AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗರಾಜ್ ಭಟ್ ಬರೆದ ಹೊಸ ಹಾಡು ರಿಲೀಸ್ ಮಾಡಿದ ಜಯಂತ ಕಾಯ್ಕಿಣಿ

ವಿ. ಹರಿಕೃಷ್ಣ ಮತ್ತು ಯೋಗರಾಜ್ ಭಟ್ ಅವರದ್ದು ಜನಪ್ರಿಯ ಕಾಂಬಿನೇಷನ್. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ಹೊಸ ಹಾಡು ಬಂದಿದೆ. ‘ಮತ್ತೆ ಮೊದಲಿಂದ’ ಆಲ್ಬಂನ ನಾಲ್ಕನೇ ಹಾಡು ‘ನೀ ಹೋದ ಮೇಲೆ..’ ಬಿಡುಗಡೆ ಆಗಿದೆ. ಈ ಹಾಡನ್ನು ಜಯಂತ ಕಾಯ್ಕಿಣಿ ಅವರು ಬಿಡುಗಡೆ ಮಾಡಿದ್ದಾರೆ.

ಯೋಗರಾಜ್ ಭಟ್ ಬರೆದ ಹೊಸ ಹಾಡು ರಿಲೀಸ್ ಮಾಡಿದ ಜಯಂತ ಕಾಯ್ಕಿಣಿ
Matte Modalinda Album Song Release
ಮದನ್​ ಕುಮಾರ್​
|

Updated on: Jul 16, 2025 | 5:06 PM

Share

ರೇಣುಕಾ ಯೋಗರಾಜ್ ಭಟ್, ಶ್ರೀನಿಧಿ ದರ್ಬೆ, ಶಿಲ್ಪಾ ಪ್ರಸನ್ನ ಅವರು ‘ಮತ್ತೆ ಮೊದಲಿಂದ’ (Matte Modalinda) ಗೀತಗುಚ್ಛವನ್ನು (ಆಲ್ಬಂ) ನಿರ್ಮಾಣ ಮಾಡಿದ್ದಾರೆ. ಇದರಲ್ಲಿ ಒಟ್ಟು ನಾಲ್ಕು ಹಾಡುಗಳು ಇವೆ. ಈಗ ನಾಲ್ಕನೇ ಮತ್ತು ಕೊನೆಯ ಹಾಡನ್ನು ಜಯಂತ ಕಾಯ್ಕಿಣಿ (Jayant Kaikini) ಅವರು ಬಿಡುಗಡೆ ಮಾಡಿ, ಶುಭ ಹಾರೈಸಿದ್ದಾರೆ. ‘ನೀ ಹೋದ ಮೇಲೆ’ (ನೆನಪಿನ ಬಣ್ಣ ಹಸಿರು) ಎಂಬುದು ಈ ಹಾಡಿನ ಶೀರ್ಷಿಕೆ. ಯೋಗರಾಜ್ ಭಟ್ (Yogaraj Bhat) ಅವರು ಬರೆದಿರುವ ಈ ಹಾಡಿಗೆ ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ವಾಸುಕಿ ವೈಭವ್ ಗಾಯನದಲ್ಲಿ ಈ ಹಾಡು ಮೂಡಿಬಂದಿದೆ.

‘ಪಂಚರಂಗಿ’ ಯೂಟ್ಯೂಬ್ ಚಾನೆಲ್ ಮೂಲಕ ‘ನೀ ಹೋದ ಮೇಲೆ’ (ನೆನಪಿನ ಬಣ್ಣ ಹಸಿರು) ಹಾಡು ಬಿಡುಗಡೆ ಆಗಿದೆ. ಈ ಗೀತೆಯಲ್ಲಿ ಸಂಜನ್ ಕಜೆ ಮತ್ತು ಅಂಜಲಿ ಗೌಡ ಅವರು ನಟಿಸಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ಗಡ್ಡ ವಿಜಿ, ‘ಬೆಂಗಳೂರು ಕೆಫೆ’ ಶಿವಾನಂದ್ ಮುಂತಾದವರು ಉಪಸ್ಥಿತರಿದ್ದರು.

ಹಾಡು ಬಿಡುಗಡೆ ಮಾಡಿದ ಬಳಿಕ ಜಯಂತ ಕಾಯ್ಕಿಣಿ ಅವರು ಮಾತನಾಡಿದರು. ‘ಪ್ರೇಮಗೀತೆಗಳಲ್ಲಿ ಹೆಚ್ಚಾಗಿ ಜನಪ್ರಿಯ ಆಗಿರುವುದು ಪ್ರೀತಿ ಕೈ ಕೊಟ್ಟಾಗ ಬಂದಿರುವ ಗೀತೆಗಳು. ಅಂತಹ ಹಾಡುಗಳನ್ನು ಯೋಗರಾಜ್ ಭಟ್ ಅವರು ಬಹಳ ಚೆನ್ನಾಗಿ ಬರೆಯುತ್ತಾರೆ. ಅವುಗಳ ಸಾಲಿಗೆ ಈ ಹಾಡು ಕೂಡ ಸೇರಿದೆ. ವಿ. ಹರಿಕೃಷ್ಣ ಸಂಗೀತ ಸಂಯೋಜನೆ ಮತ್ತು ವಾಸುಕಿ ವೈಭವ್ ಅವರ ಗಾಯನ ಈ ಹಾಡಿಗೆ ಪೂರಕವಾಗಿದೆ. ಕಲಾವಿದರ ನಟನೆ ಕೂಡ ಚೆನ್ನಾಗಿದೆ. 4 ಹಾಡುಗಳನ್ನು 4 ಬಣ್ಣಗಳು ಪ್ರತಿನಿಧಿಸಿರುವುದು ವಿಶೇಷ’ ಎಂದು ಜಯಂತ ಕಾಯ್ಕಿಣಿ ಹೇಳಿದರು.

ಇದನ್ನೂ ಓದಿ
Image
ಹೆವಿ ಕೆಲಸಕ್ಕೆ ನಾಂದಿ; ಅನುರಾಗ್ ಜೊತೆ ಫೋಟೋ ಹಾಕಿ ಹುಳ ಬಿಟ್ಟ ಭಟ್ರು
Image
ಯೋಗರಾಜ್ ಭಟ್ಟರ ಈ ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳುವಂತಿಲ್ಲ
Image
ಪದಗಳಲ್ಲೇ ಆಟ ಆಡೋ ಕವಿ; ಭಟ್ರು ಬರೆದ ಈ ಹಾಡುಗಳನ್ನು ಮಿಸ್ ಮಾಡದೆ ಕೇಳಿ
Image
ಯೋಗರಾಜ್ ಭಟ್ ಜೊತೆ ರಮ್ಯಾ ಹೊಸ ಸಿನಿಮಾ; ಕಡೆಗೂ ಸಿಕ್ತು ಗುಡ್ ನ್ಯೂಸ್

‘ನೀ ಹೋದ ಮೇಲೆ’ ಹಾಡು:

ಯೋಗರಾಜ್ ಭಟ್ ಅವರು ಮಾತನಾಡಿ, ‘ಮತ್ತೆ ಮೊದಲಿಂದ ಗೀತಗುಚ್ಛದಲ್ಲಿ 4 ಪ್ರೇಮಗೀತೆಗಳಿವೆ. ನಾಲ್ಕು ಹಾಡುಗಳನ್ನು ಬಿಳುಪು, ನೀಲಿ, ಕೆಂಪು ಮತ್ತು ಹಸಿರು ಬಣ್ಣಗಳು ಪ್ರತಿನಿಧಿಸುತ್ತದೆ. ಎಲ್ಲ ಹಾಡುಗಳಿಗೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ನಾನೇ 4 ಹಾಡುಗಳನ್ನು ಬರೆದಿದ್ದೇನೆ. 4 ಹಾಡುಗಳಿಗೂ ನಾಲ್ಕು ಹೆಸರಾಂತ ಸಂಗೀತ ನಿರ್ದೇಶಕರು ಸಂಗೀತ ಸಂಯೋಜಿಸಿದ್ದಾರೆ. ಜನಪ್ರಿಯ ಗಾಯಕ, ಗಾಯಕಿಯರು ಹಾಡಿದ್ದಾರೆ. ಈಗ ಬಿಡುಗಡೆ ಆಗಿರುವ ಹಾಡಿನಲ್ಲಿ ಖ್ಯಾತ ಆಯುರ್ವೇದ ವೈದ್ಯ ಗಿರಿಧರ ಕಜೆ ಅವರ ಕುಟುಂಬದ ಸದಸ್ಯ ಸಂಜನ್ ಕಜೆ ಮತ್ತು ಅಂಜಲಿ ಗೌಡ ಅಭಿನಯಿಸಿದ್ದಾರೆ’ ಎಂದರು.

ಇದನ್ನೂ ಓದಿ: ‘ನಿಮಗಿಂತ ಮೂಗೇ ಮೊದಲು ಬರುತ್ತೆ’; ಪೂಜಾ ಗಾಂಧಿಗೆ ನೇರವಾಗಿ ಹೇಳಿದ್ದ ಯೋಗರಾಜ್ ಭಟ್

ಹಾಡು ಬಿಡುಗಡೆ ಮಾಡಿದ ಜಯಂತ ಕಾಯ್ಕಿಣಿ ಅವರಿಗೆ ಯೋಗರಾಜ್ ಭಟ್ ಅವರು ಧನ್ಯವಾದ ತಿಳಿಸಿದರು. ವಾಸುಕಿ ವೈಭವ್ ಅವರು ಮಾತನಾಡಿ, ‘ಯೋಗರಾಜ್ ಭಟ್ ಅವರು ಬರೆದ ಹಾಡನ್ನು ಹಾಡುವುದಕ್ಕೆ ನನಗೆ ಬಹಳ ಖುಷಿಯಾಗುತ್ತದೆ. ಈ ಹಾಡು ಕೂಡ ಮಧುರವಾಗಿದೆ’ ಎಂದರು. ‘ಈ ಹಾಡಿನಲ್ಲಿ ಅಭಿನಯಿಸಿದ್ದು ಬಹಳ ಸಂತೋಷವಾಗಿದೆ’ ಎಂದು ನಟ ಸಂಜನ್ ಕಜೆ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ