AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ

Mayur Patel Car Accident: ನಟ ಮಯೂರ್ ಪಟೇಲ್ ಬೆಂಗಳೂರಿನಲ್ಲಿ ಕುಡಿದು ವಾಹನ ಚಲಾಯಿಸಿ ತಡರಾತ್ರಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ. ತಮ್ಮ ಫಾರ್ಚುನರ್ ಕಾರಿನಲ್ಲಿ ವೇಗವಾಗಿ ಬಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. 

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ಕನ್ನಡ ಹೀರೋನಿಂದ ಸರಣಿ ಅಪಘಾತ
ಮಯೂರ್ ಪಟೇಲ್ Image Credit source: Tv9 Kannada And Instagram
ರಾಜೇಶ್ ದುಗ್ಗುಮನೆ
|

Updated on:Jan 29, 2026 | 7:00 AM

Share

ಕನ್ನಡ ಹೀರೋನ (Sandalwood Hero) ಅಜಾಗರೂಕ ಚಾಲನೆಯಿಂದ ಬೆಂಗಳೂರಲ್ಲಿ ತಡರಾತ್ರಿ ಸರಣಿ ಅಪಘಾತ ನಡೆದಿದೆ. ಈ ರೀತಿ ಕಾರು ಚಲಾಯಿಸಿದ್ದು ನಟ ಮಯೂರ್ ಪಟೇಲ್​. ಬೇಕಾಬಿಟ್ಟಿ ಕುಡಿದು ತಮ್ಮ ಫಾರ್ಚೂರನರ್ ಕಾರನ್ನು ವೇಗವಾಗಿ ಓಡಿಸಿದ್ದಾರೆ ಮಯೂರ್. ಈ ವೇಳೆ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ್ದಾರೆ. ಈ ಸಂಬಂಧ ಮಯೂರ್ ಪಟೇಲ್ ಮೇಲೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಆಕ್ರೋಶ ಕೇಳಿ ಬಂದಿದೆ.

2000ನೇ ಇಸ್ವಿಯಲ್ಲಿ ಬಂದ ‘ಆಂಧ್ರ ಹೆಂಡತಿ’ ಸಿನಿಮಾ ಮೂಲಕ ಮಯೂರ್ ಪಟೇಲ್ ಚಿತ್ರರಂಗಕ್ಕೆ ಕಾಲಿಟ್ಟರು. 2003ರಲ್ಲಿ ‘ಮಣಿ’ ಹೆಸರಿನ ಸಿನಿಮಾ ಮಾಡಿದರು. ಈ ಚಿತ್ರ ಕೊಂಚ ಗಮನ ಸೆಳೆಯಿತು. ನಂತರ ‘ಉಡೀಸ್’, ‘ಗುನ್ನ’ ಸೇರಿದಂತೆ ಹಲವು ಸಿನಿಮಾ ಮಾಡಿದರು. ಆದರೆ, ಯಾವ ಚಿತ್ರ ಕೂಡ ಹೆಚ್ಚು ಸದ್ದು ಮಾಡಿಲ್ಲ. ಇಷ್ಟು ದಿನ ಅವರ ಹೆಸರು ಹೆಚ್ಚು ಚರ್ಚೆಯಲ್ಲಿ ಇರಲಿಲ್ಲ. ಈಗ ಬೇಡದ ಕಾರಣಕ್ಕೆ ಮಯೂರ್ ಸುದ್ದಿ ಆಗುತ್ತಿದ್ದಾರೆ.

ಬೆಂಗಳೂರಿನ ದೊಮ್ಮಲೂರು ಬಳಿಯ ಕಮಾಂಡೋ ಆಸ್ಪತ್ರೆ ಬಳಿ ಸರಣಿ ಅಪಘಾತ ನಡೆದಿದೆ. ಮಯೂರ್ ಕುಡಿದು ಕಾರು ಓಡಿಸುತ್ತಿದ್ದರು. ಅವರ ಕಾರು ಗುದ್ದಿದ ರಭಸಕ್ಕೆ ಶ್ರೀನಿವಾಸ್, ಅಭಿಷೇಕ್​ ಎಂಬುವರ ಕಾರುಗಳು ಹಾಗೂ ಸರ್ಕಾರಿ ವಾಹನ ಜಖಂ ಆಗಿದೆ. ಆಗ ಅಲ್ಲೇ ಇದ್ದವರು ಕಂಟ್ರೋಲ್ ರೂಮ್​ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಹೊಯ್ಸಳ ಪೊಲೀಸರು ಮಯೂರ್​ ಪಟೇಲ್​ನನ್ನ ಠಾಣೆಗೆ ಕರೆದೊಯ್ದಿದ್ದಾರೆ. ತಪಾಸಣೆ ವೇಳೆ ಕುಡಿದು ವಾಹನ ಚಲಾಯಿಸಿರುವುದು ಸಾಬೀತಾಗಿದೆ.

ಅಪಘಾತದ ಕುರಿತು ಶ್ರೀನಿವಾಸ್​ ದೂರು ನೀಡಿದ್ದಾರೆ. ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಎಫ್​​ಐಆರ್ ದಾಖಲು ಮಾಡಲಾಗಿದೆ. ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮಯೂರ್ ಪಟೇಲ್ ಕಾರ್ ಸೀಜ್ ಮಾಡಲಾಗಿದೆ. ಅಪಘಾತದ ವೇಳೆ ಮಯೂರ್​ ಪಟೇಲ್ ಕಾರಿಗೆ ಇನ್ಸೂರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.

ಇದನ್ನೂ ಓದಿ: ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ? ಉತ್ತರಿಸಿದ ಹೀರೋ

ಅಪಘಾತ ಆಗುತ್ತಿದ್ದಂತೆ ಕಾರಿನಿಂದ ಇಳಿದ ಮಯೂರ್ ಪಟೇಲ್, ‘ಏನೇ ಇದ್ದರೂ ನಾನು ಮಾಡಿಸಿಕೊಡ್ತೀನಿ’ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

(ವರದಿ : ವಿಕಾಸ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Thu, 29 January 26

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ