AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ದಿನವೂ ಹಣ ಬಾಚಿಕೊಂಡ ‘ಮ್ಯಾಕ್ಸ್’; ಸುದೀಪ್ ಚಿತ್ರಕ್ಕೆ ಕಲೆಕ್ಷನ್ ಹೊಳೆ

Max Movie Collection: ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ಹೆಸರು ಮಾಡಿದೆ. ರಜಾದಿನಗಳಲ್ಲಷ್ಟೇ ಅಲ್ಲ, ವಾರದ ದಿನಗಳಲ್ಲೂ ಉತ್ತಮ ಸಂಗ್ರಹ ಮಾಡುತ್ತಿದೆ. 'ಯುಐ' ಚಿತ್ರದ ಪ್ರದರ್ಶನ ಕಡಿಮೆಯಾಗುತ್ತಿರುವುದರಿಂದ 'ಮ್ಯಾಕ್ಸ್' ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ವಾರದ ದಿನವೂ ಹಣ ಬಾಚಿಕೊಂಡ ‘ಮ್ಯಾಕ್ಸ್’; ಸುದೀಪ್ ಚಿತ್ರಕ್ಕೆ ಕಲೆಕ್ಷನ್ ಹೊಳೆ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 03, 2025 | 10:51 AM

Share

ಕಿಚ್ಚ ಸುದೀಪ್ ಅವರು ವೃತ್ತಿ ಜೀವನದಲ್ಲಿ ಇಷ್ಟು ದೊಡ್ಡ ಯಶಸ್ಸು ಕಂಡು ಅದೆಷ್ಟೋ ವರ್ಷಗಳೇ ಆಗಿ ಹೋಗಿದ್ದವು. ‘ಮ್ಯಾಕ್ಸ್’ ಸಿನಿಮಾ ಅವರ ವೃತ್ತಿ ಜೀವನಕ್ಕೆ ದೊಡ್ಡ ಗೆಲುವನ್ನೇ ತಂದುಕೊಟ್ಟಿದೆ. ಈ ಚಿತ್ರ ರಜಾ ದಿನಗಳಲ್ಲಿ ಮಾತ್ರವಲ್ಲ, ವಾರದ ದಿನವೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಇದು ಸುದೀಪ್ ಖುಷಿಯನ್ನು ಹೆಚ್ಚಿಸಿದೆ. ನಟನಾಗಿ, ನಿರ್ಮಾಪಕನಾಗಿ ಅವರು ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಚಿತ್ರದ ಒಟ್ಟಾರೆ ಗಳಿಕೆ ಬಗ್ಗೆ ಈ ಸ್ಟೋರಿಯಲ್ಲಿ ವಿವರ ಇದೆ.

‘ಮ್ಯಾಕ್ಸ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ 25ರಂದು ತೆರೆಗೆ ಬಂತು. ಈ ಸಿನಿಮಾ ಕರ್ನಾಟಕದಲ್ಲಿ ಕಳೆದ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಪಡೆಯಿತು. ಈಗ 2025ರಲ್ಲೂ ಚಿತ್ರದ ಅಬ್ಬರ ಮುಂದುವರಿದಿದೆ. ಹೊಸ ವರ್ಷಕ್ಕೆ ರಜೆ ಇದ್ದ ಕಾರಣ ಸಿನಿಮಾ 4.62 ಕೋಟಿ ರೂಪಾಯಿ ಗಳಿಸಿತ್ತು. ಜನವರಿ 2ರಂದು ಸಿನಿಮಾ 1.75 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಜನವರಿ 1ಕ್ಕೆ ಹೋಲಿಕೆ ಮಾಡಿದರೆ ಗುರುವಾರದ ಕಲೆಕ್ಷನ್ ಕೊಂಚ ಕಡಿಮೆಯೇ. ಆದರೆ, ವಾರದ ದಿನವೂ ಸಿನಿಮಾ ಸುಮಾರು 2 ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತದೆ ಎಂದರೆ ಅದು ನಿಜಕ್ಕೂ ಖುಷಿಯ ವಿಚಾರ. ಸದ್ಯ ಎಲ್ಲ ಕಡೆಗಳಲ್ಲಿ ‘ಯುಐ’ ಚಿತ್ರದ ಹವಾ ಕಡಿಮೆ ಆಗುತ್ತಿದೆ. ಹೀಗಾಗಿ ಹಲವು ಕಡೆಗಳಲ್ಲಿ ‘ಯುಐ’ ಬದಲು ‘ಮ್ಯಾಕ್ಸ್’ ಪ್ರದರ್ಶನ ಆರಂಭಿಸಿದೆ.

ಕರ್ನಾಟಕದ ಹಲವು ತಾಲೂಕುಗಳಲ್ಲಿ ಒಂದೇ ಥಿಯೇಟರ್​ ಇದೆ. ಅಲ್ಲಿ ಇಷ್ಟು ದಿನ ‘ಯುಐ’ ಪ್ರದರ್ಶನ ಕಾಣುತ್ತಿತ್ತು. ಇಂದಿನಿಂದ (ಜನವರಿ 3) ‘ಯುಐ’ ಬದಲು ‘ಮ್ಯಾಕ್ಸ್’ ಸಿನಿಮಾನ ಪ್ರದರ್ಶನ ಮಾಡಲಾಗುತ್ತಿದೆ. ಹೀಗಾಗಿ ವಾರಂತ್ಯದಲ್ಲಿ ಸಿನಿಮಾ ಮತ್ತಷ್ಟು ಗಳಿಕೆ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಹೊಸ ವರ್ಷದ ಮೊದಲ ದಿನವೇ ದಾಖಲೆಯ ಗಳಿಕೆ ಮಾಡಿದ ‘ಮ್ಯಾಕ್ಸ್’; ಮಂಕಾದ ‘ಯುಐ’

‘ಮ್ಯಾಕ್ಸ್’ ಚಿತ್ರಕ್ಕೆ ಸುದೀಪ್ ಹೀರೋ ಆದರೆ, ಉಗ್ರಂ ಮಂಜು, ಇಳವರಸು, ಸಂಯುಕ್ತಾ ಹೊರನಾಡು ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಚಿತ್ರಕ್ಕೆ ಕಲೈಪ್ಪುಲಿ ಧಾನು ಬಂಡವಾಳ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು