AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಮೊದಲ ದಿನವೇ ದಾಖಲೆಯ ಗಳಿಕೆ ಮಾಡಿದ ‘ಮ್ಯಾಕ್ಸ್’; ಮಂಕಾದ ‘ಯುಐ’

‘ಮ್ಯಾಕ್ಸ್’ ಚಿತ್ರ ಹೊಸ ವರ್ಷದಲ್ಲಿ ಅದ್ಭುತ ಗಳಿಕೆ ಮಾಡಿದೆ. ‘ಯುಐ’ ಚಿತ್ರದ ಗಳಿಕೆ ಕಡಿಮೆಯಾಗಿದೆ. ‘ಮ್ಯಾಕ್ಸ್’ ಚಿತ್ರದ ಜನಪ್ರಿಯತೆ ಹೆಚ್ಚಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ಇದರಿಂದಾಗಿ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆಯಾಗಿದೆ. 2024ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಗ್ರಾಸ್ ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದೆ.

ಹೊಸ ವರ್ಷದ ಮೊದಲ ದಿನವೇ ದಾಖಲೆಯ ಗಳಿಕೆ ಮಾಡಿದ ‘ಮ್ಯಾಕ್ಸ್’; ಮಂಕಾದ ‘ಯುಐ’
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Jan 02, 2025 | 10:04 AM

Share

‘ಮ್ಯಾಕ್ಸ್’ ಸಿನಿಮಾದ ಅಬ್ಬರ ಜೋರಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಈ ಚಿತ್ರ ಭರ್ಜರಿ ಗಳಿಕೆ ಮಾಡಿದೆ. ಈ ಚಿತ್ರದ ಅಬ್ಬರದ ಗಳಿಕೆ ಮಧ್ಯೆ ‘ಯುಐ’ ಚಿತ್ರದ ಕಲೆಕ್ಷನ್ ತಗ್ಗಿದೆ. ಮುಂದಿನ ದಿನಗಳಲ್ಲಿ ಕನ್ನಡದಲ್ಲಿ ಯಾವುದೇ ದೊಡ್ಡ ಸಿನಿಮಾಗಳೂ ಇಲ್ಲ. ಇದು ‘ಮ್ಯಾಕ್ಸ್’ ಚಿತ್ರದ ಬಾಕ್ಸ್ ಆಫೀಸ್​ ಗಳಿಕೆ ಏರಿಕೆ ಕಾಣಲು ಸಹಕಾರಿ ಆಗಲಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗಲಿದೆ ಎಂಬ ಕುತೂಹಲ ಮೂಡಿದೆ.

ಸುದೀಪ್ ಅವರು ಕೇವಲ ಆ್ಯಕ್ಷನ್ ಸಿನಿಮಾಗಳ ಮೂಲಕ ಮಿಂಚಿದ್ದು ಕಡಿಮೆ. ಅವರ ಸಿನಿಮಾಗಳಲ್ಲಿ ಹಾಸ್ಯ, ರೊಮ್ಯಾನ್ಸ್ ಎಲ್ಲವೂ ಇರುತ್ತಿತ್ತು. ಆದರೆ, ‘ಮ್ಯಾಕ್ಸ್’ ಚಿತ್ರ ಔಟ್ ಆ್ಯಂಡ್ ಔಟ್ ಮಾಸ್ ಮಸಾಲ ಊಟವನ್ನು ಅಭಿಮಾನಿಗಳಿಗೆ ಉಣಬಡಿಸಿದೆ. ಇದು ಫ್ಯಾನ್ಸ್​ಗೆ ಥ್ರಿಲ್ ನೀಡಿದೆ. ಫ್ಯಾನ್ಸ್ ಮಾತ್ರವಲ್ಲದೆ ಸಿನಿಪ್ರಿಯರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ. ಈ ಕಾರಣದಿಂದಲೇ ಸಿನಿಮಾ ಯಶಸ್ಸು ಕಂಡಿದೆ.

‘ಮ್ಯಾಕ್ಸ್’ ಸಿನಿಮಾ ಮೊದಲ ವಾರ ಅದ್ದೂರಿ ಗಳಿಕೆ ಮಾಡಿತು. 2024ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಗ್ರಾಸ್ ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಯಿತು. 2025ರಲ್ಲೂ ಸಿನಿಮಾ ದಾಖಲೆ ಬರೆಯುವ ಸಾಧ್ಯತೆ ಇದೆ. ಹೊಸ ವರ್ಷದ ಮೊದಲ ದಿನ (ಜನವರಿ 1) ಈ ಚಿತ್ರ 4.15 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 36 ಕೋಟಿ ರೂಪಾಯಿ ಸಮೀಪಿಸಿದೆ ಎಂದು sacnilk ವರದಿ ಮಾಡಿದೆ.

ಇದನ್ನೂ ಓದಿ: ‘ಸರಿಗಮಪ’ ವೇದಿಕೆ ಮೇಲೆ ಸುದೀಪ್​ಗಾಗಿ ಕವನ ಹೇಳಿದ ವಿಜಯ್ ಪ್ರಕಾಶ್; ಆ ಸಾಲುಗಳು ನಿಮಗೂ ಇಷ್ಟ ಆಗುತ್ತವೆ

ಅತ್ತ ಉಪೇಂದ್ರ ನಟನೆಯ ‘ಯುಐ’ ಸಿನಿಮಾದ ಗಳಿಕೆ ಕೊಂಚ ತಗ್ಗಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 30 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಆರಂಭದ ವಾರದಲ್ಲಿ ಉತ್ತಮ ಗಳಿಕೆ ಮಾಡಿದ ಈ ಚಿತ್ರ ಈಗ ಡಲ್ ಕಲೆಕ್ಷನ್ ಮಾಡುತ್ತಿದೆ. ಕೆಲವರಿಗೆ ಈ ಚಿತ್ರ ಇಷ್ಟ ಆಗಿಲ್ಲ. ಬುಕ್​ ಮೈ ಶೋನಲ್ಲಿ ‘ಯುಐ’ ಚಿತ್ರಕ್ಕಿಂತ ‘ಮ್ಯಾಕ್ಸ್’ ಚಿತ್ರಕ್ಕೆ ಹೆಚ್ಚಿನ ರೇಟಿಂಗ್ ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:59 am, Thu, 2 January 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು