AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕರ್​ ನಾಗ್​ ಹೊಸ ಸಿನಿಮಾ ‘ಅಬ ಜಬ ದಬ’; ಕೌತುಕ ಮೂಡಿಸಿದ ‘ಕನ್ನಡ್​ ಗೊತ್ತಿಲ್ಲ’ ನಿರ್ದೇಶಕ

ಶಂಕರ್​ ನಾಗ್​ ಅವರು ಮೃತಪಟ್ಟು ಅನೇಕ ದಶಕಗಳು ಕಳೆದಿವೆ. ಹೀಗಿರುವಾಗ, ‘ಅಬ ಜಬ ದಬ’ ಸಿನಿಮಾದಲ್ಲಿ  ಶಂಕರ್​ ನಾಗ್​ ನಟಿಸೋದು ಹೇಗೆ? ಈ ಪ್ರಶ್ನೆಗೆ ನಿರ್ದೇಶಕರು ಉತ್ತರ ನೀಡಿಲ್ಲ.

ಶಂಕರ್​ ನಾಗ್​ ಹೊಸ ಸಿನಿಮಾ ‘ಅಬ ಜಬ ದಬ’; ಕೌತುಕ ಮೂಡಿಸಿದ ‘ಕನ್ನಡ್​ ಗೊತ್ತಿಲ್ಲ’ ನಿರ್ದೇಶಕ
ಹೊಸ ಸಿನಿಮಾ ನಿರ್ದೇಶನಕ್ಕೆ ಮುಂದಾದ ಮಯೂರ
TV9 Web
| Edited By: |

Updated on: Dec 09, 2021 | 1:17 PM

Share

ಸ್ಯಾಂಡಲ್​ವುಡ್​ನಲ್ಲಿ ಹೊಸಹೊಸ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ. ಹೊಸ ನಿರ್ದೇಶಕರು, ಹಿರಿಯ ನಿರ್ದೇಶಕರು ಹೊಸ ಪ್ರಯೋಗಗಳನ್ನು ಮಾಡುತ್ತಲೇ ಇರುತ್ತಾರೆ. ‘ಕನ್ನಡ್​ ಗೊತ್ತಿಲ್ಲ’ ಹೆಸರಿನ ಸಿನಿಮಾ ಮಾಡಿ ಮೆಚ್ಚುಗೆ ಪಡೆದುಕೊಂಡಿದ್ದ ನಿರ್ದೇಶಕ ಮಯೂರ ರಾಘವೇಂದ್ರ ಈಗ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಅವರು ಈಗ ‘ಅಬ ಜಬ ದಬ’ ಹೆಸರಿನ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷ ಎಂದರೆ ಈ ಸಿನಿಮಾ ಪೋಸ್ಟರ್​ನಲ್ಲಿ ಕರಾಟೆ ಕಿಂಗ್ ಶಂಕರ್​ ನಾಗ್​ ಇದ್ದಾರೆ ಎಂದು ಉಲ್ಲೇಖ ಮಾಡಿದ್ದಾರೆ. ಈ ವಿಚಾರ ಸಾಕಷ್ಟು ಕೌತುಕ ಮೂಡಿಸಿದೆ.

ಶಂಕರ್​ ನಾಗ್​ ಅವರು ಮೃತಪಟ್ಟು ಅನೇಕ ದಶಕಗಳು ಕಳೆದಿವೆ. ಹೀಗಿರುವಾಗ, ‘ಅಬ ಜಬ ದಬ’ ಸಿನಿಮಾದಲ್ಲಿ  ಶಂಕರ್​ ನಾಗ್​ ನಟಿಸೋದು ಹೇಗೆ? ಈ ಪ್ರಶ್ನೆಯನ್ನು ನಿರ್ದೇಶಕರ ಮುಂದೆ ಇಟ್ಟರೆ ಅವರು ಉತ್ತರ ನೀಡದೆ ರಹಸ್ಯ ಕಾಪಾಡಿಕೊಂಡಿದ್ದಾರೆ. ಹೀಗಾಗಿ, ಸದ್ಯಕ್ಕೆ ಈ ವಿಚಾರವನ್ನು ಅವರು ಬಿಟ್ಟುಕೊಟ್ಟಿಲ್ಲ. ಸಿನಿಮಾದ ಒಳಗೊಂದು ಸಿನಿಮಾದ ಕಥೆ ಇರುವಂತಹ ಕೌತುಕ ಕೂಡ ಅಭಿಮಾನಿಗಳಲ್ಲಿ ಮೂಡಿದೆ. ಈ ಎಲ್ಲಾ ಪ್ರಶ್ನೆಗೆ ನಿರ್ದೇಶಕರ ಕಡೆಯಿಂದಲೇ ಉತ್ತರ ಸಿಗಬೇಕಿದೆ.

‘ಎರಡು ವರ್ಷದ ಹಿಂದೆ, ಕನ್ನಡ ಗೊತ್ತಿಲ್ಲದವರಿಗೆ ಕನ್ನಡ ಕಲಿಸಲು ಹೋಗಿ, ಕನ್ನಡ್ ಗೊತ್ತಿಲ್ಲ ಅಂತ ಬಂದೆವು. ಕನ್ನಡಾನೇ ಮಾತಾಡಿ ಅಂತ ಹೇಳದೆ, ಕನ್ನಡವನ್ನೂ ಮಾತನಾಡಿ ಎಂದು ಹೇಳಿದ ನನಗೆ, ನಿಮ್ಮ ಪ್ರೋತ್ಸಾಹ ಹಾಗೂ ಆಶೀರ್ವಾದದಿಂದ ಯಶಸ್ವಿಗೊಳಿಸಿದಿರಿ. ಇಂದು ನಿಮ್ಮ ಮುಂದೆ ಒಂದು ಹೊಸ ವಿಷಯದೊಂದಿಗೆ ನಾನು ಹಾಗೂ ನನ್ನ ತಂಡ ಬಂದಿದ್ದೇವೆ. ಒಂದು ಹೊಸ ಚಿತ್ರ, ಹೊಸ ಪ್ರಯತ್ನ’ ಎಂದಿದ್ದಾರೆ ಮಯೂರ.

‘ಚಿತ್ರದ ಶೀರ್ಷಿಕೆ ‘ಅಬ ಜಬ ದಬ’. ಇದನ್ನು ಹೊಸ ನಿರ್ಮಾಪಕ ಅನಂತ ಕೃಷ್ಣ ಅವರ ‘ಎಸ್. ರಾಮ್ ಪ್ರೊಡಕ್ಷನ್ಸ್’ ಬ್ಯಾನರ್​​ನಲ್ಲಿ ನಿರ್ಮಿಸಲಾಗುತ್ತಿದೆ. ಚಿತ್ರದ ಶೀರ್ಷಿಕೆಯನ್ನು ಮಂತ್ರಾಲಯದ ರಾಯರ ಸಾನಿಧ್ಯದಲ್ಲಿ ಬಿಡುಗಡೆ ಮಾಡಲಾಗಿದೆ.  ಚಿತ್ರದ ಶೀರ್ಷಿಕೆ ಸದ್ಯ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಹಾಲಿವುಡ್​ ಮಾದರಿಯಲ್ಲೇ ಸ್ಯಾಂಡಲ್​ವುಡ್ ಲೋಗೋವನ್ನು ಬೆಟ್ಟದ ಮೇಲೆ ಬರೆಯಲಾಗಿದೆ ಅನ್ನೋದು ವಿಶೇಷ. ಶೀಘ್ರವೇ ಸಿನಿಮಾದ ಶೂಟಿಂಗ್​ ಆರಂಭಗೊಳ್ಳಲಿದೆ.

ಇದನ್ನೂ ಓದಿ: Samantha: ‘ಪುಷ್ಪ’ ಐಟಮ್​ ಸಾಂಗ್​ನಲ್ಲಿ ಸಮಂತಾ ಹಾಟ್​ ಲುಕ್​ ನೋಡಿ ಫ್ಯಾನ್ಸ್​ ಫಿದಾ

RRR Trailer: ದೃಶ್ಯ ವೈಭವಕ್ಕೆ ಸಾಕ್ಷಿಯಾದ ‘ಆರ್​ಆರ್​ಆರ್​’ ಟ್ರೇಲರ್​; ಕೌತುಕ ಹೆಚ್ಚಿಸಿದ ರಾಜಮೌಳಿ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ