AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಹೋಟೆಲ್​ನಲ್ಲಿ ಸಿಕ್ಕಿಬಿದ್ದ ಘಟನೆ ಬಗ್ಗೆ ಪ್ರಶ್ನೆ; ಅಪ್​ಸೆಟ್ ಆದ ಪವಿತ್ರಾ ಲೋಕೇಶ್

ನರೇಶ್ ಹಾಗೂ ಪವಿತ್ರಾ ಮೈಸೂರಿನ ಹೋಟೆಲ್​ನಲ್ಲಿ ಒಂದೇ ರೂಮಿನಲ್ಲಿ ಇದ್ದರು ಎಂಬದನ್ನು ತಿಳಿದ ರಮ್ಯಾ, ನೇರವಾಗಿ ಆ ಹೋಟೆಲ್​ಗೆ ಎಂಟ್ರಿ ನೀಡಿದ್ದರು. ಈ ಘಟನೆ ನಡೆಯುತ್ತಿರುವಾಗ ನರೇಶ್​ ವಿಚಿತ್ರವಾಗಿ ಕೇಕೆ ಹಾಕುತ್ತ ಸಂಭ್ರಮಿಸಿದ್ದರು.

ರಾಜೇಶ್ ದುಗ್ಗುಮನೆ
|

Updated on:May 18, 2023 | 8:06 AM

Share

ಪವಿತ್ರಾ ಲೋಕೇಶ್ ಹಾಗೂ ಟಾಲಿವುಡ್ ನಟ ನರೇಶ್ (Naresh) ಅಭಿನಯದ ‘ಮತ್ತೆ ಮದುವೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಮೇ 26ರಂದು ಈ ಸಿನಿಮಾ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ ಆಗುತ್ತಿದೆ. ಟ್ರೇಲರ್ ನೋಡಿದ ಅನೇಕರಿಗೆ ಇದು ನರೇಶ್ ಹಾಗೂ ಪವಿತ್ರಾ ಲೋಕೇಶ್ ಬದುಕಿನ ಘಟನೆಗಳ ರೀತಿಯಲ್ಲಿ ಕಾಣಿಸಿದೆ. ‘ಮತ್ತೆ ಮದುವೆ’ ಸಿನಿಮಾದ (Matte Maduve Movie) ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಮೈಸೂರಿನಲ್ಲಿ ಸಿಕ್ಕಿಬಿದ್ದ ಘಟನೆ ಕುರಿತು ಪ್ರಶ್ನೆಗೆ ವೇದಿಕೆ ಮೇಲಿದ್ದ ಪವಿತ್ರಾ ಲೋಕೇಶ್ ಅವರು ಅಪ್​ಸೆಟ್ ಆದಂತೆ ಕಂಡರು.

ಕಳೆದ ವರ್ಷ ನರೇಶ್​ ಮತ್ತು ಅವರ ಪತ್ನಿ ರಮ್ಯಾ ರಘುಪತಿ ಜಗಳ ಅಕ್ಷರಶಃ ಬೀದಿಗೆ ಬಂದಿತ್ತು. ನರೇಶ್​ ಅವರು ನಟಿ ಪವಿತ್ರಾ ಲೋಕೇಶ್​ ಜೊತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ರಮ್ಯಾ ಆರೋಪಿಸಿದ್ದರು. ನರೇಶ್ ಹಾಗೂ ಪವಿತ್ರಾ ಮೈಸೂರಿನ ಹೋಟೆಲ್​ನಲ್ಲಿ ಒಂದೇ ರೂಮಿನಲ್ಲಿ ಇದ್ದರು ಎಂಬದನ್ನು ತಿಳಿದ ರಮ್ಯಾ, ನೇರವಾಗಿ ಆ ಹೋಟೆಲ್​ಗೆ ಎಂಟ್ರಿ ನೀಡಿದ್ದರು. ಈ ವೇಳೆ ಪವಿತ್ರಾ ಲೋಕೇಶ್​ ಮತ್ತು ರಮ್ಯಾ ಮುಖಾಮುಖಿ ಬೈಯ್ದಾಡಿಕೊಂಡರು. ಇಷ್ಟೆಲ್ಲ ಘಟನೆ ನಡೆಯುತ್ತಿರುವಾಗ ನರೇಶ್​ ವಿಚಿತ್ರವಾಗಿ ಕೇಕೆ ಹಾಕುತ್ತ ಸಂಭ್ರಮಿಸಿದ್ದರು.

ಈ ಘಟನೆಯ ವಿಡಿಯೋ ವೈರಲ್​ ಆಗಿತ್ತು. ಈ ಘಟನೆ ಸಿನಿಮಾದಲ್ಲೂ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿತ್ತು. ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನಿಮ್ಮ ಜೀವನದಲ್ಲಿ ನಡೆದ ಘಟನೆ ಇಟ್ಟುಕೊಂಡೇ ಸಿನಿಮಾ ಮಾಡಿದ್ದೀರಿ ಅನ್ನೋ ಮಾತಿದೆ. ಹೌದೇ’ ಎಂದು ಕೇಳಲಾಯಿತು. ಇದಕ್ಕೆ ನರೇಶ್ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ನರೇಶ್​-ಪವಿತ್ರಾ ಲೋಕೇಶ್​ ಜೋಡಿಯ ‘ಮತ್ತೆ ಮದುವೆ’ ಬಗ್ಗೆ ಇನ್ನಷ್ಟು ಮಾಹಿತಿ ಬಹಿರಂಗ

‘ನೀವು ಮೈಸೂರಿನ ಘಟನೆ ಬಗ್ಗೆ ಮಾತನಾಡುತ್ತಿದ್ದೀರಿ ಅಲ್ಲವೇ? ಆ ರೀತಿಯ ಹಲವು ಘಟನೆಗಳು ನಡೆದಿವೆ. ಯೂಟ್ಯೂಬ್​ನಲ್ಲಿ ಈ ರೀತಿಯ ನೂರಾರು ವಿಡಿಯೋಗಳು ಲಭ್ಯವಿದೆ. ಸೆಲೆಬ್ರಿಟಿಗಳ ಬಾಳಲ್ಲಿ ಈ ಘಟನೆ ನಡೆದಾಗ ಅದು ಸುದ್ದಿ ಆಗುತ್ತದೆ. ನನ್ನ ಹಾಗೂ ಪವಿತ್ರಾ ಲೋಕೇಶ್ ಜೀವನದಲ್ಲಿ ನಡೆದ ಘಟನೆ ಬಗ್ಗೆ ಹೇಳಬೇಕು ಎಂದು ನಮಗೆ ಇದ್ದಿದ್ದರೆ ಯೂಟ್ಯೂಬ್​ಗೆ ಬಂದು ಹೇಳುತ್ತಿದ್ದೆವು. ಅದಕ್ಕಾಗಿ 15 ಕೋಟಿ ರೂಪಾಯಿ ವ್ಯಯಿಸುತ್ತಿರಲಿಲ್ಲ’ ಎಂದಿದ್ದಾರೆ ನರೇಶ್.

ಮೈಸೂರಿನಲ್ಲಿ ಸಿಕ್ಕಿಬಿದ್ದ ಘಟನೆ ಬಗ್ಗೆ ಪ್ರಶ್ನೆ ಎದುರಾದಾಗ ಪವಿತ್ರಾ ಲೋಕೇಶ್ ಅವರು ಅಪ್​ಸೆಟ್ ಆದಂತೆ ಕಂಡುಬಂದರು. ‘ಮತ್ತೆ ಮದುವೆ’ ಚಿತ್ರವನ್ನು ನರೇಶ್​ ಅವರು ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Thu, 18 May 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ