AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಹೋಟೆಲ್​ನಲ್ಲಿ ಸಿಕ್ಕಿಬಿದ್ದ ಘಟನೆ ಬಗ್ಗೆ ಪ್ರಶ್ನೆ; ಅಪ್​ಸೆಟ್ ಆದ ಪವಿತ್ರಾ ಲೋಕೇಶ್

ನರೇಶ್ ಹಾಗೂ ಪವಿತ್ರಾ ಮೈಸೂರಿನ ಹೋಟೆಲ್​ನಲ್ಲಿ ಒಂದೇ ರೂಮಿನಲ್ಲಿ ಇದ್ದರು ಎಂಬದನ್ನು ತಿಳಿದ ರಮ್ಯಾ, ನೇರವಾಗಿ ಆ ಹೋಟೆಲ್​ಗೆ ಎಂಟ್ರಿ ನೀಡಿದ್ದರು. ಈ ಘಟನೆ ನಡೆಯುತ್ತಿರುವಾಗ ನರೇಶ್​ ವಿಚಿತ್ರವಾಗಿ ಕೇಕೆ ಹಾಕುತ್ತ ಸಂಭ್ರಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on:May 18, 2023 | 8:06 AM

Share

ಪವಿತ್ರಾ ಲೋಕೇಶ್ ಹಾಗೂ ಟಾಲಿವುಡ್ ನಟ ನರೇಶ್ (Naresh) ಅಭಿನಯದ ‘ಮತ್ತೆ ಮದುವೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮೇ 26ರಂದು ಈ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗುತ್ತಿದೆ. ಟ್ರೇಲರ್ ನೋಡಿದ ಅನೇಕರಿಗೆ ಇದು ನರೇಶ್ ಹಾಗೂ ಪವಿತ್ರಾ ಲೋಕೇಶ್ ಬದುಕಿನ ಘಟನೆಗಳ ರೀತಿಯಲ್ಲಿ ಕಾಣಿಸಿದೆ. ‘ಮತ್ತೆ ಮದುವೆ’ ಸಿನಿಮಾದ (Matte Maduve Movie) ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಮೈಸೂರಿನಲ್ಲಿ ಸಿಕ್ಕಿಬಿದ್ದ ಘಟನೆ ಕುರಿತು ಪ್ರಶ್ನೆಗೆ ವೇದಿಕೆ ಮೇಲಿದ್ದ ಪವಿತ್ರಾ ಲೋಕೇಶ್ ಅವರು ಅಪ್​ಸೆಟ್ ಆದಂತೆ ಕಂಡರು.

ಕಳೆದ ವರ್ಷ ನರೇಶ್​ ಮತ್ತು ಅವರ ಪತ್ನಿ ರಮ್ಯಾ ರಘುಪತಿ ಜಗಳ ಅಕ್ಷರಶಃ ಬೀದಿಗೆ ಬಂದಿತ್ತು. ನರೇಶ್​ ಅವರು ನಟಿ ಪವಿತ್ರಾ ಲೋಕೇಶ್​ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ರಮ್ಯಾ ಆರೋಪಿಸಿದ್ದರು. ನರೇಶ್ ಹಾಗೂ ಪವಿತ್ರಾ ಮೈಸೂರಿನ ಹೋಟೆಲ್​ನಲ್ಲಿ ಒಂದೇ ರೂಮಿನಲ್ಲಿ ಇದ್ದರು ಎಂಬದನ್ನು ತಿಳಿದ ರಮ್ಯಾ, ನೇರವಾಗಿ ಆ ಹೋಟೆಲ್​ಗೆ ಎಂಟ್ರಿ ನೀಡಿದ್ದರು. ಈ ವೇಳೆ ಪವಿತ್ರಾ ಲೋಕೇಶ್​ ಮತ್ತು ರಮ್ಯಾ ಮುಖಾಮುಖಿ ಬೈಯ್ದಾಡಿಕೊಂಡರು. ಇಷ್ಟೆಲ್ಲ ಘಟನೆ ನಡೆಯುತ್ತಿರುವಾಗ ನರೇಶ್​ ವಿಚಿತ್ರವಾಗಿ ಕೇಕೆ ಹಾಕುತ್ತ ಸಂಭ್ರಮಿಸಿದ್ದರು.

ಈ ಘಟನೆಯ ವಿಡಿಯೋ ವೈರಲ್​ ಆಗಿತ್ತು. ಈ ಘಟನೆ ಸಿನಿಮಾದಲ್ಲೂ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿತ್ತು. ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಿಮ್ಮ ಜೀವನದಲ್ಲಿ ನಡೆದ ಘಟನೆ ಇಟ್ಟುಕೊಂಡೇ ಸಿನಿಮಾ ಮಾಡಿದ್ದೀರಿ ಅನ್ನೋ ಮಾತಿದೆ. ಹೌದೇ’ ಎಂದು ಕೇಳಲಾಯಿತು. ಇದಕ್ಕೆ ನರೇಶ್ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ನರೇಶ್​-ಪವಿತ್ರಾ ಲೋಕೇಶ್​ ಜೋಡಿಯ ‘ಮತ್ತೆ ಮದುವೆ’ ಬಗ್ಗೆ ಇನ್ನಷ್ಟು ಮಾಹಿತಿ ಬಹಿರಂಗ

‘ನೀವು ಮೈಸೂರಿನ ಘಟನೆ ಬಗ್ಗೆ ಮಾತನಾಡುತ್ತಿದ್ದೀರಿ ಅಲ್ಲವೇ? ಆ ರೀತಿಯ ಹಲವು ಘಟನೆಗಳು ನಡೆದಿವೆ. ಯೂಟ್ಯೂಬ್​ನಲ್ಲಿ ಈ ರೀತಿಯ ನೂರಾರು ವಿಡಿಯೋಗಳು ಲಭ್ಯವಿದೆ. ಸೆಲೆಬ್ರಿಟಿಗಳ ಬಾಳಲ್ಲಿ ಈ ಘಟನೆ ನಡೆದಾಗ ಅದು ಸುದ್ದಿ ಆಗುತ್ತದೆ. ನನ್ನ ಹಾಗೂ ಪವಿತ್ರಾ ಲೋಕೇಶ್ ಜೀವನದಲ್ಲಿ ನಡೆದ ಘಟನೆ ಬಗ್ಗೆ ಹೇಳಬೇಕು ಎಂದು ನಮಗೆ ಇದ್ದಿದ್ದರೆ ಯೂಟ್ಯೂಬ್​ಗೆ ಬಂದು ಹೇಳುತ್ತಿದ್ದೆವು. ಅದಕ್ಕಾಗಿ 15 ಕೋಟಿ ರೂಪಾಯಿ ವ್ಯಯಿಸುತ್ತಿರಲಿಲ್ಲ’ ಎಂದಿದ್ದಾರೆ ನರೇಶ್.

ಮೈಸೂರಿನಲ್ಲಿ ಸಿಕ್ಕಿಬಿದ್ದ ಘಟನೆ ಬಗ್ಗೆ ಪ್ರಶ್ನೆ ಎದುರಾದಾಗ ಪವಿತ್ರಾ ಲೋಕೇಶ್ ಅವರು ಅಪ್​ಸೆಟ್ ಆದಂತೆ ಕಂಡುಬಂದರು. ‘ಮತ್ತೆ ಮದುವೆ’ ಚಿತ್ರವನ್ನು ನರೇಶ್​ ಅವರು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Thu, 18 May 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ