನೀಡದೆಯೇ ಪವಿತ್ರಾ ಲೋಕೇಶ್​ (Pavithra Lokesh) ಜೊತೆ ಸಂಸಾರ ಶುರು ಮಾಡಿದ್ದಾರೆ ಎಂಬ ವಿಷಯ ದೊಡ್ಡ ವಿವಾದಕ್ಕೆ ಕಾರಣ ಆಗಿತ್ತು. ಮಾಧ್ಯಮಗಳ ಎದುರಿನಲ್ಲಿ ನರೇಶ್​ ಮತ್ತು ರಮ್ಯಾ ಅವರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದರು. ಅಚ್ಚರಿ ಏನೆಂದರೆ ಈ ಘಟನೆಗಳನ್ನೇ ಆಧಾರವಾಗಿ ಇಟ್ಟುಕೊಂಡು ನರೇಶ್​ ಮತ್ತು ಪವಿತ್ರಾ ಅವರು ಸಿನಿಮಾ ಮಾಡಿದ್ದಾರೆ. ಆ ಸಿನಿಮಾದ ಹೆಸರು ‘ಮತ್ತೆ ಮದುವೆ’. ಇತ್ತೀಚೆಗೆ ಈ ಸಿನಿಮಾದ ಟೈಟಲ್​ ಅನೌನ್ಸ್​ ಆಗಿತ್ತು. ಈಗ ಟೀಸರ್​ ಕೂಡ ಬಿಡುಗಡೆ ಆಗಿದ್ದು, ಇದು ಅವರ ರಿಯಲ್​ ಲೈಫ್​ ಕಥೆಯನ್ನೇ ಆಧರಿಸಿದ ಸಿನಿಮಾ (Matte Maduve Movie) ಎಂಬುದಕ್ಕೆ ಟೀಸರ್​ನಲ್ಲಿ ಝಲಕ್​ ತೋರಿಸಲಾಗಿದೆ.

ನರೇಶ್​ ತೆಲುಗಿನವರು. ಪವಿತ್ರಾ ಲೋಕೇಶ್​ ಕನ್ನಡದವರು. ‘ತೆಲುಗು ಇಂಡಸ್ಟ್ರಿಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದೀರಲ್ಲ..’ ಎಂಬ ಡೈಲಾಗ್​ನೊಂದಿಗೆ ‘ಮತ್ತೆ ಮದುವೆ’ ಸಿನಿಮಾದ ಟೀಸರ್​ ಆರಂಭ ಆಗುತ್ತದೆ. ನಂತರ ಮಹಿಳೆಯೊಬ್ಬರು ‘ನನಗೆ ಮೋಸ ಆಗಿದೆ. ಹೆಂಡತಿಯನ್ನು ಹೇಗೆ ನೋಡಿಕೊಳ್ಳಬೇಕು ಅಂತ ಗೊತ್ತಿಲ್ಲದ ಮೃಗ ಅವನು’ ಎಂದು ಮಾಧ್ಯಮದ ಮುಂದೆ ಆರೋಪ ಮಾಡುತ್ತಿರುವ ದೃಶ್ಯ ಇದೆ.

ಇದನ್ನೂ ಓದಿ: ‘ಮತ್ತೆ ಮದುವೆ’ ಆದ ಬಳಿಕ ಮನೆ ಎದುರು ರಂಗೋಲಿ ಹಾಕುತ್ತಾ ಕುಳಿತ ಪವಿತ್ರಾ ಲೋಕೇಶ್

ಈ ಸಿನಿಮಾದಲ್ಲಿ ಪವಿತ್ರಾ ಲೋಕೇಶ್​ ಮತ್ತು ನರೇಶ್​ ಅವರು ಜೋಡಿಯಾಗಿ ನಟಿಸಿದ್ದಾರೆ. ರಿಯಲ್​ ಲೈಫ್​ನಲ್ಲಿ ನಡೆದ ಘಟನೆಗಳನ್ನೇ ಈ ಸಿನಿಮಾದಲ್ಲಿ ಮರುಸೃಷ್ಟಿ ಮಾಡಲಾಗಿದೆ. ಮೈಸೂರಿನ ಹೋಟೆಲ್​ನಲ್ಲಿ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಅವರು ಜೊತೆಯಾಗಿ ಇದ್ದಾಗ ರಮ್ಯಾ ಅವರು ದಾಳಿ ಮಾಡಿದ್ದರು. ಆಗ ನರೇಶ್​ ಅವರು ಶಿಳ್ಳೆ ಹಾಕುತ್ತಾ ಪವಿತ್ರಾ ಜೊತೆ ಹೋಟೆಲ್​ ರೂಮ್​ನಿಂದ ಹೊರಗೆ ಬಂದಿದ್ದರು. ಆ ದೃಶ್ಯ ಕೂಡ ‘ಮತ್ತೆ ಮದುವೆ’ ಟೀಸರ್​ನಲ್ಲಿ ಹೈಲೈಟ್​ ಆಗಿದೆ.

ಕನ್ನಡ ಮತ್ತು ತೆಲುಗಿನಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ತೆಲುಗಿನಲ್ಲಿ ‘ಮಳ್ಳಿ ಪೆಳ್ಳಿ’ ಎಂದು ಶೀರ್ಷಿಕೆ ಇಡಲಾಗಿದೆ. ಮೇ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್. ಬಾಲ್ ರೆಡ್ಡಿ ಛಾಯಾಗ್ರಹಣ, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯದ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.

ಇದನ್ನೂ ಓದಿ: Pavitra Lokesh Marriage: ಪವಿತ್ರಾ ಲೋಕೇಶ್​ ತುಟಿಗೆ ಮುತ್ತಿಟ್ಟು ಮದುವೆ ನ್ಯೂಸ್​ ತಿಳಿಸಿದ ನರೇಶ್​; ವಿಡಿಯೋ ವೈರಲ್​

ಜಯ ಕೃಷ್ಣ ಮೂವೀಸ್ ಬ್ಯಾನರ್ ಮೂಲಕ ನರೇಶ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಎಂ.ಎಸ್. ರಾಜು ನಿರ್ದೇಶನ ಮಾಡುತ್ತಿರುವ ಈ ಸಿನಿಮಾ ಒಂದು ಫ್ಯಾಮಿಲಿ ಎಂಟರ್​ಟೇನರ್​ ಎಂದು ಚಿತ್ರತಂಡ ಹೇಳಿಕೊಂಡಿದೆ. ಜಯಸುಧಾ, ಶರತ್ ಬಾಬು, ವನಿತಾ ವಿಜಯಕುಮಾರ್, ಅನನ್ಯಾ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧೂ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ