AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಕ್ಸ್’ ಸಿನಿಮಾದಲ್ಲಿ ಹೇಗಿದೆ ಮಂಜು-ಸುದೀಪ್ ಮುಖಾಮುಖಿ? ಹೊಸ ಝಲಕ್ ರಿಲೀಸ್

ಉಗ್ರಂ ಮಂಜು ಹಾಗೂ ಸುದೀಪ್ ಮಧ್ಯೆ ಹಲವು ವರ್ಷಗಳ ಪರಿಚಯ ಇದೆ. ಇಬ್ಬರೂ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಮಂಜು ಸದಾ ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು. ‘ಮ್ಯಾಕ್ಸ್’ ಸಿನಿಮಾದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ.

‘ಮ್ಯಾಕ್ಸ್’ ಸಿನಿಮಾದಲ್ಲಿ ಹೇಗಿದೆ ಮಂಜು-ಸುದೀಪ್ ಮುಖಾಮುಖಿ? ಹೊಸ ಝಲಕ್ ರಿಲೀಸ್
ಮಂಜು-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 07, 2024 | 6:50 AM

Share

ಕಿಚ್ಚ ಸುದೀಪ್ ಅವರ ನಟನೆಯ ‘ಮ್ಯಾಕ್ಸ್’ ಸಿನಿಮಾ ರಿಲೀಸ್​ಗೆ ದಿನಗಣನೆ ಶುರುವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಹೀಗಿರುವಾಗಲೇ ಸಿನಿಮಾಗೆ ಪ್ರಚಾರ ನೀಡುವ ಕೆಲಸ ಕೂಡ ಜೋರಾಗಿದೆ. ಸುದೀಪ್ ಅಭಿಮಾನಿಗಳು ‘ಮ್ಯಾಕ್ಸ್’ ಸಿನಿಮಾದ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಲ್ಲಿ ‘ಉಗ್ರಂ’ ಮಂಜು ಅವರು ನಟಿಸಿದ್ದು, ಈ ಸಿನಿಮಾದ ಝಲಕ್ ರಿಲೀಸ್ ಮಾಡಲಾಗಿದೆ. ತೆರೆಮೇಲೆ ಮಂಜು ಹಾಗೂ ಸುದೀಪ್ ಪರಸ್ಪರ ಮುಖಾಮುಖಿ ಆಗುವ ಸಾಧ್ಯತೆ ದಟ್ಟವಾಗಿದೆ.

ಉಗ್ರಂ ಮಂಜು ಹಾಗೂ ಸುದೀಪ್ ಮಧ್ಯೆ ಹಲವು ವರ್ಷಗಳ ಪರಿಚಯ ಇದೆ. ಇಬ್ಬರೂ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಮಂಜು ಸದಾ ವಿಲನ್ ಪಾತ್ರಗಳ ಮೂಲಕ ಗಮನ ಸೆಳೆದವರು. ‘ಮ್ಯಾಕ್ಸ್’ ಸಿನಿಮಾದಲ್ಲಿ ಅವರು ಪೊಲೀಸ್ ಪಾತ್ರ ಮಾಡಿದ್ದಾರೆ. ಅವರ ಪಾತ್ರ ನೋಡಿದ ಅನೇಕರಿಗೆ ಇವರು ಮಾಡಿರೋದು ನೆಗೆಟಿವ್ ಶೇಡ್​ ಇರುವ ಪೊಲೀಸ್ ಪಾತ್ರ ಎಂಬ ಸೂಚನೆ ಸಿಕ್ಕಿದೆ.

‘ನಿಮ್ಮ ಸಾಹೇಬ್ರು ನಾಳೆ ತಾನೆ ಡ್ಯೂಟಿಗೆ ಜಾಯಿನ್ ಆಗೋದು. ಇವತ್ ಯಾಕೆ ಇಷ್ಟೆಲ್ಲ ಬಿಲ್ಡಪ್’ ಎಂದು ಉಗ್ರಂ ಮಂಜು ಪೊಲೀಸ್ ಪೇದೆ ಬಳಿ ಕೇಳುತ್ತಾರೆ. ಈ ರೀತಿಯಲ್ಲಿ ದೃಶ್ಯ ಇದೆ. ಆ ಬಳಿಕ ಸುದೀಪ್ ಅವರು ಮಾಸ್ ಆಗಿ ಕೆಲವು ಫೈಟ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಶೀಘ್ರವೇ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾಯುತ್ತಾ ಇದ್ದಾರೆ.

ಇದನ್ನೂ ಓದಿ: ‘ಅಮ್ಮನ ಕೊನೆ ಆಸೆ ಈಡೇರಿಸಲಾಗಲಿಲ್ಲ’; ‘ಮ್ಯಾಕ್ಸ್’ ವೇದಿಕೆ ಮೇಲೆ ಸುದೀಪ್ ಭಾವುಕ

‘ಮ್ಯಾಕ್ಸ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗಲಿದೆ. ಸುದೀಪ್ ಜೊತೆ ವರಲಕ್ಷ್ಮಿ ಶರತ್​ಕುಮಾರ್, ಸಂಯುಕ್ತ ಹೊರನಾಡು, ಸುಕ್ರತಾ ವಾಘ್ಲೆ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಲೈಪುಲಿ ಧಾನು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸುದೀಪ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ವಿಕ್ರಾಂತ್ ರೋಣ’ ಚಿತ್ರದಲ್ಲಿ. ಆ ಬಳಿಕ ರಿಲೀಸ್ ಆಗುತ್ತಿರುವ ಸಿನಿಮಾ ಇದಾಗಿರುವುದರಿಂದ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ