AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರದ ದಿನವೂ ಹಣ ಬಾಚಿಕೊಂಡ ‘ಮ್ಯಾಕ್ಸ್’; ಸುದೀಪ್ ಚಿತ್ರಕ್ಕೆ ಕಲೆಕ್ಷನ್ ಹೊಳೆ

Max Movie Collection: ಕಿಚ್ಚ ಸುದೀಪ್ ನಟನೆಯ 'ಮ್ಯಾಕ್ಸ್' ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಕರ್ನಾಟಕದಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ಹೆಸರು ಮಾಡಿದೆ. ರಜಾದಿನಗಳಲ್ಲಷ್ಟೇ ಅಲ್ಲ, ವಾರದ ದಿನಗಳಲ್ಲೂ ಉತ್ತಮ ಸಂಗ್ರಹ ಮಾಡುತ್ತಿದೆ. 'ಯುಐ' ಚಿತ್ರದ ಪ್ರದರ್ಶನ ಕಡಿಮೆಯಾಗುತ್ತಿರುವುದರಿಂದ 'ಮ್ಯಾಕ್ಸ್' ಚಿತ್ರದ ಗಳಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ವಾರದ ದಿನವೂ ಹಣ ಬಾಚಿಕೊಂಡ ‘ಮ್ಯಾಕ್ಸ್’; ಸುದೀಪ್ ಚಿತ್ರಕ್ಕೆ ಕಲೆಕ್ಷನ್ ಹೊಳೆ
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Jan 03, 2025 | 10:51 AM

ಕಿಚ್ಚ ಸುದೀಪ್ ಅವರು ವೃತ್ತಿ ಜೀವನದಲ್ಲಿ ಇಷ್ಟು ದೊಡ್ಡ ಯಶಸ್ಸು ಕಂಡು ಅದೆಷ್ಟೋ ವರ್ಷಗಳೇ ಆಗಿ ಹೋಗಿದ್ದವು. ‘ಮ್ಯಾಕ್ಸ್’ ಸಿನಿಮಾ ಅವರ ವೃತ್ತಿ ಜೀವನಕ್ಕೆ ದೊಡ್ಡ ಗೆಲುವನ್ನೇ ತಂದುಕೊಟ್ಟಿದೆ. ಈ ಚಿತ್ರ ರಜಾ ದಿನಗಳಲ್ಲಿ ಮಾತ್ರವಲ್ಲ, ವಾರದ ದಿನವೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಇದು ಸುದೀಪ್ ಖುಷಿಯನ್ನು ಹೆಚ್ಚಿಸಿದೆ. ನಟನಾಗಿ, ನಿರ್ಮಾಪಕನಾಗಿ ಅವರು ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಚಿತ್ರದ ಒಟ್ಟಾರೆ ಗಳಿಕೆ ಬಗ್ಗೆ ಈ ಸ್ಟೋರಿಯಲ್ಲಿ ವಿವರ ಇದೆ.

‘ಮ್ಯಾಕ್ಸ್’ ಸಿನಿಮಾ ಕಳೆದ ವರ್ಷ ಡಿಸೆಂಬರ್ 25ರಂದು ತೆರೆಗೆ ಬಂತು. ಈ ಸಿನಿಮಾ ಕರ್ನಾಟಕದಲ್ಲಿ ಕಳೆದ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎನ್ನುವ ಖ್ಯಾತಿ ಪಡೆಯಿತು. ಈಗ 2025ರಲ್ಲೂ ಚಿತ್ರದ ಅಬ್ಬರ ಮುಂದುವರಿದಿದೆ. ಹೊಸ ವರ್ಷಕ್ಕೆ ರಜೆ ಇದ್ದ ಕಾರಣ ಸಿನಿಮಾ 4.62 ಕೋಟಿ ರೂಪಾಯಿ ಗಳಿಸಿತ್ತು. ಜನವರಿ 2ರಂದು ಸಿನಿಮಾ 1.75 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಜನವರಿ 1ಕ್ಕೆ ಹೋಲಿಕೆ ಮಾಡಿದರೆ ಗುರುವಾರದ ಕಲೆಕ್ಷನ್ ಕೊಂಚ ಕಡಿಮೆಯೇ. ಆದರೆ, ವಾರದ ದಿನವೂ ಸಿನಿಮಾ ಸುಮಾರು 2 ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತದೆ ಎಂದರೆ ಅದು ನಿಜಕ್ಕೂ ಖುಷಿಯ ವಿಚಾರ. ಸದ್ಯ ಎಲ್ಲ ಕಡೆಗಳಲ್ಲಿ ‘ಯುಐ’ ಚಿತ್ರದ ಹವಾ ಕಡಿಮೆ ಆಗುತ್ತಿದೆ. ಹೀಗಾಗಿ ಹಲವು ಕಡೆಗಳಲ್ಲಿ ‘ಯುಐ’ ಬದಲು ‘ಮ್ಯಾಕ್ಸ್’ ಪ್ರದರ್ಶನ ಆರಂಭಿಸಿದೆ.

ಕರ್ನಾಟಕದ ಹಲವು ತಾಲೂಕುಗಳಲ್ಲಿ ಒಂದೇ ಥಿಯೇಟರ್​ ಇದೆ. ಅಲ್ಲಿ ಇಷ್ಟು ದಿನ ‘ಯುಐ’ ಪ್ರದರ್ಶನ ಕಾಣುತ್ತಿತ್ತು. ಇಂದಿನಿಂದ (ಜನವರಿ 3) ‘ಯುಐ’ ಬದಲು ‘ಮ್ಯಾಕ್ಸ್’ ಸಿನಿಮಾನ ಪ್ರದರ್ಶನ ಮಾಡಲಾಗುತ್ತಿದೆ. ಹೀಗಾಗಿ ವಾರಂತ್ಯದಲ್ಲಿ ಸಿನಿಮಾ ಮತ್ತಷ್ಟು ಗಳಿಕೆ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಹೊಸ ವರ್ಷದ ಮೊದಲ ದಿನವೇ ದಾಖಲೆಯ ಗಳಿಕೆ ಮಾಡಿದ ‘ಮ್ಯಾಕ್ಸ್’; ಮಂಕಾದ ‘ಯುಐ’

‘ಮ್ಯಾಕ್ಸ್’ ಚಿತ್ರಕ್ಕೆ ಸುದೀಪ್ ಹೀರೋ ಆದರೆ, ಉಗ್ರಂ ಮಂಜು, ಇಳವರಸು, ಸಂಯುಕ್ತಾ ಹೊರನಾಡು ಮೊದಲಾದವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಜಯ್ ಕಾರ್ತಿಕೇಯ ನಿರ್ದೇಶನದ ಈ ಚಿತ್ರಕ್ಕೆ ಕಲೈಪ್ಪುಲಿ ಧಾನು ಬಂಡವಾಳ ಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ