AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಹೋಟೆಲ್​ನಲ್ಲಿ ಸಿಕ್ಕಿಬಿದ್ದ ಘಟನೆ ಬಗ್ಗೆ ಪ್ರಶ್ನೆ; ಅಪ್​ಸೆಟ್ ಆದ ಪವಿತ್ರಾ ಲೋಕೇಶ್

ನರೇಶ್ ಹಾಗೂ ಪವಿತ್ರಾ ಮೈಸೂರಿನ ಹೋಟೆಲ್​ನಲ್ಲಿ ಒಂದೇ ರೂಮಿನಲ್ಲಿ ಇದ್ದರು ಎಂಬದನ್ನು ತಿಳಿದ ರಮ್ಯಾ, ನೇರವಾಗಿ ಆ ಹೋಟೆಲ್​ಗೆ ಎಂಟ್ರಿ ನೀಡಿದ್ದರು. ಈ ಘಟನೆ ನಡೆಯುತ್ತಿರುವಾಗ ನರೇಶ್​ ವಿಚಿತ್ರವಾಗಿ ಕೇಕೆ ಹಾಕುತ್ತ ಸಂಭ್ರಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on:May 18, 2023 | 8:06 AM

Share

ಪವಿತ್ರಾ ಲೋಕೇಶ್ ಹಾಗೂ ಟಾಲಿವುಡ್ ನಟ ನರೇಶ್ (Naresh) ಅಭಿನಯದ ‘ಮತ್ತೆ ಮದುವೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮೇ 26ರಂದು ಈ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗುತ್ತಿದೆ. ಟ್ರೇಲರ್ ನೋಡಿದ ಅನೇಕರಿಗೆ ಇದು ನರೇಶ್ ಹಾಗೂ ಪವಿತ್ರಾ ಲೋಕೇಶ್ ಬದುಕಿನ ಘಟನೆಗಳ ರೀತಿಯಲ್ಲಿ ಕಾಣಿಸಿದೆ. ‘ಮತ್ತೆ ಮದುವೆ’ ಸಿನಿಮಾದ (Matte Maduve Movie) ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಮೈಸೂರಿನಲ್ಲಿ ಸಿಕ್ಕಿಬಿದ್ದ ಘಟನೆ ಕುರಿತು ಪ್ರಶ್ನೆಗೆ ವೇದಿಕೆ ಮೇಲಿದ್ದ ಪವಿತ್ರಾ ಲೋಕೇಶ್ ಅವರು ಅಪ್​ಸೆಟ್ ಆದಂತೆ ಕಂಡರು.

ಕಳೆದ ವರ್ಷ ನರೇಶ್​ ಮತ್ತು ಅವರ ಪತ್ನಿ ರಮ್ಯಾ ರಘುಪತಿ ಜಗಳ ಅಕ್ಷರಶಃ ಬೀದಿಗೆ ಬಂದಿತ್ತು. ನರೇಶ್​ ಅವರು ನಟಿ ಪವಿತ್ರಾ ಲೋಕೇಶ್​ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ರಮ್ಯಾ ಆರೋಪಿಸಿದ್ದರು. ನರೇಶ್ ಹಾಗೂ ಪವಿತ್ರಾ ಮೈಸೂರಿನ ಹೋಟೆಲ್​ನಲ್ಲಿ ಒಂದೇ ರೂಮಿನಲ್ಲಿ ಇದ್ದರು ಎಂಬದನ್ನು ತಿಳಿದ ರಮ್ಯಾ, ನೇರವಾಗಿ ಆ ಹೋಟೆಲ್​ಗೆ ಎಂಟ್ರಿ ನೀಡಿದ್ದರು. ಈ ವೇಳೆ ಪವಿತ್ರಾ ಲೋಕೇಶ್​ ಮತ್ತು ರಮ್ಯಾ ಮುಖಾಮುಖಿ ಬೈಯ್ದಾಡಿಕೊಂಡರು. ಇಷ್ಟೆಲ್ಲ ಘಟನೆ ನಡೆಯುತ್ತಿರುವಾಗ ನರೇಶ್​ ವಿಚಿತ್ರವಾಗಿ ಕೇಕೆ ಹಾಕುತ್ತ ಸಂಭ್ರಮಿಸಿದ್ದರು.

ಈ ಘಟನೆಯ ವಿಡಿಯೋ ವೈರಲ್​ ಆಗಿತ್ತು. ಈ ಘಟನೆ ಸಿನಿಮಾದಲ್ಲೂ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿತ್ತು. ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಿಮ್ಮ ಜೀವನದಲ್ಲಿ ನಡೆದ ಘಟನೆ ಇಟ್ಟುಕೊಂಡೇ ಸಿನಿಮಾ ಮಾಡಿದ್ದೀರಿ ಅನ್ನೋ ಮಾತಿದೆ. ಹೌದೇ’ ಎಂದು ಕೇಳಲಾಯಿತು. ಇದಕ್ಕೆ ನರೇಶ್ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ನರೇಶ್​-ಪವಿತ್ರಾ ಲೋಕೇಶ್​ ಜೋಡಿಯ ‘ಮತ್ತೆ ಮದುವೆ’ ಬಗ್ಗೆ ಇನ್ನಷ್ಟು ಮಾಹಿತಿ ಬಹಿರಂಗ

‘ನೀವು ಮೈಸೂರಿನ ಘಟನೆ ಬಗ್ಗೆ ಮಾತನಾಡುತ್ತಿದ್ದೀರಿ ಅಲ್ಲವೇ? ಆ ರೀತಿಯ ಹಲವು ಘಟನೆಗಳು ನಡೆದಿವೆ. ಯೂಟ್ಯೂಬ್​ನಲ್ಲಿ ಈ ರೀತಿಯ ನೂರಾರು ವಿಡಿಯೋಗಳು ಲಭ್ಯವಿದೆ. ಸೆಲೆಬ್ರಿಟಿಗಳ ಬಾಳಲ್ಲಿ ಈ ಘಟನೆ ನಡೆದಾಗ ಅದು ಸುದ್ದಿ ಆಗುತ್ತದೆ. ನನ್ನ ಹಾಗೂ ಪವಿತ್ರಾ ಲೋಕೇಶ್ ಜೀವನದಲ್ಲಿ ನಡೆದ ಘಟನೆ ಬಗ್ಗೆ ಹೇಳಬೇಕು ಎಂದು ನಮಗೆ ಇದ್ದಿದ್ದರೆ ಯೂಟ್ಯೂಬ್​ಗೆ ಬಂದು ಹೇಳುತ್ತಿದ್ದೆವು. ಅದಕ್ಕಾಗಿ 15 ಕೋಟಿ ರೂಪಾಯಿ ವ್ಯಯಿಸುತ್ತಿರಲಿಲ್ಲ’ ಎಂದಿದ್ದಾರೆ ನರೇಶ್.

ಮೈಸೂರಿನಲ್ಲಿ ಸಿಕ್ಕಿಬಿದ್ದ ಘಟನೆ ಬಗ್ಗೆ ಪ್ರಶ್ನೆ ಎದುರಾದಾಗ ಪವಿತ್ರಾ ಲೋಕೇಶ್ ಅವರು ಅಪ್​ಸೆಟ್ ಆದಂತೆ ಕಂಡುಬಂದರು. ‘ಮತ್ತೆ ಮದುವೆ’ ಚಿತ್ರವನ್ನು ನರೇಶ್​ ಅವರು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Thu, 18 May 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ