AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ

Mayur Patel Car Accident: ನಟ ಮಯೂರ್ ಪಟೇಲ್ ಬೆಂಗಳೂರಿನಲ್ಲಿ ಕುಡಿದು ವಾಹನ ಚಲಾಯಿಸಿ ತಡರಾತ್ರಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ. ತಮ್ಮ ಫಾರ್ಚುನರ್ ಕಾರಿನಲ್ಲಿ ವೇಗವಾಗಿ ಬಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ
ಮಯೂರ್ ಪಟೇಲ್ Image Credit source: Tv9 Kannada And Instagram
ರಾಜೇಶ್ ದುಗ್ಗುಮನೆ
|

Updated on:Jan 29, 2026 | 7:00 AM

Share

ಕನ್ನಡ ಹೀರೋನ (Sandalwood Hero) ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಈ ರೀತಿ ಕಾರು ಚಲಾಯಿಸಿದ್ದು ನಟ ಮಯೂರ್ ಪಟೇಲ್​. ಬೇಕಾಬಿಟ್ಟಿ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್. ಈ ವೇಳೆ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಆಕ್ರೋಶ ಕೇಳಿ ಬಂದಿದೆ.

2000ನೇ ಇಸ್ವಿಯಲ್ಲಿ ಬಂದ ‘ಆಂಧ್ರ ಹೆಂಡತಿ’ ಸಿನಿಮಾ ಮೂಲಕ ಮಯೂರ್ ಪಟೇಲ್ ಚಿತ್ರರಂಗಕ್ಕೆ ಕಾಲಿಟ್ಟರು. 2003ರಲ್ಲಿ ‘ಮಣಿ’ ಹೆಸರಿನ ಸಿನಿಮಾ ಮಾಡಿದರು. ಈ ಚಿತ್ರ ಕೊಂಚ ಗಮನ ಸೆಳೆಯಿತು. ನಂತರ ‘ಉಡೀಸ್’, ‘ಗುನ್ನ’ ಸೇರಿದಂತೆ ಹಲವು ಸಿನಿಮಾ ಮಾಡಿದರು. ಆದರೆ, ಯಾವ ಚಿತ್ರ ಕೂಡ ಹೆಚ್ಚು ಸದ್ದು ಮಾಡಿಲ್ಲ. ಇಷ್ಟು ದಿನ ಅವರ ಹೆಸರು ಹೆಚ್ಚು ಚರ್ಚೆಯಲ್ಲಿ ಇರಲಿಲ್ಲ. ಈಗ ಬೇಡದ ಕಾರಣಕ್ಕೆ ಮಯೂರ್ ಸುದ್ದಿ ಆಗುತ್ತಿದ್ದಾರೆ.

ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ. ಮಯೂರ್ ಕುಡಿದು ಕಾರು ಓಡಿಸುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಶ್ರೀನಿವಾಸ್, ಅಭಿಷೇಕ್​ ಎಂಬುವರ ಕಾರುಗಳು ಹಾಗೂ ಸರ್ಕಾರಿ ವಾಹನ ಜಖಂ ಆಗಿದೆ. ಆಗ ಅಲ್ಲೇ ಇದ್ದವರು ಕಂಟ್ರೋಲ್ ರೂಮ್​ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹೊಯ್ಸಳ ಪೊಲೀಸರು ಮಯೂರ್​ ಪಟೇಲ್​ನನ್ನ ಠಾಣೆಗೆ ಕರೆದೊಯ್ದಿದ್ದಾರೆ. ತಪಾಸಣೆ ವೇಳೆ ಕುಡಿದು ವಾಹನ ಚಲಾಯಿಸಿರುವುದು ಸಾಬೀತಾಗಿದೆ.

ಅಪಘಾತದ ಕುರಿತು ಶ್ರೀನಿವಾಸ್​ ದೂರು ನೀಡಿದ್ದಾರೆ. ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಎಫ್​​ಐಆರ್ ದಾಖಲು ಮಾಡಲಾಗಿದೆ. ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮಯೂರ್ ಪಟೇಲ್ ಕಾರ್ ಸೀಜ್ ಮಾಡಲಾಗಿದೆ. ಅಪಘಾತದ ವೇಳೆ ಮಯೂರ್​ ಪಟೇಲ್ ಕಾರಿಗೆ ಇನ್ಸೂರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ? ಉತ್ತರಿಸಿದ ಹೀರೋ

ಅಪಘಾತ ಆಗುತ್ತಿದ್ದಂತೆ ಕಾರಿನಿಂದ ಇಳಿದ ಮಯೂರ್ ಪಟೇಲ್, ‘ಏನೇ ಇದ್ದರೂ ನಾನು ಮಾಡಿಸಿಕೊಡ್ತೀನಿ’ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

(ವರದಿ : ವಿಕಾಸ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Thu, 29 January 26

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?